Thieves Arrest: ಶಾಲೆಗಳ ಬಿಸಿಯೂಟದ ಅಕ್ಕಿ, ಇತರೆ ಸಾಮಗ್ರಿಗಳು ಕಳ್ಳರ ಬಂಧನ

ವಿಜಯಪುರ: ವಿಜಯಪುರ ಗ್ರಾಮೀಣ ಪೊಲೀಸ ಠಾಣೆ ವ್ಯಾಪ್ತಿಯ ಬುರಾಣಪುರ, ಇಟ್ಟಂಗಿಹಾಳ ಹಾಗೂ ಹಿಟ್ನಳ್ಳಿ ಗ್ರಾಮಗಳ  ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕೊಡುವ ಬಿಸಿಯೂಟದ ಸಾಮಗ್ರಿಗಳನ್ಬು ಕಳ್ಳತನ ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ಪಿ ಎಚ್. ಡಿ. ಆನಂದಕುಮಾರ, ಈ ಪ್ರಕರಣಗಳ ತನಿಖೆಗಾಗಿ ಎಎಸ್ಪಿ ಡಾ. ರಾಮ ಲಕ್ಷ್ನಣಸಾ ಅರಸಿದ್ದಿ ಅವರ ಮಾರ್ಗದರ್ಶನದಲ್ಲಿ ವಿಜಯಪುರ ಡಿವೈಎಸ್ಪಿ ಸಿದ್ದೇಶ್ವರ, ವಿಜಯಪುರ ಗ್ರಾಮೀಣ ಸಿಪಿಐ ಸಂಗಮೇಶ ಪಾಲಭಾವಿ, ವಿಜಯಪುರ ಗ್ರಾಮೀಣ ಪಿ ಎಸ್ ಐ ಗಳಾದ ಜಿ. ಎಸ್. […]

Arunsingh Yatnal: ಅರುಣಸಿಂಗ್ ಬಗ್ಗೆ ಈಗ ಮಾತಾಡೊಲ್ಲ- ನಟ ಚೇತನ ನಾಲಾಯಕ್ ಎಂದ ಶಾಸಕ

ವಿಜಯಪುರ: ಬಿಜೆಪಿ ರಾಜ್ಯ ಉಸ್ತುವಾರಿ ಅರುಣಸಿಂಗ್ ತಮ್ಮ ವಿರುದ್ಧ ನೀಡಿರುವ ಹೇಳಿಕೆಯ ಬಗ್ಗೆ ವಿಜಯಪುರ ನಗರ ಬಿಜೆಪಿ ಶಾಸಕ‌ ಬಸನಗೌಡ ಪಾಟೀಲ ನಯವಾಗಿಯೇ ಎಚ್ಚರಿಕೆ ನೀಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಂಥ, ಇಂಥ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನನಗೆ ಸಮಯ ಇಲ್ಲ ಎಂದು ಹೇಳಿದರು. ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆಯಲ್ಲಿ ನನಗೆ ಬೇರೆ ಪ್ರತಿಕ್ರಿತೆ ನೀಡಲು ಸಮಯ ಇಲ್ಲ. ನಾನು ಯಾರನ್ನಾದರೂ ಬಿಡ್ತೀನಾ? ನಾನು ಯಾರ ಮನೆಗೂ ಹೋಗಿ ನಿಂತಿಲ್ಲ. ವೇದಿಕೆಯಲ್ಲಿ ಅಬ್ಬರಿಸುತ್ತೇನೆ. ನನ್ನ […]

Airport Welcome: ವಿಜಯಪುರ ವಿಮಾನ ನಿಲ್ದಾಣಕ್ಕೆ ಬಸವಣ್ಣನವರ ನಾಮಕರಣ ಸ್ವಾಗತಾರ್ಹ: ಬೊಮ್ಮಾಯಿ, ಕಾರಜೋಳಗೆ ಅಭಿನಂನದೆ- ಸಂಗಮೇಶ ಬಬಲೇಶ್ವರ

ವಿಜಯಪುರ: ವಿಜಯಪುರ ವಿಮಾನ ನಿಲ್ದಾಣಕ್ಕೆ ವಿಶ್ವಗುರು ಬಸವಣ್ಣನವರ ಹೆಸರಿಡುವ ನಿರ್ಧಾರ ಅತ್ಯಂತ ಸ್ವಾಗತಾರ್ಹ ಎಂದು ಅಖಿಲ ಭಾರತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ವಕ್ತಾರ ಸಂಗಮೇಶ ಬಬಲೇಶ್ವರ ಹೇಳಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಸಮಾಜ ಸುಧಾರಕ ಸಮಾಜದಲ್ಲಿ ಸಮಾನತೆಯನ್ನು ತರಲು ಹೋರಾಡಿದ ವಿಶ್ವಗುರು ಬಸವಣ್ಣನವರ ಹೆಸರನ್ನು ನಿರ್ಮಾಣ ಹಂತದಲ್ಲಿರುವ ವಿಜಯಪುರದ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವ ಪ್ರಸ್ತಾವನೆಯನ್ನು ಅನುಮೋದಿಸಿರುವ ಕರ್ನಾಟಕ ರಾಜ್ಯ ಸರಕಾರಕ್ಕೆ ಸಮಸ್ತ ಬಸವಾಭಿಮಾನಿಗಳ ಪರವಾಗಿ ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ತಿಳಿಸಿದ್ದಾರೆ. […]