BJP Independence Day: ವಿಜಯಪುರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ 75ನೇ ಸ್ವಾತಂತ್ರ್ಯೋತ್ಸವ- ಧ್ವಜಾರೋಹಣ ಮಾಡಿದ ಆರ್. ಎಸ್. ಪಾಟೀಲ ಕೂಚಬಾಳ

ವಿಜಯಪುರ: ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಧ್ವಜಾರೋಹಣ ನೆರವೇರಿಸಿದರು.  ಬಳಿಕ ಮಾತನಾಡಿದ ಅವರು, ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ತಮ್ಮ ರಕ್ತವನ್ನೇ ಹರಿಸಿದ್ದಾರೆ,  ಅವರೆಲ್ಲರ ತ್ಯಾಗ, ಬಲಿದಾನದ ಫಲವಾಗಿ ನಾವು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ,  ಅವರಿಗೆ ನಾವು ಸದಾ ಋಣಿಯಾಗಿರಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಸಂಸದ ರಮೇಶ ಜಿಗಜಿಣಗಿ, ಕರ್ನಾಟಕ ಸಾವಯವ ಬೀಜ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಮಾಜಿ ಸಚಿವ ಅಪ್ಪು […]

Congress Celebration: ಕಾಂಗ್ರೆಸ್ ಕಚೇರಿಯಲ್ಲಿ ಸ್ವಾತಂತ್ರ್ಯ ದಿಬಾಚರಣೆ- ವೈಜನಾಥ ಕರ್ಪೂರಮಠ ಧ್ವಜಾರೋಹಣ

ವಿಜಯಪುರ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ ರವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಮಹಾತ್ಮಾ ಗಾಂಧೀಜಿ, ಡಾ. ಬಿ. ಆರ್. ಅಂಬೇಡ್ಕರ, ಜವಾಹರಲಾಲ ನೆಹರು ಹಾಗೂ ಇನ್ನೂ ಅನೇಕ ಮಹಾಪುರುಷರು ಈ ದೇಶಕ್ಕಾಗಿ ಮಾಡಿದ ತ್ಯಾಗ ಬಲಿದಾನಗಳಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಇದನ್ನು ಏಕತೆ ಹಾಗೂ ಸಾಮರಸ್ಯದಿಂದ ಕಾಪಾಡಿಕೊಂಡು ಹೋಗಬೇಕು ಎಂದು ಹೇಳಿದರು. ಸ್ವಾತಂತ್ರ್ಯದ ಹೋರಾಟದಲ್ಲಿ ಕಾಂಗ್ರೆಸ್ಸಿನ ಪಾತ್ರ ಪ್ರಮುಖವಾಗಿದೆ. ಇಂದು ಸರಕಾರದ […]

Independence Day Katti: ಸ್ವಾತಂತ್ರ್ಯ ಸಂಗ್ರಾಮದಲ್ಲಿ ವಿಜಯಪುರ ಕೊಡುಗೆ ಅಪಾರ: ಉಮೇಶ ಕತ್ತಿ

ವಿಜಯಪುರ: ಸ್ವಾತಂತ್ರ‍್ಯ ಸಂಗ್ರಾಮದಲ್ಲಿ ವಿಜಯಪುರ ಜಿಲ್ಲೆಯು ಮಹತ್ತರ ಕೊಡುಗೆ ನೀಡಿದೆ ಎಂದು ಅರಣ್ಯ ಹಾಗೂ ಆಹಾರ ನಾಗರಿಕ ಪೂರೈಕೆ ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಉಮೇಶ ಕತ್ತಿ ಹೇಳಿದರು. ವಿಜಯಪುರ ನಗರದಲ್ಲಿ ಜಿಲ್ಲಾಡಳಿತದಿಂದ, ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣದ ನೆರವೇರಿಸಿ ಅವರು ಮಾತನಾಡಿದರು. ನುಡಿದಂತೆ ನಡೆದ ಬಸವಾದಿ ಶರಣರು, ಸಂತರು, ಸೂಫಿಗಳು, ದಾರ್ಶನಿಕರು ಮತ್ತು ಕೆಚ್ಚೆದೆಯ ದೇಶಪ್ರೇಮಿಗಳು ಜನಿಸಿ, ಬಾಳಿ-ಬದುಕಿ, […]