Water Karjol: ಬಸವ ನಾಡು ವಿಜಯಪುರ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸರಕಾರ ಬದ್ಧ: ಗೋವಿಂದ ಕಾರಜೋಳ

ಬೆಂಗಳೂರು; ಬರಪೀಡಿತ ವಿಜಯಪುರ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಸರಕಾರ ಬದ್ಧವಾಗಿದೆ. ಆ ಕೆಲಸವನ್ನು ನಾವು ಮಾಡುತ್ತಿದ್ದೇವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಬೆಂಗಳೂರಿನಲ್ಲಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ವಿಜಯಪುರ ಜಿಲ್ಲೆಯ ಇಂಡಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆ 2006ರಲ್ಲಿ ಪ್ರಾರಂಭವಾಗಿದೆ. 2815 ಎಚ್‌ಪಿ ಸಾಮರ್ಥ್ಯದ ಒಟ್ಟು ಎಂಟು ಪಂಪ್‌ಗಳನ್ನ ಹಾಕಿದ್ದೇವು. ಅದರಲ್ಲಿ ಐದು ಪಂಪ್‌ಗಳು 2015-16 ರಲ್ಲಿಯೇ […]

POCSO Workshop: ಮಾಧ್ಯಮ ಪ್ರತಿನಿಧಿಗಳಿಗೆ ಪೋಕ್ಸೊ, ಜೆಜೆ ಕಾಯಿದೆ ಕುರಿತು ಕಾರ್ಯಾಗಾರ- ನ್ಯಾ. ವೆಂಕಣ್ಣ ಹೊಸಮನಿ ಹೇಳಿದ್ದೇನು ಗೊತ್ತಾ?

ವಿಜಯಪುರ : ಪೊಕ್ಸೊ ಮತ್ತು ಜೆಜೆ ಕಾಯಿದೆ ಕುರಿತು ಮಾಧ್ಯಮ ಪ್ರತಿನಿಧಿಗಳಿಗಾಗಿ ಕಾರ್ಯಾಗಾರ ನಗರದಲ್ಲಿ ನಡೆಯಿತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಚಿಲ್ಡ್ರನ್ ಆಫ್ ಇಂಡಿಯಾ ಫೌಂಡೇಶನ್ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕದ ಸಹಯೋಗದಲ್ಲಿ ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಾಗಾರವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವೆಂಕಣ್ಣ ಬಿ. ಹೊಸಮನಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಅಪ್ರಾಪ್ತ ಮಕ್ಕಳ ಮೇಲೆ ನಡೆಯುವ […]