Indepenence Day Celebrated: ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಗುಣ ನಿಯಂತ್ರಣ ತರಬೇತಿ ಕಟ್ಟಡದಲ್ಲಿ ಸ್ವಾತಂತ್ರ್ಯ ದಿನಾಚರಣೆ

ವಿಜಯಪುರ: ನಗರದ ಸಂಜೀವಿನಿ ಆಸ್ಪತ್ರೆಯ ಹತ್ತಿರ ವಿಜಯಪುರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-50ರಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಗುಣ ನಿಯಂತ್ರಣ ತರಬೇತಿ ಕಟ್ಟಡದ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕರ್ಮ ನಡೆಯಿತು. 

ಸಂಸ್ಥೆಯ ಅಧ್ಯಕ್ಷ ವಿಜುಗೌಡ ಎಸ್. ಪಾಟೀಲ ಅವರು ಧ್ವಜಾರೋಹಣ ನೆರವೇರಿಸಿದರು.

ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಅಧ್ಯಕ್ಷ ವಿಜುಗೌಡ ಪಾಟೀಲ ಧ್ವಜಾರೋಹಣ ನೆರವೇರಿಸಿದರು

ಬಳಿಕ ಮಾತನಾಡಿದ ಅವರು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರಯೋಧರು ಹಾಗೂ ಅವರ ಬಲಿದಾನವನ್ನು ಸ್ಮರಿಸಿದರು.  ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯು ರಾಜ್ಯದಲ್ಲಿ ರೈತರಿಗೆ ಪ್ರಮಾಣಿತ ಬಿತ್ತನೆ ಬೀಜಗಳನ್ನು ಒದಗಿಸುತ್ತಾ ಹಾಗೂ ಉತ್ತಮ ಗುಣಮಟ್ಟ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ.  ಈಗ ಸಾವಯವ ಪ್ರಮಾಣನ ಸೇವೆಯಲ್ಲಿಯೂ ಸಂಸ್ಥೆಯು ಉತ್ತಮ ಕೆಲಸ ನಿರ್ವಹಿಸುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಸಹಾಯಕ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌