Shrishail Seer Padayatre: ಶ್ರೀಶೈಲ ಜಗದ್ಗುರುಗಳ ಪಾದಯಾತ್ರೆ ನ. 6 ರಂದು ಬಸವ ನಾಡಿಗೆ ಆಗಮನ

ವಿಜಯಪುರ:  ಶ್ರೀಶೈಲದ ಡಾ. ಚನ್ನಸಿದ್ಧ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ದ್ವಾದಶ ಪೀಠಾರೋಹಣ ಮಹೋತ್ಸವ ಹಾಗೂ ಜನ್ಮ ಸುವರ್ಣ ಮಹೋತ್ಸವ ಅಂಗವಾಗಿ ಶ್ರೀ ಕ್ಷೇತ್ರ ಯಡೂರದಿಂದ ಶ್ರೀಶೈಲ ಕ್ಷೇತ್ರದ ವರೆಗೆ ಪಾದಯಾತ್ರೆ ಕೈಗೊಂಡಿದ್ದಾರೆ. ಈ ಪಾದಯಾತ್ರೆಯು ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮಕ್ಕೆ ಆಗಮಿಸಲಿದೆ.  ಅಂದು ಬೆ. 7 ಕ್ಕೆ ಸಾರವಾಡದಿಂದ ಹೊರಟು ಮಧ್ಯಾಹ್ನ ವಿಜಯಪುರದ ಮಿಲನ ಪೇಟ್ರೋಲ್ ಪಂಪನಲ್ಲಿ ಭೋಜನ ಮುಗಿಸಿ, ಜೋರಾಪೂರದ ಶಂಕರಲಿಂಗ ದೇವಸ್ಥಾನಕ್ಕೆ ತೆರಳಲಿದೆ. ಅಲ್ಲಿಂದ ವಿಜಯಪುರ ನಗರದ ಗ್ರಾಮದೇವತೆ ಶ್ರೀ ಸಿದ್ದೇಶ್ವರ […]

TET Preparation: ನ. 6ರಂದು ನಗರದ 52 ಪರೀಕ್ಷಾ ಕೇಂದ್ರಗಳಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ- ಪರೀಕ್ಷಾರ್ಥಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಿ- ಡಿಸಿ ಸೂಚನೆ

ವಿಜಯಪುರ: ನ. 6 ರಂದು ನಡೆಯಲಿರುವ(ಟಿಇಟಿ) ಶಿಕ್ಷಕರ ಅರ್ಹತಾ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಾವುದೇ ಅಡೆ-ತಡೆ ಉಂಟಾಗದಂತೆ ಗಮನವಹಿಸಿ, ಅಭ್ಯರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ, ವ್ಯವಸ್ಥಿತವಾಗಿ ಪರೀಕ್ಷೆಗಳು ನಡೆಯುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಜಯಪುರ ನಗರದ ಜಿ. ಪಂ. ಸಭಾಂಗಣದಲ್ಲಿ ನಡೆದ ಟಿಇಟಿ-2022ರ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪರೀಕ್ಷಾರ್ಥಿಗಳಿಗೆ ನೀರು, ಬೆಳಕು, ಶೌಚಾಲಯ ಸೇರಿದಂತೆ ಎಲ್ಲ ಮೂಲಭೂತ ವ್ಯವಸ್ಥೆ ಕಲ್ಪಿಸಬೇಕು.  ಪರೀಕ್ಷೆ ಬರೆಯುವ […]

Ibrahimpur RoB: ಇಬ್ರಾಹಿಂಪುರ ರೇಲ್ವೆ ಮೇಲ್ಸೇತುವೆ ಕಾಮಗಾರಿ- ನವೆಂಬರ ಮಾಸಾಂತ್ಯದೊಳಗೆ ಪೂರ್ಣಗೊಳಿಸಲು ಡಿಸಿ ಸೂಚನೆ

ವಿಜಯಪುರ: ನಗರದಲ್ಲಿ ಇಬ್ರಾಹಿಂಪೂರ ಬಳಿ ನಡೆಯುತ್ತಿರುವ ರೇಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ನವೆಂಬರ ಮಾಸಾಂತ್ಯದೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ಇಬ್ರಾಹಿಂಪುರ ರೇಲ್ವೆ ಗೇಟ್ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, 36 ಮೀಟರ್ ಸ್ಪ್ಯಾನ್, ಬೊಸ್ಟರಿಂಗ್ ಸ್ಟೀಲ್ ಗ್ರೈಡರ್, ಮೂವಮೇಂಟ್, ಪ್ಲೇಸಮೆಂಟ್ ಆನ್ ಬೇರಿಂಗ್ಸ್, ಮೇಲ್ಗಡೆ ಎರಡು ಬದಿಯಲ್ಲಿ ಕಾಂಕ್ರೀಟ್ ಹಾಕುವುದು(ಕಾಂಕ್ರಿಟಿಂಗ್ ಆನ್ ಗರ್ಡರ್), ಪಾದಚಾರಿ ಮಾರ್ಗ, ಮ್ಯಾಟಿಕ್ ಆಸ್ಪಾಟಿಂಗ್, ಗಣೇಶನಗರ ಹಾಗೂ  […]

Congress Honour: ಪಾಲಿಕೆ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮುಶ್ರಿಫ್ ರಿಂದ ಸನ್ಮಾನ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ಸಿನಿಂದ 10 ಜನ ಗೆಲುವು ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್ ಅವರ ಜನಸಂಪರ್ಕ ಕಚೇರಿಯಲ್ಲಿ ಅಭಿನಂದನೆ ಸಭೆ ನಡೆಯಿತು. ಆಯ್ಕೆಯಾದ 10 ಕಾಂಗ್ರೆಸ್ ಕಾರ್ಪೊರೇಟರ್ ಗಳನ್ನು ಅಬ್ದುಲ್ ಹಮೀದ್ ಮುಶ್ರೀಫ್ ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಬ್ದುಲ್ ಹಮೀದ ಮುಶ್ರಿಫ್, ಮಹಾನಗರ ಪಾಲಿಕೆ ಸದಸ್ಯರ ನಡುವಿನ ಏಕತೆ ಮತ್ತು ಒಗ್ಗಟ್ಟಿನಿಂದ ಮುಂದಿನ ಸಾರ್ವತ್ರಿಕ‌ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು. ಮತದಾರರ […]