Drugs Seize: ಬೆಂಗಳೂರಿನಲ್ಲಿ ಅಬಕಾರಿ ದಾಳಿ- ರೂ. 1. 40 ಲಕ್ಷ ಮೌಲ್ಯದ ಮಾದಕ ದ್ರವ್ಯ ವಶ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಧಾಳಿ ನಡೆಸಿ ರೂ. 1.40 ಲಕ್ಷ ಮೌಲ್ಯದ ಒಣಗಿದ ಗಾಂಜಾ ವಶಪಡಿಸಿಕೊಂಡಿದ್ದಾರೆ. ಅಬಕಾರಿ ಜಂಟಿ ಆಯುಕ್ತ ಎ. ಎಲ್. ನಾಗೇಶ ಮತ್ತು ಉಪಾಯುಕ್ತ ವೀರಣ್ಣ ಬಾಗೇವಾಡಿ ಮಾರ್ಗದರ್ಶನದಲ್ಲಿ ಮಹದೇವಪುರ ವಲಯ ವ್ಯಾಪ್ತಿಯ ಅಬಕಾರಿ ಇನ್ಸಪೆಕಕ್ಟರ್ ಎ. ಎ. ಮುಜಾವರ ಮತ್ತು ಸಿಬ್ಬಂದಿ ಕುಂದಲಹಳ್ಳಿ ಗೇಟ್ ಹತ್ತಿರ ಧಾಳಿ ನಡೆಸಿದ್ದಾರೆ.  ಈ ಸಂದರ್ಭದಲ್ಲಿ ಕೇರಳ ಮೂಲಕ ಆಲಪ್ಪುಳ ಮೂಲದ ಆರೋಪಿ ಸಿಬಿ ಕೆ. ಜೆ. ಎಂಬಾತನನ್ನು ಬಂಧಿಸಲಾಗಿದೆ. ಅಲ್ಲದೇ, ಆರೋಪಿ […]

Rabis Day: ರೇಬಿಸ್ ತಡೆಯಲು ಸಾಕುಪ್ರಾಣಿಗಳಿಗೆ ಲಸಿಕೆ ಹಾಕಿಸಬೇಕು- ನಾಯಿ ಕಡಿತಕ್ಕೆ ಒಳಗಾದವರು ಸೂಕ್ತ ಚಿಕಿತ್ಸೆ ಪಡೆಯಬೇಕು- ಡಾ. ಮಂಜುನಾಥ ಕೋಟೆಣ್ಣವರ

ವಿಜಯಪುರ: ಮಾರಕ ರೇಬಿಸ್ ರೋಗ ತಡೆಯಲು ಸಾಕು ಪ್ರಾಣಿಗಳಿಗೆ ರೇಬಿಸ್ ಲಸಿಕೆ ಹಾಕಿಸಬೇಕು ಮತ್ತು ಹುಚ್ಚು ನಾಯಿ ಕಡಿತಕ್ಕೆ ಒಳಗಾದವರು ಯಾವುದೇ ಮೂಢ ನಂಬಿಕೆಗಳಿಗೆ ಅವಕಾಶ ನೀಡದೆ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು ಎಂದು ಬಿ ಎಲ್ ಡಿ ಇ ಆಸ್ಪತ್ರೆಯ ಶಸ್ತ್ರ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕ ಹಾಗೂ ಉನ್ನತ ಭಾರತ ಅಭಿಯಾನ ಸಮಿತಿಯ ಅಧ್ಯಕ್ಷ ಡಾ. ಮಂಜುನಾಥ.ಕೋಟೆಣ್ಣವರ ಹೇಳಿದರು. ಅವರು ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿಯಲ್ಲಿ ಬಿ ಎಲ್ ಡಿ ಇ ಸಂಸ್ಥೆಯ ಆಂಗ್ಲ ಮಾಧ್ಯ ಪ್ರೌಢ […]

Khadi Utsav: ಖಾದಿಯು ಭಾರತದ ಸಂಸ್ಕೃತಿಯ ಅಸ್ಮಿತೆಯ ಸಂಕೇತ- ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ವಿಜಯಪುರ: ಪ್ರತಿಯೊಬ್ಬರ ಅಚ್ಚುಮೆಚ್ಚಿನ ಬಟ್ಟೆಯಾದ ಖಾದಿಯು ನಮ್ಮ ಭಾರತದ ಸಂಸ್ಕೃತಿಯ ಅಸ್ಮಿತೆಯ ಸಂಕೇತವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರು ಹೇಳಿದರು. ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ಜಿಲ್ಲಾ ರಂಗಮಂದಿರದಲ್ಲಿ ನಡೆದ ಖಾದಿ ಉತ್ಸವ-2022 ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗಾಂಧೀಜಿಯವರು ಕಂಡ ಗ್ರಾಮ ಸ್ವರಾಜ್ಯದ ಕನಸಿನ ಹಿಂದೆ ಖಾದಿ ಅಸ್ತಿತ್ವದ ಆಸೆಯು […]

Nadadevi Procession: ಬಸವ ನಾಡಿನಲ್ಲಿ ಶ್ರೀ ಸಿದ್ದೇಶ್ವರ ಆದಿಶಕ್ತಿ ತರುಣ ಮಂಡಳಿ ವತಿಯಿಂದ ನಾಡದೇವಿ ಬೆಳ್ಳಿ ಮೂರ್ತಿ ಮೆರವಣಿಗೆ

ವಿಜಯಪುರ: ಬಸವ ನಾಡು ವಿಜಯಪುರ ನಗರದಲ್ಲಿ ಶ್ರೀ ಸಿದ್ದೇಶ್ವರ ಆದಿಶಕ್ತಿ ತರುಣ ಮಂಡಳಿ ವತಿಯಿಂದ 101 ಕೆಜಿ ಬೆಳ್ಳಿ ನಾಡದೇವಿ ಮೂರ್ತಿಯ ಭವ್ಯ ಮೆರವಣಿಗೆ ನಡೆಯಿತು.  ನಾಗಠಾಣದ ಶ್ರೀ ಚೆನ್ನಮಲ್ಲಿಕಾರ್ಜುನ ಮಹಾಸ್ವಾಮೀಜಿ ಮತ್ತು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ನಾಡದೇವಿ ಮೂರ್ತಿಯ ಮೆರವಣಿಗೆಗೆ ಚಾಲನೆ ನೀಡಿದರು.  ನಗರದ ರಾಮಮಂದಿ ರಸ್ತೆಯಲ್ಲಿರುವ ನಾಡದೇವಿ ಮೂರ್ತಿ ಪ್ರತಿಷ್ಠಾಪನೆ ಸ್ಥಳದಿಂದ ಆರಂಭವಾದ ಈ ಮೆರವಣಿಗೆಯ ನೇತೃತ್ವವನ್ನು ಮಂಡಳಿಯ ಅಧ್ಯಕ್ಷ ಗುರು ಗಚ್ಚಿನಮಠ ವರಿಸಿದ್ದರು. ನಾನಾ ವಾದ್ಯಮೇಳದೊಂದಿಗೆ ಆರಂಭವಾದ ಮೆರವಣಿಗೆ […]

Youth Blood Donation: ಯುವಕರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿ ಜೀವ ಉಳಿಸಲು ನೆರವಾಗಬೇಕು- ರವಿಕುಮಾರ ಚವ್ಹಾಣ

ವಿಜಯಪುರ: ಯುವಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಸಂಕಷ್ಟದಲ್ಲಿರುವ ರೋಗಿಗಳ ಜೀವ ಉಳಿಸಲು ನೆರವಾಗಬೇಕು ಎಂದು ಜಗದಂಬಾ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ರವಿಕುಮಾರ ಚವ್ಹಾಣ ಹೇಳಿದರು. ಅವರು, ಸಿಂದಗಿ ತಾಲೂಕಿನ ತಾಂಬಾ ಗ್ರಾಮದಲ್ಲಿ ನಾಡದೇವಿಯ 51ನೇ ವರ್ಷದ ನವರಾತ್ರಿ ಉತ್ಸವದ ಅಂಗವಾಗಿ ವಿಜಯಪುರದ ಶಿವಗಿರಿ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತಧಾನ ಶಿಬಿರ ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ರಕ್ತದಾನದಿಂದ ಆರೋಗ್ಯದ ಮೇಲೆ ದುಷ್ವರಿಣಾಮ ಉಂಟಾಗುತ್ತದೆ ಎಂಬ ತಪ್ಪು ಕಲ್ಪನೆಯಿದೆ.  ಇದನ್ನು ತೊಲಗಿಸಲು ಆರೋಗ್ಯವಂತ […]

BLDE Award: ಬಿ ಎಲ್ ಡಿ ಇ ಡೀಮ್ಡ್ ವಿವಿ ಅಂತಾರಾಷ್ಟ್ರೀಯ ಹಸಿರು ವಿವಿ-2022 ಪ್ರಶಸ್ತಿ ಆಯ್ಕೆ- ಡಾ. ಆರ್. ಎಸ್. ಮುಧೋಳ

ವಿಜಯಪುರ: ದೇಶದ ಪ್ರತಿಷ್ಠಿತ ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯಕ್ಕೆ ಅಂತಾರಾಷ್ಟ್ರೀಯ ಹಸಿರು ವಿಶ್ವವಿದ್ಯಾಲಯ-2022 ಪ್ರಶಸ್ತಿ ಲಭಿಸಿದೆ ಎಂದು ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಆರ್. ಎಸ್. ಮುಧೋಳ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಅಮೇರಿಕದ ನ್ಯೂಯಾರ್ಕಿನ ಸನಿ ಮಾರ್ಟಿಟೈಮ್ ಕಾಲೇಜು ಸೆ. 24 ಶನಿವಾರ ನಡೆದ ಹಸಿರು ಕ್ಯಾಂಪಸ್ ಕಾನ್ಫರೆನ್ಸ್-2022 ಕಾರ್ಯಕ್ರಮದಲ್ಲಿ ಈ ಆಯ್ಕೆ ನಡೆದಿದೆ.  ಬಸವ ನಾಡಿನ ಬಿ ಎಲ್ ಡಿ ಇ ಡೀಮ್ಡ್ ವಿವಿಗೆ ಹಸಿರು ಕ್ಯಾಂಪಸ್‍ನಲ್ಲಿ ನಾನಾ […]

JDS Yandigeri: ಯಂಡಿಗೇರಿಗೆ ಜೆಡಿಎಸ್ ನಲ್ಲಿ ಎರಡು ಜವಾಬ್ದಾರಿ ವಹಿಸಿದ ವರಿಷ್ಠರು

ವಿಜಯಪುರ: ಜೆಡಿಎಸ್ ಹಿರಿಯ ಮುಖಂಡ ಮತ್ತು ವಿಜಯಪುರ ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಅವರಿಗೆ ಪಕ್ಷದ ವರಿಷ್ಠರು ಎರಡು ಹೊಸ ಜವಾಬ್ದಾರಿ ನೀಡಿದ್ದಾರೆ. ಕಳೆದ ಜನವರಿಯಲ್ಲಷ್ಟೇ ವಿಜಯಪುರ ಜಿಲ್ಲಾಧ್ಯಕ್ಷ ಸ್ಥಾನದಿಂದ ಮಲ್ಲಿಕಾರ್ಜುನ‌ ಯಂಡಿಗೇರಿ ಅವರನ್ನು ಬದಲಾಯಿಸಿ ಮಾಡಗಿ ಅವರಿಗೆ ನೂತನ ಜಿಲ್ಲಾಧ್ಯಕ್ಷರನ್ನಾಗಿ ಮಾಡಲಾಗಿತ್ತು. ಆ ಬಳಿಕ ಅವರನ್ನು ರಾಜ್ಯ ಉಪಾಧ್ಯಕ್ಷರನ್ನಾಗಿ ಮಾಡಿದ್ದರೂ ಮಲ್ಲಿಕಾರ್ಜುಮ ಯಂಡಿಗೇರಿ ಅವರು ಸಕ್ರೀಯರಾಗಿರಲಿಲ್ಲ. ಹೊಸ ಜವಾಬ್ದಾರಿ ನೀಡಿದ ವರಿಷ್ಠರು ಈ ಮಧ್ಯೆ, ಸಿ. ಎಂ. ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಬಳಿಕ ಹಳೆಯ […]