MBP Tour: ಅ. 18, 19 ರಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ವಿಜಯಪುರ ಜಿಲ್ಲಾ ಪ್ರವಾಸ- ನಾನಾ ಕಾರ್ಯಕ್ರಮಗಳಲ್ಲಿ ಭಾಗಿ

ವಿಜಯಪುರ: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ವರು ಅ. 18 ಮತ್ತು 19 ರಂದು ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ನಾನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಅ. 18 ಮಂಗಳವಾರ ಬೆ. 10ಕ್ಕೆ ತಿಕೋಟಾ ತಾಲೂಕಿನ ಟಕ್ಕಳಕಿ ಸರಕಾರಿ ಪ್ರೌಢಶಾಲೆ ಮೈದಾನದಲ್ಲಿ ಆಯೋಜಿಸಲಾಗಿರುವ ರೈತ ಸಂಭ್ರಮ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ

ಅ. 19 ರಂದು ಬುಧವಾರ ಬೆ. 9ಕ್ಕೆ ತಿಕೋಟಾದಲ್ಲಿ ನಗರೋತ್ಥಾನ್ ಯೋಜನೆಯಡಿಯಲ್ಲಿ ಸಿಸಿ ರಸ್ತೆ ಮತ್ತು ಡ್ರೇನ್ ಕಾಮಗಾರಿ ಭೂಮಿ ಪೂಜೆ ಸಲ್ಲಿಸಿ, ಬೆ. 9.30ಕ್ಕೆ ಕನಕದಾಸ ಮಂಗಲ ಕಾರ್ಯಾಲಯದಲ್ಲಿ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಸಮುದಾಯ ಬಂಡವಾಳ ನಿಧಿ ಹಂಚಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಮ.1ಕ್ಕೆ ಬಬಲೇಶ್ವರದಲ್ಲಿ ನಗರೋತ್ಥಾನ್ ಯೋಜನೆಯಡಿಯಲ್ಲಿ ಸಿಸಿ ರಸ್ತೆ ಮತ್ತು ಡ್ರೇನ್ ಕಾಮಗಾರಿ ಭೂಮಿ ಪೂಜೆ ಸಲ್ಲಿಸಲಿದ್ದಾರೆ.  ನಂತರ ಮ. 1.30ಕ್ಕೆ ಗುರುಪಾದೇಶ್ವರ ಬೃಹನ್ಮಠದಲ್ಲಿ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಸಮುದಾಯ ಬಂಡವಾಳ ನಿಧಿ ಹಂಚಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಶಾಸಕರ ಕಛೇರಿ ಪ್ರಕಟಣೆಯಲ್ಲಿ ಮಾಹಿತಿ ನೀಡಲಾದಿದೆ.

Leave a Reply

ಹೊಸ ಪೋಸ್ಟ್‌