RSS Procession: ವಿಜಯಪುರದಲ್ಲಿ ಗಮನ ಸೆಳೆದ ಆರ್ ಎಸ್ ಎಸ್ ಗಣವೇಷಧಾರಿಗಳ ಪಥಸಂಚಲನ

ವಿಜಯಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ ವಿಜಯಪುರ ನಗರದ ವಾರ್ಷಿಕೋತ್ಸವದ ಅಂಗವಾಗಿ ವಿಜಯಪುರದಲ್ಲಿ ಆರ್ ಎಸ್ ಎಸ್ ಗಣವೇಷಧಾರಿಗಳ ಆಕರ್ಷಕ ಪಥ ಸಂಚಲನ ನಡೆಯಿತು.  ನಗರದ ನಾನಾ ಶಾಖೆಗಳ 900ಕ್ಕೂ ಹೆಚ್ಚು ಸ್ವಯಂ ಸೇವಕರು ಪಥಸಂಚಲನ ದಲ್ಲಿ ಪಾಲ್ಗೊಂಡರು. ಈ ಕಾರ್ಯಕ್ರಮದಲ್ಲಿ ನಗರದ ಆಭರಣ ವರ್ತಕರಾದ ಪ್ರಕಾಶ ಸೋನಾರ, ವಿಭಾಗ ಸಂಘಚಾಲಕರಾದ ಚಿದಂಬರ ಕರಮಕರ ಉಪಸ್ಥಿತರಿದ್ದರು, ನಗರದ ಗಣ್ಯರು, ಮಾತೆಯರು ಉಪಸ್ಥಿತರಿದ್ದರು. ಮೆರವಣಿಗೆಯುದ್ಧಕ್ಕೂ ಸ್ವಯಂ ಸೇವಕರ ಮೇಲೆ ಅಲ್ಲಲ್ಲಿ ಸಾರ್ವಜನಿಕರು ಪುಷ್ಪ ಮಳೆ ಸುರಿಸುವ ಮೂಲಕ ಸ್ವಾಗತ ಕೋರಿದರು. […]

Shreeshail Padayatre: ಶ್ರೀಶೈಲ ಜಗದ್ಗುರುಗಳು ಶೋಭಾ ಯಾತ್ರೆ ಬಸವ ನಾಡಿಗೆ ಆಗಮನ- ಶಾಲೆಗಳಲ್ಲಿ ಧ್ಯಾನ ಆದೇಶ ಸ್ವಾಗತಿಸಿದ ಶ್ರೀಗಳು

ವಿಜಯಪುರ: ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಕೈಗೊಂಡಿರುವ ಪಾದಯಾತ್ರೆ ಬಸವ ನಾಡು ವಿಜಯಪುರ ಜಿಲ್ಲೆಯನ್ನು ಪ್ರವೇಶಿಸಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಿಂದ ಆರಂಭವಾಗಿರುವ ಈ ಪಾದಯಾತ್ರೆ ವಿಜಯಪುರ ನಗರ ಪ್ರವೇಶಿಸುತ್ತಿದ್ದಂತೆ ಅವರನ್ನು ಭಕ್ತರು ಅದ್ದೂರಿಯಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಲೆಗಳಲ್ಲಿ ಧ್ಯಾನ ಮಾಡುವಂತೆ ರಾಜ್ಯ ಸರಕಾರ ಹೊರಡಿಸಿರುವ ಆದೇಶವನ್ನು ಸ್ವಾಗತಿಸುವುದಾಗಿ ತಿಳಿಸಿದರು. ಧ್ಯಾನ ಎನ್ನುವುದು ಮನುಷ್ಯರ ಆರೋಗ್ಯಕ್ಕೆ ಟಾನಿಕ್ ಆಗಿದೆ.  ಯಾವುದೇ ಕ್ಷೇತ್ರವಿರಲಿ ಧ್ಯಾನ ಎನ್ನುವದು ಮಾನವರಿಗೆ ಉಪಯೋಗಿಯಾಗಿದೆ.  […]

KUWJ Conference: ಕಾರ್ಯನಿರತ ಪತ್ರಕರ್ತರಕ್ಕೆ ನಾನಾ ಸಮಿತಿಗಳ ರಚನೆ- ಕಾರ್ಯಕ್ರಮ ಯಶಸ್ಸಿಗೆ ಪೂರ್ವಭಾವಿ ಸಭೆ

ವಿಜಯಪುರ: ಬಸವ ನಾಡು ವಿಜಯಪುರದಲ್ಲಿ ನಡೆಯಲಿರುವ ಪತ್ರಕರ್ತರ 37 ನೇ ರಾಜ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ನಾನಾ ಸಮಿತಿಗಳನ್ನು ರಚನೆ ಮಾಡಲಾಗಿದೆ.  ಈ ಹಿನ್ನೆಲೆಯಲ್ಲಿ ನಗರದ ಪತ್ರಿಕಾ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ ಮತ್ತು ಕಾನಿಪ ಜಿಲ್ಲಾ ಸಲಹಾ ಸಮಿತಿ ಸದಸ್ಯ ಗೋಪಾಲ ನಾಯಕ, ವಿಜಯಪುರದಲ್ಲಿ ನಡೆಸಲು ಅವಕಾಶ ದೊರೆತಿದ್ದು ಹೆಮ್ಮೆಯ ವಿಷಯ.  ಜಿಲ್ಲೆಯ ಎಲ್ಲ ಪತ್ರಕರ್ತರು ಒಗ್ಗೂಡಿ ಈ ಸಮ್ಮೇಳನ ಯಶಸ್ವಿಗೊಳಿಸಬೇಕು ಎಂದು ಹೇಳಿದರು. ಸಮ್ಮೇಳನದ ಸಿದ್ಧತೆಗೆ ರಚಿಸಲಾದ ನಾನಾ ಸಮಿತಿಗಳ ಸದಸ್ಯರು ತಮ್ಮ […]

Women Cricketer Honoured: ಕ್ರಿಕೆಟ್ ಆಟಗಾರ್ತಿ ಅನ್ನಪುರ್ಣ ಭೋಸಲೆಗೆ ಅಪ್ಪು ಪಟ್ಟಣಶೆಟ್ಟಿ ನೇತೃತ್ವದಲ್ಲಿ ಸನ್ಮಾನ

ವಿಜಯಪುರ: ರಾಜ್ಯ ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿರುವ ಬಸವ ನಾಡಿನ ಪ್ರತಿಭಾನ್ವಿತ ಯುವ ಆಟಗಾರ್ತಿ ಅನ್ನಪೂರ್ಣ ಭೋಸಲೆ ಅವರನ್ನು ವಿಜಯಪುರದಲ್ಲಿ ಸನ್ಮಾನಿಸಿ ಗೌರವಿಸಿದರು. ನಗರದ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಹಾಗೂ ಅವರ ವಾಯು ವಿಹಾರಿಗಳ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ನಗರದ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರ್ಯಾಕ್ಟೀಸ್ ಮಾಡಿರುವ ನೂರಾರು ಯುವಕರು ರಾಜ್ಯ, […]