Dacoits Arrest: ಏಳು ಜನ ಡಕಾಯಿತರನ್ನು ಬಂಧಿಸಿದ ವಿಜಯಪುರ ಗ್ರಾಮೀಣ ಪೊಲೀಸರು

ವಿಜಯಪುರ: ಗ್ರಾಮೀಣ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ರಸ್ತೆ ಮೇಲೆ ಹೋಗುವವರನ್ನು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ ಏಳು ಜನರನ್ನು ಬಂಧಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ವಿಜಯಪುರ ಎಸ್ಪಿ ಡಾ.ಎಚ್.ಡಿ.ಆನಂದಕುಮಾರ, ನಗರದ ಹೊರವಲಯದಲ್ಲಿರುವ ಇಟ್ಟಂಗಿಹಾಳ ರಸ್ತೆ ಎಕ್ಸಲೆಂಟ್ ಶಾಲೆಯ ಹತ್ತಿರ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ಏಳು ಜನರನ್ನು ವಿಜಯಪುರ ಗ್ರಾಮಿಣ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸಿದಾಗ ಈ ಆರೋಪಿತರು ದರೋಡೆ ನಡೆಸಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಬಂಧಿತ ಆರೋಪಿಗಳನ್ನು ಇಟ್ಟಂಗಿಹಾಳ ದೊಡ್ಡಿಯ ವಿಜು ಉರ್ಫ ವಿಜಯ […]

Gokulastami Karjol: ಮೊಮ್ಮಕ್ಕಳೊಂದಿಗೆ ಕೃಷ್ಣ ಜನ್ಮಾಷ್ಟಮಿ ಆಚರಿಸಿದ ಸಚಿವ ಗೋವಿಂದ ಕಾರಜೋಳ

ಬೆಂಗಳೂರು: ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಮ್ಮ ಮೊಮ್ಮಕ್ಕಳೊಂದಿಗೆ ಕೃಷ್ಣ ಜನ್ಮಾಷ್ಟಮಿ ಆಚರಿಸಿದ್ದಾರೆ. ಬೆಂಗಳೂರಿನಲ್ಲಿರುವ ಸಚಿವರ ನಿವಾಸದಲ್ಲಿ ಮೊಮ್ಮಕ್ಕಳಾದ ಓಂ, ಆದ್ಯ ಮತ್ತು ಅನ್ವದಾ ಅವರು ಕೃಷ್ಣ ಮತ್ತು ರಾಧೆಯರ ವೇಷ ಧರಿಸಿದ್ದರು.  ಈ ಸಂದರ್ಭದಲ್ಲಿ ಮೊಮ್ಮಕ್ಕಳೊಂದಿಗೆ ಬೆರೆತ ಸಚಿವ ಗೋವಿಂದ ಕಾರಜೋಳ ಗೋಕುಲಾಷ್ಟಮಿ ಸಂಭ್ರಮದಲ್ಲಿ ಪಾಲ್ಗೋಂಡು ಸಂತಸ ಪಟ್ಟರು. ಕಿರಿಯ ಮೊಮ್ಮಗಳು ಅನ್ವದಾಳನ್ನು ಎತ್ತಿಕೊಂಡು ಉಳದ ಇಬ್ಬರು ಮೊಮ್ಮಕ್ಕಳೊಂದಿಗೆ ಭಾವಚಿತ್ರ ತೆಗೆಸಿಕೊಂಡಿದ್ದು ವಿಶೇಷವಾಗಿತ್ತು.