Doctors Award: ಡಾ. ಎಸ್. ಎಲ್. ಲಕ್ಕಣ್ಣವರ ಎಸ್. ಎಲ್. ಅವರಿಗೆ ಡಾಕ್ಟರ್ಸ್ ಡೆ ಅವಾರ್ಡ್- ಬುಧವಾರ ಬೆಂಗಳೂರಿನಲ್ಲಿ ಪ್ರಧಾನ

ವಿಜಯಪುರ: ಜಿಲ್ಲಾಸ್ಪತ್ರೆಯ ಮುಖ್ಯಸ್ಥ ಡಾ. ಎಸ್. ಎಲ್. ಲಕ್ಕಣ್ಣವರ ಅವರಿಗೆ ಡಾಕ್ಟರ್ಸ್ ಡೆ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನಲ್ಲಿ ವೈದ್ಯರ ದಿನಾಚರಣೆ ಅಂಗವಾಗಿ ಬುಧವಾರ ನಡೆಯಲಿರುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ. ರಾಜ್ಯ ಸರಕಾರ ಡಾ. ಬಿ. ಸಿ ರಾಯ್ ಅವರ ಹೆಸರಿನಲ್ಲಿ ಈ ಪ್ರಶಸ್ತಿಗೆ ನೀಡುತ್ತಿದೆ. ವಿಜಯಪುರ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರಾಗಿ ಡಾ. ಎಸ್. ಎಲ್. ಲಕ್ಕಣ್ಣವರ ಅವರು ಸೇವೆ ಸಲ್ಲಿಸುತ್ತಿದ್ದಾರೆ. ಅವರ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಬುಧವಾರ ಬೆಂಗಳೂರಿನಲ್ಲಿ […]

Sambanni Warn: ಬಿಜೆಪಿಯಿಂದ ಸಾವರ್ಕರ ಹೆಸರಿನಲ್ಲಿ ಶಾಂತಿ ಕದಡುವ ಪ್ರಯತ್ನ ನಡೆದಿದೆ- ಗಂಗಾಧರ ಸಂಬಣ್ಣಿ ಆರೋಪ

ವಿಜಯಪುರ: ಬಿಜೆಪಿ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ಸಾವರ್ಕರ್ ಫೋಟೋಗಳನ್ನು ಅಂಟಿಸುವ ಮೂಲಕ ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ ಎಂದು ಸೇವಾದಳದ ಜಿಲ್ಲಾಧ್ಯಕ್ಷ ಡಾ. ಗಂಗಾಧರ ಸಂಬಣ್ಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬಿಜೆಪಿಯವರು ಜನರ ಗಮನವನ್ನು ಬೇರೆ ಕಡೆ ಸೆಳೆಯಲು ಇಂಥ ಹೀನ ಕೃತ್ಯಗಳನ್ನು ನಡೆಸುತ್ತಿದ್ದಾರೆ. ಜನರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಲು ವಿಫಲರಾಗಿ ಈಗ ಸಾರ್ವಜನಿಕರ ಗಮನವನ್ನು ಬೇರೆ ಕಡೆ ಸೆಳೆಯಲು ಈ ತಂತ್ರ ಅನುಸರಿಸುತ್ತಿದ್ದಾರೆ. ಇದು ಅವರಿಗೆ ಶೋಭ ತರುವುದಿಲ್ಲ. […]

Tahasildar Yatre: 100 ದಿನ, 24 ರಾಜ್ಯ, ಪ್ರತಿ ದಿನ‌ 400 ಕಿ. ಮೀ. ಬೈಕ್ ಯಾತ್ರೆ- ಹುಬ್ಬಳ್ಳಿ ತಹಸೀಲ್ದಾರಗೆ ಬಸವ ನಾಡಿನಲ್ಲಿ ಸ್ವಾಗತಿಸಿದ ಗಣ್ಯರು

ವಿಜಯಪುರ: ಹುಬ್ಬಳ್ಳಿಯ ತಹಸೀಲ್ದಾರ ಶಶಿಧರ ಮಾಡ್ಯಾಳ ವಿನೂತನ ಯೋಜನೆಯಡಿ 100 ದಿನಗಳ ಬೈಕ್ ಯಾತ್ರೆ ಕೈಗೊಂಡಿದ್ದಾರೆ. ಬಸವಣ್ಣನವರ ಜನ್ಮಸ್ಥಳ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಿಂದ ಆರಂಭವಾದ ಈ ಯಾತ್ರೆಗೆ ವಿಜಯಪುರದಲ್ಲಿ ಉದ್ಯಮಿ ಬಾಬುಗೌಡ ಬಿರಾದಾರ ಸೇರಿದಂತೆ ನಾನಾ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಕಾರ್ಯಕ್ರಮ ಆಯೋಜಿಸಿ ಸ್ವಾಗತ ಕೋರಿ ಶುಭ ಹಾರೈಸಿದರು. ವಿಜಯಪುರ ನಗರದ ಹೊಟೇಲ್ ಮಧುವನ ಇಂಟರ ನ್ಯಾಶನಲ್ ಗೆ ಆಗಮಿಸಿದ ಶಶಿಧರ ಮಾಡ್ಯಾಳ ಮತ್ತು ಅವರ ಸ್ನೇಹಿತ ವಿಶ್ವ ಧಢೇಸೂರ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಸನ್ಮಾನಿಸಿ ಗೌರವಿಸಿದರು. […]

Election Contest: ಟಿಕೆಟ್ ನೀಡದಿದ್ದರೂ ಚುನಾವಣೆಗೆ ಸ್ಪರ್ಧಿಸುವೆ- ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ

ವಿಜಯಪುರ: ಬಿಜೆಪಿಯಿಂದ ಟಿಕೆಟ್ ನೀಡದಿದ್ದರೂ ಮುಂಬರುಚ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಮಾಜಿ ಸಚಿವ ಮತ್ತು ಬಿಜೆಪಿ ಹಿರಿಯ ಮುಖಂಡ ಅಪ್ಪು ಪಟ್ಟಣಶೆಟ್ಟಿ ಸ್ಪಷ್ಟಪಡಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಕಳೆದ 30 ವರ್ಷಗಳಿಂದ ಪಕ್ಷಕ್ಕಾಗಿ ಕೆಲಸ ಮಾಡುತ್ತಿರುವೆ. ಸಾರ್ವಜನಿಕರ ಸಮಸ್ಯೆ, ಗಣೆಶೋತ್ಸವದ ಹೋರಾಟ, ಪರಿಸರ ಕಾಳಜಿಯ ಹೋರಾಟಗಳು, ಜಾತ್ರಾ ಮಹೋತ್ಸವದ ವಿಚಾರವಾಗಿ ನಡೆದ ಎಲ್ಲ ಹೋರಾಟಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡಿರುವೆ‌ ಎಂದು ಅವರು ತಿಳಿಸಿದರು. ಕಳೆದ ಬಾರಿ ನನಗೆ ಬಿಜೆಪಿಯಿಂದ ಟಿಕೇಟ್ ಕೊಡಲಿಲ್ಲ. ವಿಜಯಪುರ ನಗರ […]

Egg Throwing Protest: ಸಿದ್ಧರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ- ನಾನಾ ಸಂಘಟನೆಗಳಿಂದ ಪ್ರತಿಭಟನೆ

ವಿಜಯಪುರ: ಮಾಜಿ ಸಿಎಂ ಎಸ್. ಸಿದ್ಧರಾಮಯ್ಯ ಅವರ ವಾಹನದ ಮೇಲೆ ಮೊಟ್ಟೆ ಎಸೆತ ಪ್ರಕರಣ ಖಂಡಿಸಿ ವಿಜಯಪುರ ನಗರದಲ್ಲಿ ನಾನಾ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಹಾಲುಮತ ಸಮಾಜದಿಂದ ಪ್ರತಿಭಟನೆ ಕೊಡಗು ಜಿಲ್ಲೆಯಲ್ಲಿ ವಿಧಾನ ಸಭೆ ಪ್ರತಿಪಕ್ಷದ ನಾಯಕ ಎಸ್. ಸಿದ್ಧಾರಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣವನ್ನು ಖಂಡಿಸಿ ವಿಜಯಪುರ ಜಿಲ್ಲಾ ಹಾಲುಮತ ಸಂಘ ಹಾಗೂ ವಿಜಯಪುರ ಜಿಲ್ಲಾ ಕುರುಬರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ಕಾರ್ಯಕರ್ತರು ನಡೆಸಿದ ಈ ಕೃತ್ಯ ಖಂಡನೀಯ.  […]

Drought Elected: ಬರಗಾಲ ನಿವಾರಣಾ ಸಹಕಾರ ಸಂಘದ ಅದ್ಯಕ್ಷರಾಗಿ ಗೂಳಪ್ಪ ಶೆಟಗಾರ ಪುನರಾಯ್ಜೆ- ಉಳಿದ ಪದಾಧಿಕಾರಿಗಳ ಮಾಹಿತಿ ಇಲ್ಲಿದೆ

ವಿಜಯಪುರ: ಜಿಲ್ಲಾ ಬರಗಾಲ ನಿವಾರಣಾ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಎಲ್ಲ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿಯ ಸದಸ್ಯರಾಗಿ ಬಸನಗೌಡ ಅ. ಪಾಟೀಲ, ಗೂಳಪ್ಪ ಸಿ. ಶೆಟಗಾರ, ರಮೇಶ, ಆಳೂರ, ರಾಜೇಂದ್ರ ಮ. ಪಾಟೀಲ, ರಾಜಶೇಖರ ವಿ. ಗಚ್ಚಿನಮಠ, ಲಕ್ಷ್ಮಣ ಯ. ಇಂಡಿ ಶರಣಗೌಡ ಬಾ, ಪಾಟೀಲ, ಸಂಗನಸಿಂಗ ಗು. ಹಜೇರಿ, ರತ್ನಮಾಲಾ ಸು. ಅಕ್ಕಿ, ಶಿವಕ್ಕ ಪ್ರ. ಕುಡಚಿ, ನಂದಕಿಶೋರ ರಾ. ರಾಠೋಡ, ಬಸವರಾಜ ಸಂ. ಬಂಡಿ, ಸಂಜೀವ ಬ. ಯಲದಿ, ಸಿದ್ರಾಮಪ್ಪ ದು. […]