NBA Accreditation: ಬಿ ಎಲ್ ಡಿ ಇ ಎಂಜಿನಿಯರಿಂಗ್ ಕಾಲೇಜಿನ ನಾನಾ ಕೋರ್ಸುಗಳಿಗೆ ಎನ್‌ ಬಿ ಎ ಮಾನ್ಯತೆ

ವಿಜಯಪುರ: ನಗರದ ಪ್ರತಿಷ್ಠಿತ ಬಿ  ಎಲ್ ಡಿ ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನ ನಾನಾ ವಿಭಾಗಗಳಿಗೆ ರಾಷ್ಟ್ರೀಯ ಮಂಡಳಿ ಮಾನ್ಯತೆ(National Board of Accreditation) ದೊರಕಿದೆ. 2022-23, 2023-24, 2024-25ರ ವರ್ಷದ ಎಂಜಿನಿಯರಿಂಗ್ ಪದವಿ ಕೋರ್ಸುಗಳಾದ ಕಂಪ್ಯೂಟರ್ ಸೈನ್ಸ ಎಂಜಿನಿಯರಿಂಗ್, ಸಿವಿಲ್ ಎಂಜಿನಿಯರಿಂಗ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ಮತ್ತು ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗಗಳಿಗೆ ಮೂರು ವರ್ಷದ ಮಾನ್ಯತೆ ದೊರೆತಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ವಿ. ಜಿ. […]

Airport Katti: ವಿಮಾನ ನಿಲ್ದಾಣ ಕಾಮಗಾರಿ ಮಾರ್ಚ ಅಂತ್ಯಕ್ಕೆ ಪೂರ್ಣಗೊಳಿಸಲು ಗಡುವು ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ

ವಿಜಯಪುರ:  ಮುಂಬರುವ ಮಾರ್ಚ್ ಮಾಸಾಂತ್ಯದೊಳಗೆ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸುವಂತೆ ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ. ಡೋಣಿ ನದಿಯ ಪ್ರವಾಹ ಸೇರಿದಂತೆ ಮಳೆಯಿಂದಾದ ಹಾನಿ ವೀಕ್ಷಣೆಗಾಗಿ ವಿಜಯಪುರ ಪ್ರವಾಸದಲ್ಲಿರುವ ಸಚಿವರು ಬುರಣಾಪುರ ಬಳಿ ಇರುವ ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈಗಾಗಲೇ ಪ್ರಗತಿಯಲ್ಲಿರುವ, ಟರ್ಮಿನಲ್ ಕಟ್ಟಡ, ಎಟಿಸಿ […]

Umesh Katti Visit: ಡೊಣಿ ಪ್ರವಾಹ- ಎರಡನೇ ದಿನವೂ ನಾನಾ ಪ್ರದೇಶಗಳಿಗೆ ಸಚಿವ ಉಮೇಶ ಕತ್ತಿ ಭೇಟಿ, ಪರಿಶೀಲನೆ

ವಿಜಯಪುರ: ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಬಾರಿ ಮಳೆಯಿಂದಾಗಿ ಡೋಣಿ ನದಿಯು ತುಂಬಿ ಹರಿದು ಅವಾಂತರ ಸೃಷ್ಟಿಸಿದೆ. ಈ ನದಿಪಾತ್ರವುದ್ದಕ್ಕೂ ಉಂಟಾದ ಅಪಾರ ಹಾನಿ ಪರಿಶೀಲನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಅವರು ಎರಡನೆ ದಿನವೂ ಮುಂದುವರೆಸಿದರು. ಬೆಳಿಗ್ಗೆ ವಿಜಯಪುರದಿಂದ ಪ್ರವಾಸ ಆರಂಭಿಸಿದ ಸಚಿವರು ದೇವರ ಹಿಪ್ಪರಗಿ, ತಾಳಿಕೋಟಿ ಮತ್ತು ಮುದ್ದೇಬಿಹಾಳ ತಾಲೂಕುಗಳಲ್ಲಿ ಸಂಚರಿಸಿ ಬೆಳೆ ಹಾನಿ, ಮನೆ ಹಾನಿಯನ್ನು ಖುದ್ದು ವೀಕ್ಷಣೆ ಮಾಡಿದರು. ಶಾಸಕರಾದ ಸೋಮನಗೌಡ ಬಿ. ಪಾಟೀಲ ಸಾಸನೂರ ಅವರೊಂದಿಗೆ ಮೊದಲಿಗೆ ಸಚಿವರು, ದೇವರ […]