Double Engine Modi: ಡಬಲ್ ಎಂಜಿನ್ ಸರಕಾರದಿಂದ ರಾಜ್ಯದ ಜನತೆಯ ಆಶೋತ್ತರಗಳಿಗೆ ಸ್ಪಂದನೆ: ನರೇಂದ್ರ ಮೋದಿ

ಮಂಗಳೂರು: ಕೇಂದ್ರ ಮತ್ರು ರಾಜ್ಯದಲ್ಲಿರುವ ಡಬಲ್ ಎಂಜಿನ್ ಸರಕಾರದ ಮೂಲಕ ರಾಜ್ಯದ ಜನತೆಯ ಆಶೋತ್ತರಗಳನ್ನು ಈಡೇರಿಸಲು ಸಾಧ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. ಮಂಗಳೂರಿನಲ್ಲಿ ಇಲ್ಲಿನ ಗೋಲ್ಡಫಿಂಚ್ ಮೈದಾನದಲ್ಲಿ ರೂ. 3800 ಕೋ. ಮೊತ್ತದ ಎಂಟು ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸವನ್ನು ನೆರವೇರಿಸಿ ಅವರು ಮಾತನಾಡಿದರು. ಕಳೆದ ಎಂಟು ವರ್ಷಗಳಲ್ಲಿ ಮೂಲಸೌಕರ್ಯ ಕ್ಷೇತ್ರದಲ್ಲಿ ಮಾಡಲಾಗಿರುವ ಪ್ರಗತಿಯಲ್ಲಿ ದೊಡ್ಡ ಪಾಲು ಕರ್ನಾಟಕಕ್ಕೆ ಲಭಿಸಿದೆ. ಸಾಗರ ಮಾಲಾ ಯೋಜನೆ, ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ, ರೈಲ್ವೇ ಹಳಿಗಳ ವಿದ್ಯುದ್ದೀಕರಣ […]

Ganesh Immerision:l DC: ಸೆ.4ರಿಂದ ಗಣಪತಿ ವಿಗ್ರಹ ವಿಸರ್ಜನೆ- ತಾತ್ಕಾಲಿಕ ಹೊಂಡಗಳ ನಿರ್ಮಾಣ ವ್ಯವಸ್ಥೆ ಪರಿಶೀಲಿಸಿದ ಜಿಲ್ಲಾಧಿಕಾರಿ

ವಿಜಯಪುರ: ಸೆ. 4, 6, 8 ಮತ್ತು 10ರಂದು ಗಣೇಶ ವಿಗ್ರಹಗಳ ವಿಸರ್ಜನೆ ನಡೆಯುವ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ನಗರದ ನಾನಾ ಕಡೆ ಸಂಚರಿಸಿ, ತಾತ್ಕಾಲಿಕ ಹೊಂಡ ನಿರ್ಮಾಣದ ವ್ಯವಸ್ಥೆಯನ್ನು ಪರಿಶೀಲಿಸಿದರು. ಮಹಾನಗರ ಪಾಲಿಕೆಯ ಆಯುಕ್ತ ವಿಜಯಕುಮಾರ ಮೆಕ್ಕಳಕೆ ಅವರೊಂದಿಗೆ ನಗರದ ವಾರ್ಡ 31ರಲ್ಲಿನ ತಾಜಬಾವಡಿ ಸೇರಿದಂತೆ ನಾನಾ ಕಡೆ ತೆರಳಿ, ಮಹಾನಗರ ಪಾಲಿಕೆಯಿಂದ ತಾತ್ಕಾಲಿಕವಾಗಿ ನಿರ್ಮಾಣ ಮಾಡಿದ ಹೊಂಡಗಳ ಹಾಗೂ ಸಂಚಾರಿ ಗಣೇಶ ಮೂರ್ತಿ ವಿಸರ್ಜನೆ ವಾಹನ ವ್ಯವಸ್ಥೆಯ ಸಮಗ್ರ ಮಾಹಿತಿ […]