Conference Preparation: ಬಸವ ನಾಡಿನಲ್ಲಿ ಪತ್ರಕರ್ತರ ರಾಜ್ಯಮಟ್ಟದ 37ನೇ ಸಮ್ಮೇಳನದ ಪೂರ್ವಭಾವಿ ಸಭೆ

ವಿಜಯಪುರ: ಬಸವ ನಾಡು ವಿಜಯಪುರದಲ್ಲಿ ನಡೆಯಲಿರುವ ಪತ್ರಕರ್ತರ ರಾಜ್ಯಮಟ್ಟದ 37ನೇ ಸಮ್ಮೇಳನವನ್ನು ಯಶಸ್ವಿಗೊಳಿಸಲು ಸಂಘದ ಎಲ್ಲ ಸದಸ್ಯರು ಒಟ್ಟಾಗಿ ಕೆಲಸ ಮಾಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಹೇಳಿದ್ದಾರೆ.  ನಗರದ ವನಶ್ರೀ ಸಂಸ್ಥಾನ ಮಠದ ಸಭಾಭವನದಲ್ಲಿ ನಡೆದ ಸಮ್ಮೇಳನದ ಪೂರ್ವಸಿದ್ಧತೆ ಕುರಿತ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಸಮ್ಮೇಳನಕ್ಕೆ ದೊಡ್ಡಮಟ್ಟದ ಸಿದ್ಧತೆ, ವ್ಯವಸ್ಥೆ ಆಗಬೇಕಾಗುತ್ತದೆ.  ಸಮ್ಮೇಳನವನ್ನು ಗಂಭೀರವಾಗಿ ಪರಿಗಣಿಸಿ ಸಂಘದ ಪ್ರತಿಯೊಬ್ಬ ಸದಸ್ಯರೂ ಅದರ ಭಾಗವಾಗಿ ಜವಾಬ್ದಾರಿಯಿಂದ ಕೆಲಸ ಮಾಡಬೇಕು.  ಎಲ್ಲರೂ […]

Ganga Kalyan: ಗಂಗಾ ಕಲ್ಯಾಣ-ವಸತಿ ಯೋಜನೆಗಳ ಫಲಾನುಭವಿಗಳನ್ನು ನಿಗದಿತ ಅವಧಿಯೊಳಗೆ ಆಯ್ಕೆ ಮಾಡಿ- ಕೋಟಾ ಶ್ರೀನಿವಾಸ ಪೂಜಾರಿ

ವಿಜಯಪುರ: ಅಂಬೇಡ್ಕರ್ ಅಭಿವೃದ್ದಿ ನಿಗಮ ಹಾಗೂ ಡಿ. ದೇವರಾಜ್ ಅರಸು ಅಭಿವೃದ್ದಿ ನಿಗಮ ವತಿಯಿಂದ ಗಂಗಾ ಕಲ್ಯಾಣ ಹಾಗೂ ನಾನಾ ವಸತಿ ಯೋಜನೆಗಳ ಫಲಾನುಭವಿಗಳನ್ನು ನಿಗದಿತ ಅವಧಿಯೊಳಗೆ ಆಯ್ಕೆ ಮಾಡುವಂತೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಜಯಪುರ ಜಿಲ್ಲಾ ಪ್ರವಾಸದಲ್ಲಿರುವ ಅವರು ತಿಕೋಟಾ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ಈ ಸಭೆಯಲ್ಲಿ ಮಾತನಾಡಿದ ಅವರು, ನಿಗದಿತ ಅವಧಿಯೊಳಗೆ ಆಯ್ಕೆ […]