Pinchani Adalat: ಆ. 29ರಂದು ತಿಕೋಟಾ, ಆ. 30ರಂದು ಬಬಲೇಶ್ವರದಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ

ವಿಜಯಪುರ: ಬಬಲೇಶ್ವರ ಮತಕ್ಷೇತ್ರದ ತಿಕೋಟಾ ಮತ್ತು ಬಬಲೇಶ್ವರಗಳಲ್ಲಿ ಪಿಂಚಣಿ ಅದಾಲತ ಕಾರ್ಯಕ್ರಮ ನಡೆಯಲಿದೆ.

ಆ. 29 ರಂದು ಸೋಮವಾರ ತಿಕೋಟಾದಲ್ಲಿ ಪಿಂಚಣಿ ಅದಾಲತ್ ನಡೆಯಲಿದೆ. ಅಂದು ತಿಕೋಟಾ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ಬೆ. 11ರಿಂದ ಪಿಂಚಣಿ ಅದಾಲತ್ ನಡೆಯಲಿದೆ.

ಅದೇ ರೀತಿ, ಮಾ. 30ರಂದು ಬಬಲೇಶ್ವರ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಪಿಂಚಣಿ ಅದಾಲತ್ ನಡೆಯಲಿದೆ. ಅಂದು ಬೆ. 11 ರಿಂದ ಈ ಕಾರ್ಯಕ್ರಮ ನಡೆಯಲಿದೆ‌

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರು ಮತ್ತು ಬಬಲೇಶ್ವರ ಮತಕ್ಷೇತ್ರದ ಶಾಸಕರಾದ ಎಂ. ಬಿ. ಪಾಟೀಲ ಅವರ ಸೂಚನೆಯಂತೆ ಈ ಪಿಂಚಣಿ ಅದಾಲತ ಕಾರ್ಯಕ್ರಮ ನಡೆಯಲಿದೆ. ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದು ಪಿಂಚಣಿದಾರರಿಂದ ಕುಂದು-ಕೊರತೆ ಆಲಿಸಿ ಪರಿಹಾರ ಒದಗಿಸಲಿದ್ದಾರೆ.

ಪಿಂಚಣಿ ಅದಾಲತನಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ಫಲಾನುಭವಿಗಳು ಮತ್ತು ಹೊಸದಾಗಿ ಅರ್ಜಿಗಳನ್ನು ಸಲ್ಲಿಸಲು ಬಯಸುವವರು ಬಬಲೇಶ್ವರ ಶಾಸಕರ ಕಚೇರಿಯಿಂದ ಅರ್ಜಿಗಳನ್ನು ಉಚಿತವಾಗಿ ಪಡೆಯಬಹುದಾಗಿದೆ.

ಪಿಂಚಣಿ ಅದಾಲತ ಕುರಿತು ಎರಡೂ ಪಟ್ಟಣಗಳಲ್ಲಿ ಜನರಿಗೆ ಮಾಹಿತಿ ನೀಡಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಅರ್ಹ ಫಲಾನುಭವಿಗಳು ನಿಗದಿತ ದಿನಾಂಕಗಳಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯೋಜನೆಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಬಬಲೇಶ್ವರ ಶಾಸಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

ಹೊಸ ಪೋಸ್ಟ್‌