BSY Celebration: ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಗೆ ಬಿ ಎಸ್ ವೈ, ಬಿ ಎಲ್ ಸಂತೋಷ ಸೇರ್ಪಡೆ- ಬಸವ ನಾಡಿನಲ್ಲಿ ಎಪಿ ಗ್ರುಪ್ ವತಿಯಿಂದ ಸಂಭ್ರಮಾಚರಣೆ

ವಿಜಯಪುರ: ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಗೆ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ ಅವರನ್ನು ಸೇರ್ಪಡೆ ಮಾಡಿದ ಹಿನ್ನೆಲೆಯಲ್ಲಿ ಬಸವ ನಾಡು ವಿಜಯಪುರ ನಗರದಲ್ಲಿ ಎಪಿ ಗ್ರುಪ್ ವತಿಯಿಂದ ಸಂಭ್ರಮಾಚರಣೆ ನಡೆಸಲಾಯಿತು.  ವಿಜಯಪುರನ ನಗರದ ಶಿವಾಜಿ ಚೌಕಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂದರ್ಭದಲ್ಲಿ ವಿಜಯಪುರ ನಗರದ ಎ ಪಿ ಗ್ರೂಪ್ ವತಿಯಿಂದ ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಎ ಪಿ ಗ್ರೂಪ್ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ , […]

Vision Programme: ಮದಭಾವಿ ಗ್ರಾಮದಲ್ಲಿ ದೂರದೃಷ್ಟಿ ಯೋಜನೆ ಕಾರ್ಯಕ್ರಮ

ವಿಜಯಪುರ: ದೂರದೃಷ್ಠಿ ಯೋಜನೆಯ ಕುರಿತಂತೆ ವಿಜಯಪುರ ತಾಲೂಕಿನ ಮದಭಾವಿ ಗ್ರಾಮದಲ್ಲಿ ಕಾರ್ಯಕ್ರಮ ನಡೆಯಿತು. ಊರಿನ ಮನೆಮನೆಗೆ ಭೇಟಿ ನೀಡುವುದರ ಮೂಲಕ ಮದಭಾವಿ ಗ್ರಾಮದ ಸಾಮಾಜಿಕ ಹಾಗೂ ಸಂಪನ್ಮೂಲ ನಕ್ಷೆ ಹಾಗೂ ಮಾರ್ಗಗಳನ್ನು ರಂಗೋಲಿಯಲ್ಲಿ ಬಿಡಿಸಿ ಜನರಿಗೆ ತಿಳಿಸಲಾಯಿತು. ಬಡತನ ಮುಕ್ತ ಮತ್ತು ಜೀವನೋಪಾಯ ಕೌಶಲ್ಯ ಅಭಿವೃದ್ಧಿ, ಗ್ರಾಮದಲ್ಲಿ ಆರೋಗ್ಯ ಯೋಜನೆಯ ಗುರಿ ನಿಗದಿಪಡಿಸುವಿಕೆ, ಶಿಕ್ಷಣ ವಲಯ, ಮಹಿಳಾ ಸ್ನೇಹಿ ಹಾಗೂ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ ಯೋಜನೆ, ಜಲ ಸಮೃದ್ಧಿ ಗ್ರಾಮ ನೈಸರ್ಗಿಕ ಸಂಪನ್ಮೂಲಗಳ ನಿರ್ವಹಣೆ, ನಿರ್ವಹಣೆಯಲ್ಲಿ […]

MP Jigajinagi: ವಿಜಯಪುರ ಜಿಲ್ಲೆಗೆ ಕೇಂದ್ರ ಸರಕಾರದಿಂದ ಕೋ. 1020 ಕೋ. ಅನುದಾನ- ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ರಸ್ತೆ, ಮೇಲ್ಸೇತುವೆ ಸೇರಿ ಕೇಂದ್ರ ಸರ್ಕಾರದಿಂದ 1020 ಕೋಟಿ ರೂ.ಅನುದಾನವನ್ನು ವಿಜಯಪುರ ಜಿಲ್ಲೆಗೆ ತಮ್ಮ ಆಡಳಿತಾವಧಿಯಲ್ಲಿ ಕೇಂದ್ರ ಸರ್ಕಾರದಿಂದ ಪಡೆದುಕೊಂಡಿದ್ದು, ಇದಕ್ಕಾಗಿ ತಾವು ಮಾನ್ಯ ಪ್ರಧಾನಮಂತ್ರಿಗಳಿಗೆ ಧನ್ಯವಾದಗಳನ್ನು ಹೇಳುವುದಾಗಿ ಸಂಸದರಾದ ರಮೇಶ ಜಿಗಜಿಣಗಿ ಅವರು ತಿಳಿಸಿದ್ದಾರೆ.  ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯ ವ್ಯಾಪ್ತಿಗೆ ಬರುವ ರಾಷ್ಟ್ರೀಯ ಹೆದ್ದಾರಿಯ ಉಪ ವಿಭಾಗದಿಂದ ಹಲವಾರು ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ರಾಷ್ಟ್ರೀಯ ಹೆದ್ದಾರಿ ನಂ.548ಬಿ ವಿಜಯಪುರ ಪ್ರವಾಸಿ ಮಂದಿರ ವೃತ್ತದಿಂದ ತೆಲಸಂಗ ಕ್ರಾಸ್‌ವರೆಗೆ ಅಂದಾಜು ರೂ. 250 ಕೋ. […]

Retired Filicitaion: ವಿಜಯಪುರದ ಸಿಕ್ಯಾಬ್ ನಿವೃತ್ತ ಪ್ರಾಚಾರ್ಯ ಸೇವಾ ನಿವೃತ್ತಿ- ಆತ್ಮೀಯ ಬೀಳ್ಕೊಡುಗೆ

ವಿಜಯಪುರ: ಸ್ಥಳೀಯ ಸಿಕ್ಯಾಬ್ ಸಂಸ್ಥೆಯ ಎ. ಆರ್. ಎಸ್. ಇನಾಮದಾರ ಕಲಾ, ವಿಜ್ಞಾನ, ವಾಣಿಜ್ಯ ಮಹಿಳಾ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಕೇಂದ್ರದ ಪ್ರಾಚಾರ್ಯರಾದ ಡಾ. ಮಹಮ್ಮದ್ ಅಫ್ಜಲ್ ಅವರಿಗೆ ಸೇವಾ ನಿವೃತ್ತಿ ಹಿನ್ನೆಲೆಯಲ್ಲಿ ಕಾಲೇಜಿನ ಆಡಳಿತ ಮಂಡಳಿ ಮತ್ತು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವತಿಯಿಂದ ಆತ್ಮೀಯಾವಾಗಿ ಬೀಳ್ಕೊಡಲಾಯಿತು.  ಕಳೆದ 34 ವರ್ಷಗಳ ಅವಧಿಯಲ್ಲಿ ಡಾ. ಮಹಮ್ಮದ್ ಅಫ್ಜಲ್ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಭೌತಶಾಸ್ತ್ರ ಪ್ರಾಧ್ಯಾಪಕರಾಗಿ, ಮಹಿಳಾ ಪದವಿ ಕಾಲೇಜಿನಲ್ಲಿ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ, ಉಪಪ್ರಾಚಾರ್ಯರಾಗಿ, ಪ್ರಾಚಾರ್ಯರಾಗಿ […]

DC Meeting: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ: ಪೂರ್ವಭಾವಿ ಸಿದ್ಧತಾ ಸಭೆ

ವಿಜಯಪುರ: ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಅ. 20ರಂದು ಬಸವನ ಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ನಡೆಯಲಿದೆ.  ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತಾ ಸಭೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು. ತಹಸೀಲ್ದಾರ ಅವರು ಗ್ರಾಮಕ್ಕೆ ಭೇಟಿ ನೀಡಿ ಸ್ವೀಕರಿಸಿದ ಅರ್ಜಿಗಳ ಬಗ್ಗೆ, ಗ್ರಾಮದಲ್ಲಿ ಸ್ಮಶಾನ ಲಭ್ಯತೆ, ಸರ್ಕಾರಿ ಜಮೀನು ಒತ್ತುವರಿ ಪ್ರಕರಣ, ಶಾಲೆ ಮತ್ತು ಅಂಗನವಾಡಿಗಳ ಸ್ಥಿತಿಗತಿ, ಬಿಪಿಎಲ್ ಕಾರ್ಡುಗಳ ಬಗ್ಗೆ, ಗುಡಿಸಲು ರಹಿತ ವಾಸದ […]

Alamatti Karjol: ಆಲಮಟ್ಟಿ ಪ್ರವಾಹ ನಿಯಂತ್ರಣ- ಸಚಿವ ಕಾರಜೋಳಗೆ ಉಮೇಶ ಕೋಳಕೂರ, ರವೀಂದ್ರ ಲೋಣಿ ಅಭಿನಂದನೆ

ವಿಜಯಪುರ: ಈ ಬಾರಿ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿ ಜಲ ನಿರ್ವಹಣೆ ಉತ್ತಮವಾಗಿದ್ದು, ಕರ್ನಾಟಕವಷ್ಟೇ ಅಲ್ಲ, ಮಹಾರಾಷ್ಟ್ರದಲ್ಲಿಯೂ ಪ್ರವಾಹ ನಿಯಂತ್ರಣ ಸಾಧ್ಯವಾಗಿದೆ. ಇದಕ್ಕೆಲ್ಲ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರ ಮುಂದಾಲೋಚನೆಯೇ ಕಾರಣ ಎಂದು ವಿಜಯಪುರ ಜಿ. ಪಂ. ಮಾಜಿ ಅಧ್ಯಕ್ಷ ಉಮೇಶ ಕೋಳಕೂರ ಮತ್ತು ಮಾಜಿ ಕಾರ್ಪೋರೇಟರ್ ರವೀಂದ್ರ ಲೋಣಿ ಹೇಳಿದ್ದಾರೆ. ವಿಜಯಪುರ ನಗರದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಇಬ್ಬರೂ ಮುಖಂಡರು ಮಾತನಾಡಿದರು. ಮೊದಲಿಗೆ ಮಾತನಾಡಿದ ಉಮೇಶ ಕೋಳಕೂರ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ […]