Yatnal BSY Cabinet: ಸಂಪುಟ ವಿಸ್ತರಣೆ , ಪುನಾರಚನೆಯಾಗಲಿ- ಈಶ್ವರಪ್ಪಗೆ ಸಚಿವ, ಹೊರಟ್ಟಿಗೆ ಸಭಾಪತಿ ಸ್ಥಾನ ನೀಡಲಿ- ಯತ್ನಾಳ ಆಗ್ರಹ

ವಿಜಯಪುರ: ಸಿಎಂ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡಬೇಕು.  ಖಾಲಿ ಇರುವ ಸಚಿವ ಸ್ಥಾನಗಳನ್ನು ತಾವೇ ಇಟ್ಟುಕೊಂಡು ಕೂಡಬಾರದು ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.  ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸುಳ್ಳು ಆರೋಪದ ಕಾರಣದಿಂದ ಈಶ್ವರಪ್ಪ ರಾಜೀನಾಮೆ ನೀಡಿದ್ದರು.  ಆರೋಪ ಮುಕ್ತವಾದ ಕೂಡಲೇ ಈಶ್ವರಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕಾಗಿದೆ ಎಂದು ಹೇಳಿದರು. ಹೊರಟ್ಟಿ ಅವರಿಗೆ ಸಭಾಪತಿ ಸ್ಥಾನ ನೀಡಬೇಕು ಇದೇ ವೇಳೆ ಮಾಜಿ ಸಭಾಪತಿ ಬಸವರಾಜ […]

Health Camps: ಎಂ. ಬಿ. ಪಾಟೀಲರ ಜನ್ಮದಿನ ಅಂಗವಾಗಿ ನಾಲ್ಕು ಕಡೆ ಉಚಿತ ಆರೋಗ್ಯ ತಪಾಸಣೆ ಬೃಹತ್ ಶಿಬಿರ

ವಿಜಯಪುರ. ಬಿ.ಎಲ್.ಡಿ.ಇ ಸಂಸ್ಥೆ ಅಧ್ಯಕ್ಷ ಮತ್ತು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರ ಜನ್ಮದಿನದ ಅಂಗವಾಗಿ ಜಿಲ್ಲೆಯ ನಾಲ್ಕು ಕಡೆಗಳಲ್ಲಿ ಏಕಕಾಲದಲ್ಲಿ ಉಚಿತ ಆರೋಗ್ಯ ತಪಾಸಣೆ ಬೃಹತ್ ಶಿಬಿರ ನಡೆಯಿತು. ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ವತಿಯಿಂದ ವಿಜಯಪುರ ತಾಲೂಕಿನ ಕನ್ನೂರ, ತಿಕೋಟಾ, ಬಬಲೇಶ್ವರ ಮತ್ತು ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿಯಲ್ಲಿ ಬೃಹತ್ ಶಿಬಿರಗಳು ನಡೆದವು. ಗಮನ ಸೆಳೆದ ಕನ್ನೂರಿನ ಶಿಬಿರ ಕನ್ನೂರ ಗ್ರಾಮದ ಗುರುಮಠದಲ್ಲಿ ನಡೆದ ಶಿಬಿರ ಗಮನ ಸೆಳೆಯಿತು. […]

Corporation Election: ವಿಜಯಪುರ ಮಹಾನಗರ ಪಾಲಿಕೆಯ 35 ವಾರ್ಡುಗಳಿಗೆ ಅ. 28 ರಂದು ಚುನಾವಣೆ- ಡಿಸಿ ಡಾ ದಾನಮ್ಮನವರ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಗೆ ಚುನಾವಣೆ ದಿನಾಂಕಯನ್ನು ರಾಜ್ಯ ಚುನಾವಣೆ ಆಯೋಗ ನಿಗದಿ ಪಡಿಸಿದ್ದು, ಅ. 28 ರಂದು ಮತದಾನ ನಡೆಯಲಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಟೋಬರ್ 10ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಾಗುವುದು. ಅ. 17ರ ವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಅ. 18ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅ. 20 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಏ. 28ರಂದು ಮತದಾನ ನಡೆಯಲಿದೆ ಎಂದು ತಿಳಿಸಿದರು. […]