Police Martyrs Day: ನಮ್ಮ ಒಳಿತಿಗಾಗಿ ಪ್ರಾಣ ಮುಡುಪಾಗಿಟ್ಟವರನ್ನು ಸ್ಮರಣೆ ಮಾಡುವುದು ನಮ್ಮ ಕರ್ತವ್ಯ- ಡಾ. ದಾನಮ್ಮನವರ

ವಿಜಯಪುರ: ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಮಾಡುತ್ತಾ ಸಮಾಜದ ಭದ್ರತೆ ಹಾಗೂ ಸುರಕ್ಷತೆಗಾಗಿ ಪ್ರಾಣ ಮುಡುಪಾಗಿಟ್ಟ ಪೊಲೀಸ್ ಸಿಬ್ಬಂದಿ ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬ.‌ ದಾನಮ್ಮನವರ ಹೇಳಿದರು. ಜಿಲ್ಲಾ ಪೊಲೀಸ್ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನ ಆಚರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಪೊಲೀಸರ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿ ಅವರು ಮಾತನಾಡಿದರು. ಸಾರ್ವಜನಿಕರು ಸಹ ಕಾನೂನು ಪಾಲಿಸುವ ಮೂಲಕ ಪೊಲೀಸರ ಕಾರ್ಯಕ್ಕೆ ಸಹಕರಿಸಬೇಕು […]

Election Symbols: ಕಣದಲ್ಲಿರುವ 174 ಅಭ್ಯರ್ಥಿಗಳ ಹೆಸರು, ಅವರಿಗೆ ಸಿಕ್ಕಿರುವ ಚಿನ್ಹೆಗಳು ಯಾವವು ಗೊತ್ತಾ?

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ 35 ವಾರ್ಡುಗಳಿಗೆ ಅ. 28 ರಂದು ಮತದಾನ ನಡೆಯುತ್ತಿದ್ದು, ಇದೀಗ ಅಂತಿಮವಾಗಿ 174 ಜನ ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.  ನಾನಾ ಪಕ್ಷಗಳ ಮತ್ತು ಪಕ್ಷೇತರರಿಗೆ ಚುನಾವಣೆ ಚಿನ್ಹೆಗಳನ್ನು ಹಂಚಿಕೆ ಮಾಡಲಾಗಿದ್ದು, ಯಾವ ವಾರ್ಡಿನಿಂದ ಯಾವ ಅಭ್ಯರ್ಥಿ ಸ್ಪರ್ಧಿಸಿದ್ದಾರೆ ಮತ್ತು ಅವರಿಗೆ ಹಂಚಿಕೆಯಾಗಿರುವ ಚುನಾವಣೆ ಚಿನ್ನೆಯ ವಿವರ ಬಸವ ನಾಡು ವೆಬ್ ಗೆ ಲಭ್ಯವಾಗಿದೆ. ವಾರ್ಡುಗಳ ಸಂಖ್ಯೆ, ಅಭ್ಯರ್ಥಿಯ ಹೆಸರು, ಪಕ್ಷ ಮತ್ತು ಹಂಚಿಕೆಯಾಗಿರು ಚಿನ್ನೆಯ ಮಾಹಿತಿ ಇಲ್ಲಿದೆ.   ವಾರ್ಡ ಸಂಖ್ಯೆ […]