Amrut Mahotsav: ಅಮೃತ ಮಹೋತ್ಸವ: ಪರಿಸರ ಸ್ನೇಹಿ ವಾಹನ ಸೇವೆಗೆ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಚಾಲನೆ

ವಿಜಯಪುರ: 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಹರ್ ಘರ್ ತಿರಂಗಾ ಕಾರ್ಯಕ್ರಮ ವಿಜಯಪುರ ಹೋಟೆಲ್ ಮಯೂರ ಆದಿಲ್ ಶಾಹಿ ವಿಜಯಪುರ ಆವರಣದಲ್ಲಿ ನಡೆಯಿತು.

ಈ ಕಾರ್ಯಕ್ರಮದ ಅಂಗವಾಗಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಐತಿಹಾಸಿಕ ವಿಜಯಪುರ ಮಹಾನಗರಕ್ಕೆ ಪರಿಸರ ಸ್ನೇಹಿ ಹಾಗೂ ಪ್ರವಾಸಿಗರ ಆಪ್ತನಾಗಿ ವಿದ್ಯುತ್ ಕಾರು ಮತ್ತು ಆಟೋ ಸೇವೆಯ ಎಲೆಕ್ಟ್ರಿಕಲ್ ಟ್ಯಾಕ್ಸಿ ಸೇವೆಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರು ಚಾಲನೆ ನೀಡಿದರು.

ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಹರ್ ಘರ್ ತಿರಂಗಾ ಕಾರ್ಯಕ್ರಮಕ್ಕೆ ಡಿಸಿ ಚಾಲನೆ ನೀಡಿದರು

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಹೋಟೆಲ್ ಮಯೂರ ಆದಿಲ್ ಶಾಹಿ ಹಾಗೂ ಸ್ಥಳೀಯ ಇ-ಮೊಬಿಲಿಟಿ ಸಂಸ್ಥೆಯ ಸಹಭಾಗಿತ್ವದೊಂದಿಗೆ ಈ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಮಲ್ಲಿಕಾರ್ಜುನ ಭಜಂತ್ರಿ, ಹೋಟೆಲ್ ಮಯೂರ ಆದಿಲ್ ಶಾಹಿ ವ್ಯವಸ್ಥಾಪಕರಾದ ಸುನಿಲ್‌ಕುಮಾರ್ ಎಸ್., ಪ್ರವಾಸೋದ್ಯಮ ಸಲಹಾ ಸಮಿತಿಯ ಸದಸ್ಯರಾದ ಜಿ.ಎಸ್.ಕಮತರ, ಅಮೀನ್ ಹುಲೂರು, ಇ-ಮೊಬಿಲಿಟಿ ಸಂಸ್ಥೆಯ ಸಿಬ್ಬಂದಿ ವರ್ಗ ಮತ್ತು ಹೋಟೆಲ್ ಮಯೂರ ಆದಿಲ್ ಶಾಹಿ ಘಟಕದ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌