Lokayukta Raid: ಬೆಳ್ಳಂಬೆಳಿಗ್ಗೆ ಧೂಳಖೇಡ್ ಆರ್ ಟಿ ಓ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಧಾಳಿ

ವಿಜಯಪುರ: ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಯಲ್ಲಿರುವ ಚಡಚಣ ತಾಲೂಕಿನ ಧೂಳಖೇಡ ಆರ್ ಟಿ ಓ ಚೆಕ್ ಪೋಸ್ಟ್ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತರು ಧಾಳಿ ನಡೆಸಿದ್ದಾರೆ.

ಸಾರಿಗೆ ವಾಹನ ಸವಾರರಿಂದ ಹಣ ವಸೂಲಿಗೆ ಈ ಚೆಕ್ ಪೋಸ್ಟ್ ನಲ್ಲಿ ಲಂಚ ಪಡೆಯಲಾಗುತ್ತದೆ ಎಂಬ ಆರೋಪ ಮುಂಚೆಯಿಂದಲೂ ಇದೆ.  ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 5 ಗಂಟೆಗೆ ಧಾಳಿ ನಡೆಸಿರುವ ಲೋಕಾಯುಕ್ತ ಎಸ್ಪಿ ಅನಿತಾ ಹದ್ದಣ್ಣವರ ನೇತೃವದ ಸುಮಾರು 20 ಅಧಿಕಾರಿಗಳ ತಂಡ ಪರಿಶೀಲನೆ ನಡೆಸುತ್ತಿದೆ.

ಧೂಳಖೇಡ ಆರ್ ಟಿ ಓ ಚೆಕ್ ಪೋಸ್ಟ್ ಮೇಲೆ ಧಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು

ಆರ್ ಟಿ ಓ ಚೆಕ್ ಪೋಸ್ಟ್ ನಲ್ಲಿ ಇರುವ ದಾಖಲಾತಿಗಳನ್ನು ಈ ತಂಡ ಪರಿಶೀಲನೆ ನಡೆಸುತ್ತಿದ್ದು, ಏನೆಲ್ಲ ಅಕ್ರಮಗಳು ನಡೆದಿವೆ ಎಂಬುದರ ಕುರಿತು ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಈ ಲೋಕಾಯಕ್ತ ಅಧಿಕಾರಿಗಳ ತಂಡದಲ್ಲಿ ಡಿವೈಎಸ್ಪಿ ಅರುಣ ನಾಯಕ, ಪುಷ್ಪಲತ, ಮಹೇಂದ್ರ ನಾಯಕ, ಆನಂದ ದೋಣಿ, ಆನಂದ ಠಕ್ಕಣ್ಣವರ ಸೇರಿದಂತೆ 20ಕ್ಕೂ ಹೆಚ್ಚು ಅಧಿಕಾರಿಗಳು ಇದ್ದಾರೆ.

ಸುಮಾರು 8 ರಿಂದ 10 ಜನ ಹೋಮ್ ಗಾರ್ಡ್ ಸಿಬ್ಬಂದಿಯನ್ನು ಈ ಅಧಿಕಾರಿಗಳು ವಶಕ್ಕೆ  ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ಬಸವ ನಾಡಿಗೆ ತಿಳಿಸಿವೆ.

 

 

 

Leave a Reply

ಹೊಸ ಪೋಸ್ಟ್‌