Congress Honour: ಪಾಲಿಕೆ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮುಶ್ರಿಫ್ ರಿಂದ ಸನ್ಮಾನ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ಸಿನಿಂದ 10 ಜನ ಗೆಲುವು ಸಾಧಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್ ಅವರ ಜನಸಂಪರ್ಕ ಕಚೇರಿಯಲ್ಲಿ ಅಭಿನಂದನೆ ಸಭೆ ನಡೆಯಿತು. ಆಯ್ಕೆಯಾದ 10 ಕಾಂಗ್ರೆಸ್ ಕಾರ್ಪೊರೇಟರ್ ಗಳನ್ನು ಅಬ್ದುಲ್ ಹಮೀದ್ ಮುಶ್ರೀಫ್ ಸನ್ಮಾನಿಸಿ ಅಭಿನಂದಿಸಿದರು.

ವಿಜಯಪುರ ಮಹಾನಗರ ಪಾಲಿಕೆಗೆ ಆಯ್ಕೆಯಾದ ಕಾಂಗ್ರೆಸ್ ಸದಸ್ಯರನ್ನು ಸನ್ಮಾನಿಸಲಾಯಿತು

ಈ ಸಂದರ್ಭದಲ್ಲಿ ಮಾತನಾಡಿದ ಅಬ್ದುಲ್ ಹಮೀದ ಮುಶ್ರಿಫ್, ಮಹಾನಗರ ಪಾಲಿಕೆ ಸದಸ್ಯರ ನಡುವಿನ ಏಕತೆ ಮತ್ತು ಒಗ್ಗಟ್ಟಿನಿಂದ ಮುಂದಿನ ಸಾರ್ವತ್ರಿಕ‌ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಮತದಾರರ ಪಟ್ಟಿಯಿಂದ ಹಲವು ಮತದಾರರನ್ನು ಅಳಿಸಿ ಹಾಕಿದ್ದರೂ ಮಹಾನಗರ ಪಾಲಿಕೆ ಚುನಾವಣೆಯಲ್ಲಿ 10 ಸ್ಥಾನ ಗಳಿಸಿದ್ದೇವೆ. ಮತದಾರರ ಹೆಸರನ್ನು ಡಿಲೀಟ್ ಮಾಡಿರದಿದ್ದರೆ ಕಾಂಗ್ರೆಸ್ ಇನ್ನೂ ಕೆಲವು ಸ್ಥಾನಗಳನ್ನು ಗೆಲ್ಲುತ್ತಿತ್ತು ಎಂದು ಅಬ್ದುಲ್ ಹಮೀದ್ ಮುಶ್ರಿಫ್ ಹೇಳಿದರು.

ಈ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಸುರೇಶ ಗೋಣಸಗಿ ಉಪಸ್ಥಿತರಿದ್ದು ಮಹಾನಗರ ಪಾಲಿಕೆ ನೂತನ ಕಾರ್ಪೊರೇಟರ್‌ಗಳನ್ನು ಅಭಿನಂದಿಸಿದರು.

Leave a Reply

ಹೊಸ ಪೋಸ್ಟ್‌