Shrishail Seer Padayatre: ಶ್ರೀಶೈಲ ಜಗದ್ಗುರುಗಳ ಪಾದಯಾತ್ರೆ ನ. 6 ರಂದು ಬಸವ ನಾಡಿಗೆ ಆಗಮನ

ವಿಜಯಪುರ:  ಶ್ರೀಶೈಲದ ಡಾ. ಚನ್ನಸಿದ್ಧ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ದ್ವಾದಶ ಪೀಠಾರೋಹಣ ಮಹೋತ್ಸವ ಹಾಗೂ ಜನ್ಮ ಸುವರ್ಣ ಮಹೋತ್ಸವ ಅಂಗವಾಗಿ ಶ್ರೀ ಕ್ಷೇತ್ರ ಯಡೂರದಿಂದ ಶ್ರೀಶೈಲ ಕ್ಷೇತ್ರದ ವರೆಗೆ ಪಾದಯಾತ್ರೆ ಕೈಗೊಂಡಿದ್ದಾರೆ.

ಈ ಪಾದಯಾತ್ರೆಯು ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮಕ್ಕೆ ಆಗಮಿಸಲಿದೆ.  ಅಂದು ಬೆ. 7 ಕ್ಕೆ ಸಾರವಾಡದಿಂದ ಹೊರಟು ಮಧ್ಯಾಹ್ನ ವಿಜಯಪುರದ ಮಿಲನ ಪೇಟ್ರೋಲ್ ಪಂಪನಲ್ಲಿ ಭೋಜನ ಮುಗಿಸಿ, ಜೋರಾಪೂರದ ಶಂಕರಲಿಂಗ ದೇವಸ್ಥಾನಕ್ಕೆ ತೆರಳಲಿದೆ.

ಅಲ್ಲಿಂದ ವಿಜಯಪುರ ನಗರದ ಗ್ರಾಮದೇವತೆ ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ ದರ್ಶನ ಮುಗಿಸಿಕೊಂಡು ಶಿವಶರಣೆ ಹೆಮರಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ಧರ್ಮಸಭೆ ಹಾಗೂ ಪೂಜೆ ಪ್ರಸಾದ ಕಾರ್ಯಕ್ರಮ ನಡೆಯಲಿದೆ.  ಆದ್ದರಿಂದ ಎಲ್ಲ ಭಕ್ತಾದಿಗಳು ಈ ಪಾದಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ನೀಲಕಂಠೇಶ್ವರ ಪಾದಯಾತ್ರೆ ಕಮಿಟಿ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದೆ.

Leave a Reply

ಹೊಸ ಪೋಸ್ಟ್‌