Gandhi Shastri: ಗಾಂಧಿ, ಶಾಸ್ತ್ರಿ ಆದರ್ಶ ಜೀವನ ಎಲ್ಲರಿಗೂ ಉತ್ತಮ ಸಂದೇಶ ನೀಡಿವೆ- ಸಾಗರ ಅವಟಿ

ವಿಜಯಪುರ: ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮತ್ತು ಲಾಲ ಬಹಾದ್ದೂರ ಶಾಸ್ತಿರ ಅವರ ಆದರ್ಶ ಜೀವನ ಎಲ್ಲರಿಗೂ ಉತ್ತಮ ಸಂದೇಶ ನೀಡಿವೆ ಎಂದು ಸಾಫ್ಟವೇರ್ ಉದ್ಯಮಿ ಸಾಗರ ಅವಟಿ ಹೇಳಿದರು. 

ಅವರು ನಗರದ ಮಾೋಶ್ರೀ ಗೌರಮ್ಮ ಅಪ್ಪಾಸಾಹೇಬ ಬಬಲೇಶ್ವರ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಎಕ್ಸಲೆಂಟ್ ಕಾಲೇಜ್ ಆಫ್ ನರ್ಸಿಂಗ್ ಕಾಲೇಜಿನಲ್ಲಿ ನಡೆದ ಮಹಾತ್ಮಾ ಗಾಂಧಿ ಮತ್ತು ಲಾಲ ಬಹಾದ್ದೂರ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಈ ಮಹಾನ್ ಪುರುಷರ ಆದರ್ಶಗಳನ್ನು ಅಳವಡಿಸಿಕೊಂಡು ತಮ್ಮ ಬದುಕನ್ನು ಅರ್ಥಪೂರ್ಣವಾಗಿ ರೂಪಿಸಿಕೊಳ್ಳಬೇಕು ಎಂದು ಸಾಗರ ಅವಟಿ ಹೇಳಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕ ಪ್ರದೀಪ್ ಲಿಂಗದಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹೊಟೇಲ್ ಉದ್ಯಮಿ ಶಾಂತೇಶ ಕಳಸಗೊಂಡ ಸಮಾರಂಭ ಉದ್ಘಾಟಿಸಿದರು.  ಭೂಮಿ ಪರ್ಟಿಲೈಜರ್ ನ ಮಾಲೀಕ ಎಂ. ಎಸ್. ಬಗಲಿ, ಪ್ರಶಾಂತ್ ಶೆಟ್ಟಿ .ಆನಂದಕುಮಾರ, ಸಂಸ್ಥೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗದಳು ವರ್ಗ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌