BVVS Celebration: ಬಾಗಲಕೋಟೆ ಹೋಮಿಯೋಪಥಿ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬಾಗಲಕೋಟೆ: ನಗರದ ಬಿ ವಿ ವಿ ಎಸ್ ಹೋಮಿಯೋಪಥೊಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಮಲ್ಲಿಕಾಜು೯ನ ಸಾಸನೂರ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಸದಸ್ಯ ಚಂದ್ರಶೇಖರ ಶೆಟ್ಟರ ಮಾತನಾಡಿದರು. ಪ್ರಾಚಾರ್ಯ ಡಾ. ಅರುಣ ಹೂಲಿ ಸ್ವಾಗತಿಸಿದರು. ಪ್ರಾಧ್ಯಾಪಕ ಡಾ.ರವಿ ಕೋಟೆಣ್ಣವರ ಮಾರ್ಗದಥಶನದಲ್ಲಿ ವಿದ್ಯರ್ಥಿಗಳು ಆಕಷ೯ಕ ಪಥಸಂಚಲನದೊಂದಿಗೆ ಧ್ವಜವಂದನೆ ಮಾಡಿದರು. ಡಾ. ಪ್ರದೀಪ ರೆಡ್ಡಿಯವರ ಮಾರ್ಗದರನದಲ್ಲಿನದಲ್ಲಿ ವೈದ್ಯ ವಿದ್ಯಾರ್ಥಿಗಳು ಮನಮೋಹಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ವಿದ್ಯಾರ್ಥಿನಿ ದಕ್ಷತಾ ಹೊರಟ್ಟಿ ನಿರೂಪಿಸಿದರು. ಉಪನ್ಯಾಕಡಾ. ಮಿಲಿಂದ ಬೆಳಗಾಂವಕರ, ಡಾ. ವಿಜಯಲಕ್ಷ್ಮಿ. […]

Seniors Honour: 75 ವರ್ಷ ಮೇಲ್ಪಟ್ಟ 75 ಜನಸಾಮಾನ್ಯರಿಗೆ 75ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಿನೂತನ ಸನ್ಮಾನ

ವಿಜಯಪುರ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಬಿ. ಎಲ್. ಡಿ. ಇ. ಸಂಸ್ಥೆಯ   ಶ್ರೀ ಸಂಗನಬಸವ ಮಹಾಸ್ವಾಮೀಜಿ ಔಷಧ ಮಹಾವಿದ್ಯಾಲಯ ಮತ್ತು ಸಂಶೋಧನ ಕೇಂದ್ರದ ವತಿಯಿಂದ ಸ್ವಾತಂತ್ರ್ಯ ದಿನವನ್ನು ವಿನೂತನವಾಗಿ ಆಚರಿಸಲಾಯಿತು. 75 ವರ್ಷ ಮೇಲ್ಪಟ್ಟ 75 ಜನ ಹಿರಿಯ ನಾಗರಿಕರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಿ ಗೌರವಿಸುವ ಮೂಲಕ ಅರ್ಥಪೂರ್ಣವಾಗಿ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. 75 ವರ್ಷ ಮೇಲ್ಪಟ್ಟ ನಿವೃತ್ತ ಅಧಿಕಾರಿಗಳು, ಸಿಬ್ಬಂದಿ, ರೈತರು, ಜನಸಾಮಾನ್ಯರನ್ನು ಅದರಲ್ಲೂ 20ಕ್ಕೂ ಹೆಚ್ಚು ಮಹಿಳೆಯರನ್ನು ಗುರುತಿಸಿ ಗೌರವಿಸಿದ್ದು ವಿಶೇಷವಾಗಿತ್ತು. ಸ್ವಾತಂತ್ರ್ಯ […]

DC Office Flag: ಸಾರ್ವಜನಿಕ ಸೇವಾ ಮನೋಭಾವ ಹೊಂದಲು ಅಧಿಕಾರಿ, ಸಿಬ್ಬಂದಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಕರೆ

ವಿಜಯಪುರ: ಅಧಿಕಾರಿಗಳು ಮತ್ತು ಸಿಬ್ಬಂದಿಯು ಸೇವಾ ಮನೋಭಾವದೊಂದಿಗೆ ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಕರೆ ನೀಡಿದ್ದಾರೆ.  ಜಿಲ್ಲಾಡಳಿತ ಭವನದಲ್ಲಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಪ್ರತಿಯೊಬ್ಬರು ಸಹ ಈ ಜಗತ್ತು ಬದಲಾಗಬೇಕು ಎಂದು ಬಯಸುತ್ತಾರೆ. ಹಾಗೆ ಹೇಳುವ ನಾವುಗಳು ನಮ್ಮಿಂದಲೇ ಬದಲಾವಣೆಯಾಗಬೇಕು ಎಂಬುದನ್ನರಿಯಬೇಕು. ಧೈರ್ಯ ಸಾಹಸ ಶಕ್ತಿ ಇರುವ ಕಡೆಗೆ ದೌರ್ಬಲ್ಯ ಸುಳಿಯುವುದಿಲ್ಲ. ಆತ್ಮವಿಶ್ವಾಸವೊಂದಿದ್ದರೆ ಬೆಟ್ಟದಂತಹ ಕಷ್ಟವನ್ನೂ ಎದುರಿಸಬಹುದಾಗಿದೆ ಎಂದ ಜಿಲ್ಲಾಧಿಕಾರಿಗಳು, ಸೇವೆಯೇ ನನ್ನ ಧರ್ಮ, ನನ್ನ ಕರ್ತವ್ಯ ಎಂಬುದನ್ನು ಪ್ರತಿಯೊಬ್ಬರು […]

ZP Flag: ವಿಜಯಪುರ ಜಿಲ್ಲಾ ಪಂಚಾಯಿತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ- ರಾಹುಲ ಶಿಂಧೆ ಧ್ವಜಾರೋಹಣ

ವಿಜಯಪುರ: ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿ. ಪಂ. ಸಿಇಓ ರಾಹುಲ್ ಶಿಂಧೆ ಅವರು ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು. ಜಿ. ಪಂ. ಆವರಣದಲ್ಲಿ ಹಬ್ಬದ ಸಂಭ್ರಮ ಕಂಡು ಬಂದಿತು. ಕಚೇರಿಯ ಮಹಿಳಾ ನೌಕರರು ಬಣ್ಣಬಣ್ಣದ ರಂಗೋಲಿ ಬಿಡಿಸಿದ್ದರು. ಆವರಣದ ಎಲ್ಲ ದಿಕ್ಕುಗಳಲ್ಲಿ ತ್ರಿವರ್ಣದ ಬಲೂನ್‌ಗಳನ್ನು ಅಳವಡಿಸಿ ಕಚೇರಿಯನ್ನು ಸೌಂದರ್ಯೀಕರಣಗೊಳಿಸಲಾಗಿತ್ತು. ಧ್ವಜಾರೋಹಣ ಸಂದರ್ಭದಲ್ಲಿ ತ್ರಿವರ್ಣದ ಬಲೂನ್‌ಗಳನ್ನು ಆಕಾಶದತ್ತ ಹಾರಿಸಿ ಸಂಭ್ರಮಿಸಲಾಯಿತು. ಬಳಿಕ ಮಾತನಾಡಿದ ಅವರು, ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ […]

Indepenence Day Celebrated: ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಗುಣ ನಿಯಂತ್ರಣ ತರಬೇತಿ ಕಟ್ಟಡದಲ್ಲಿ ಸ್ವಾತಂತ್ರ್ಯ ದಿನಾಚರಣೆ

ವಿಜಯಪುರ: ನಗರದ ಸಂಜೀವಿನಿ ಆಸ್ಪತ್ರೆಯ ಹತ್ತಿರ ವಿಜಯಪುರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-50ರಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಗುಣ ನಿಯಂತ್ರಣ ತರಬೇತಿ ಕಟ್ಟಡದ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕರ್ಮ ನಡೆಯಿತು.  ಸಂಸ್ಥೆಯ ಅಧ್ಯಕ್ಷ ವಿಜುಗೌಡ ಎಸ್. ಪಾಟೀಲ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರಯೋಧರು ಹಾಗೂ ಅವರ ಬಲಿದಾನವನ್ನು ಸ್ಮರಿಸಿದರು.  ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯು ರಾಜ್ಯದಲ್ಲಿ ರೈತರಿಗೆ ಪ್ರಮಾಣಿತ ಬಿತ್ತನೆ […]

School Celebration: ಶಾಂತಿನಿಕೇತನ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ವಿಜಯಪುರ: ನಗರದ ಶಾಂತಿನಿಕೇತನ ಶಿಕ್ಷಣ ಸಂಸ್ಥೆಯಲ್ಲಿ 75ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು.  ನಿವೃತ್ತ ಸೈನಿಕ ಸುಭಾಸ ಸಜ್ಜನ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು,  ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹನಿಯರನ್ನು ನಾವೆಲ್ಲರೂ ನೆನೆಯಬೇಕು.  ಎಲ್ಲರೂ ದೇಶ ಸೇವೆಗಾಗಿ ದುಡಿಯಬೇಕು ಎಂದು ಹೇಳಿದರು. ಸಂಸ್ಥೆಯ  ಅಧ್ಯಕ್ಷೆ ಶೀಲಾ ಬಿರಾದಾರ ಮಾತನಾಡಿ, ಪ್ರತಿಯೊಬ್ಬರು ಕುಟುಂಬ, ಪಾಲಕರು, ಸ್ನೇಹಿತರು, ಅಜ್ಜ-ಅಜ್ಜಿ, ಸಮಾಜವನ್ನು ಪ್ರೀತಿಸುವ, ಸ್ನೇಹದಿಂದ ಕಾಣುವ ಗುಣವನ್ನು ಬೆಳೆಸಿಕೊಳ್ಳಬೇಕು.  ವಿದ್ಯಾರ್ಥಿಗಳು ದೇಶಭಕ್ತಿ, ದೇಶಸೇವೆ ಮಾಡುವಂತಹ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು.  ಸೈನಿಕರು ತಮ್ಮ ವೈಯಕ್ತಿಕ ಜೀವನವನ್ನು […]