Vijayapura Air Port: ಶೀಘ್ರದಲ್ಲಿಯೇ ವಿಜಯಪುರ ವಿಮಾನ ನಿಲ್ದಾಣ ಕಾರ್ಯಾರಂಭ- ಡಾ. ಶೈಲೇಂದ್ರ ಬೆಲ್ದಾಳೆ

ವಿಜಯಪುರ: ವಿಜಯಪುರ ವಿಮಾನ ನಿಲ್ದಾಣದ ಕಾಮಗಾರಿ ಭರದಿಂದ ಸಾಗಿದ್ದು, ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಂಡು ವಿಜಯಪುರ ಜನತೆ ವಿಮಾನದಲ್ಲಿ ಸಂಚರಿಸುವ ಅವಕಾಶ ಲಭ್ಯವಾಗಲಿದೆ ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ವಿಜಯಪುರ ಹೊರವಲಯದ ಬುರಣಾಪುರದಲ್ಲಿ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಅವರು, ಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿದರು.

ವಿಜಯಪುರ ವಿಮಾನ ನಿಲ್ದಾಣವನ್ನು ಎಟಿಆರ್-72 ದಿಂದ ಏರ್‌ಬಸ್ 320 ವಿಮಾನಗಳ ಹಾರಾಟಕ್ಕಾಗಿ ಅನುಕೂಲವಾಗುವಂತೆ ಹೆಚ್ಚುವರಿಯಾಗಿ ರೂ. 127.29 ಕೋ. .ಗಳ ಅನುದಾನದಕ್ಕೆ ಕಾಮಗಾರಿಗೆ ಸರಕಾರ ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಿದೆ.  ಈ ಎಲ್ಲ ತಾಂತ್ರಿಕ ಹಾಗೂ ಭೌತಿಕ ಕಾಮಗಾರಿಗಳು ಶೀಘ್ರದಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು.

ವಿಜಯಪುರದಲ್ಲಿ ವಿಮಾನ ನಿಲ್ದಾಣದಿಂದ ಪ್ರವಾಸೋದ್ಯಮಕ್ಕೆ ದೊಡ್ಡ ಉತ್ತೇಜನ ದೊರಕಲಿದ್ದು, ಕೂಡಲ ಸಂಗಮ, ಆಲಮಟ್ಟಿ, ಕೊಲ್ಲಾಪೂರ, ಸೋಲಾಪುರ ಸೇರಿದಂತೆ ನಾನಾ ಪ್ರಸಿದ್ಧ ತಾಣಗಳಿಗೆ ಹೋಗಲು ಈ ವಿಮಾಣ ನಿಲ್ದಾಣದಿಂದ ಪ್ರವಾಸಿಗರಿಗೆ ಅನುಕೂಲವಾಗಲಿದೆ.  ಈಗಾಗಲೇ ಈ ವಿಮಾನ ನಿಲ್ದಾಣಕ್ಕೆ ಬಸವೇಶ್ವರ ವಿಮಾನ ನಿಲ್ದಾಣ ಎಂದು ಹೆಸರಿಸಲು ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅವರು ಹೇಳಿದರು.

ವಿಜಯಪುರ ಏರಪೋರ್ಟ್ ಕಾಮಗಾರಿ ಸ್ಥಳಕ್ಕೆ ಡಾ. ಶೈಲೇಂದ್ರ ಬೆಲ್ದಾಳೆ, ಅಧಿಕಾರಿಗಳು ಭೇಟಿ ನೀಡಿದರು

ಹವಾಯಿ ಚಪ್ಪಲವಾಲಾ ಭಿ ಹವಾಯಿ ಜಹಾಜ್ ಮೇ ಘೂಮನಾ

ಹವಾಯಿ ಚಪ್ಪಲವಾಲಾ ಬಿ ಹವಾಯಿ ಜಹಾಜ್ ಮೇ ಘೂಮೇಗಾ ಎಂದರೆ ಸಾಮಾನ್ಯ ಮನುಷ್ಯನೂ ವಿಮಾನದಲ್ಲಿ ಹಾರಾಟ ಮಾಡಬೇಕೆಂಬ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಕರ್ನಾಟಕ ಮೂಲ ಸೌಕರ್ಯ ಅಭಿವೃದ್ದಿ ನಿಗಮದಿಂದ ವಿಜಯಪುರ ಸೇರಿದಂತೆ ರಾಜ್ಯದ ಶಿವಮೊಗ್ಗ, ಹಾಸನ, ರಾಯಚೂರು, ದಾವಣಗೆರೆ, ಕೊಪ್ಪಳ, ಬಳ್ಳಾರಿ ಹಾಗೂ ಕಾರವಾರ ಗ್ರೀನ್ ಫೀಲ್ಡ್ ಸೇರಿದಂತೆ ಒಟ್ಟು 14 ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಮಾಡಲು ಉದ್ದೇಶಿಸಲಾಗಿದೆ ಎಂದು ಅವರು ಹೇಳಿದರು.

ಕೆಎಸ್‌ಐಡಿಸಿ ವ್ಯವಸ್ಥಾಪಕ ನಿರ್ದೇಶಕ ಡಾ. ಎಂ. ಆರ್. ರವಿ ಮಾತನಾಡಿ, ಸೀ-ಪ್ಲೇನ್‌ಗಳ ಸಂಚಾರಕ್ಕೆ ಕೇಂದ್ರ ಸರಕಾರರ ಆದ್ಯತೆ ನೀಡಿದೆ.  ಅದರನ್ವಯ ರಾಜ್ಯದಲ್ಲಿಯೂ ಈ ಮಾದರಿಯ ಸೀ-ಪ್ಲೇನ್‌ಗಳ ಹಾರಾಟದ ಮೂಲಕ ಸಾಹಸ ಪ್ರವಾಸೋದ್ಯಮ (ಅಡ್ವೆಂಚರ್ ಟೂರಿಸಂ) ಉತ್ತೇಜಿಸಲು ರಾಜ್ಯ ಸರಕಾರ ಕಾರ್ಯ ಯೋಜನೆ ರೂಪಿಸುತ್ತಿದ್ದು, ಆಲಮಟ್ಟಿ ಜಲಾಶಯದಲ್ಲಿಯೂ ಸಹ ಸೀ-ಪ್ಲೇನ್ ಹಾರಾಟದ ಅವಕಾಶ ಕಲ್ಪಿಸಲು ಪ್ರಸ್ತಾವನೆಯಲ್ಲಿ ಉಲ್ಲೇಖಿಸಲಾಗಿದೆ.  ಅಲ್ಲದೇ, ಈ ಕಾರ್ಯಕ್ಕೆ ಈ ವಿಮಾನ ನಿಲ್ದಾಣ ಪೂರಕವಾಗಲಿದೆ.  ರಾಜ್ಯದ ಕಬಿನಿ, ಕೆಆರ್‌ಎಸ್, ಹಿಡಕಲ್ ಹಾಗೂ ಆಲಮಟ್ಟಿ ಜಲಾಶಯದಲ್ಲಿ ಸೀ-ಪ್ಲೇನ್ ಹಾರಟಕ್ಕೆ ಅವಕಾಶದ ಕುರಿತು ಸಮೀಕ್ಷೆ ನಡೆಸಲು ಈಗಾಗಲೇ ಕೆಎಸ್‌ಐಐಡಿಸಿ ಅಧ್ಯಯನ ನಡೆಸುತ್ತಿದೆ ಎಂದು ಡಾ. ಶೈಲೇಂದ್ರ ಬೆಲ್ದಾಳೆ ತಿಳಿಸಿದರು.

ವಿಮಾನ ನಿಲ್ದಾಣದ ಭೌತಿಕ ಹಾಗೂ ತಾಂತ್ರಿಕ ಕಾಮಗಾರಿಗಳ ಪ್ರಗತಿಯ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮವರ, ವಿಜಯಪುರ ವಿಮಾನ ನಿಲ್ದಾಣದಲ್ಲಿ ಎಟಿಆರ್-72 ಮಾದರಿಯ ವಿಮಾನಗಳ ಹಾರಾಟಕ್ಕಾಗಿ ರೂ. 220 ಕೋ. ಮಂಜೂರಾಗಿದ್ದು, ಎರಡು ಹಂತದಲ್ಲಿ ಕಾಮಗಾರಿಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.  ಮೊದಲನೇ ಹಂತದ ಕಾಮಗಾರಿಗಾಗಿ ರೂ. 95 ಕೋ. ಹಾಗೂ ಎರಡನೇಯ ಹಂತದ ಕಾಮಗಾರಿಗೆ ರೂ. 125 ಕೋ. ಗಳನ್ನು ಕಾಯ್ದಿರಿಸಲಾಗಿದೆ.  ಮೊದಲನೇಯ ಹಂತದ ಕಾಮಗಾರಿಯಲ್ಲಿ ಶೇ.64.75 ರಷ್ಟು ಭೌತಿಕ ಹಾಗೂ 64.75 ಆರ್ಥಿಕ ಪ್ರಗತಿ ಸಾಧಿಸಲಾಗಿದೆ.  ಎರಡನೇಯ ಹಂತದ ಸಿವಿಲ್ ಕಾಮಗಾರಿ ಭೌತಿಕ ಪ್ರಗತಿ ಶೇ. 40.93 ರಷ್ಟಾಗಿದ್ದು, ಆರ್ಥಿಕ ಪ್ರಗತಿ ಶೇ.40.93 ರಷ್ಟಾಗಿದೆ ಎಂದು ಹೇಳಿದರು.

ಎರಡನೇಯ ಹಂತದ ರೂ. 125 ಕೋ. ಅನುದಾನವನ್ನು ಎರಡು ಉಪಕಾಮಗಾರಿಗಳಾಗಿ ವಿಂಗಡಿಸಿ ರೂ. 106 ಕೋ. ವೆಚ್ಚದಲ್ಲಿ ಸಿವಿಲ್ ಕಾಮಗಾರಿ ಹಾಗೂ ರೂ. 19 ಕೋ. ವೆಚ್ಚದಲ್ಲಿ ಏವಿಯೋನಿಕ್ಸ್, ಸೆಕ್ಯೂರಿಟಿ ಇಕ್ಸೂಪಮೆಂಟ್ಸ್ ಉಪಕಾಮಗಾರಿಗೆ ವಿಂಗಡನೆ ಮಾಡಲಾಗಿದೆ.  ಈ ಉಪಕಾಮಗಾರಿ ಅಡಿಯಲ್ಲಿ ಬ್ಯಾಗೇಜ್ ಹ್ಯಾಂಡಲಿಂಗ್, ಸೆಕ್ಯೂರಿಟಿ ಸ್ಕಾö್ಯನರ್, ಲ್ಯಾನ್, ಎ.ಸಿ. ಪ್ಲೆöÊಟ್ ಇನಾರ್ಫಾಮೇಷನ್ ಡಿಸಪ್ಲೇ ಇತರೆ ಕಾಮಗಾರಿಯನ್ನು ಅಭಿವೃದ್ಧಿ ಪಡಿಸಲು ಯೋಜಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು ಎಲ್‌ಓಎ ನೀಡಲಾಗಿದೆ ಎಂದು ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ತಿಳಿಸಿದರು.

ಈ ಸಂದರ್ಭದಲ್ಲಿ ಎಸ್ಪಿ ಎಚ್. ಡಿ. ಆನಂದಕುಮಾರ, ಜಿ, ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ, ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲ ಸೌಲಭ್ಯ ಅಭಿವೃದ್ದಿ ನಿಗಮದ ಕಾರ್ಯಕಾರಿ ನಿರ್ದೇಶಕ ಡಿ. ಪಿ. ಪ್ರಕಾಶ, ಸೈನಿಕ ಶಾಲೆಯ ಪ್ರಾಂಶುಪಾಲ ಗ್ರೂಪ್ ಕ್ಯಾಪ್ಟನ್ ಪ್ರತಿಭಾ ಭಿಷ್ಟ, ಲೋಕೋಪಯೋಗಿ ಇಲಾಖೆಯ ಎಇಇ ರಾಜು ಮುಜುಂದಾರ, ಇ. ಬಿ. ಚಿಕ್ಕಲಕಿ, ಎಇ ರವಿ ಪವಾರ, ರೇವಣ್ಣ ಮಸಳಿ, ಹೈಡೆಕ್ ಪಿಎಂಸಿ ಜೋಸ್ ಥಾಮಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಅಧಿಕಾರಿಗಳ ಸಭೆ

ಈ ಭೇಟಿ ಬಳಿಕ ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.  ವಿಮಾನ ನಿಲ್ದಾಣಕ್ಕೆ ದಿನದ 24 ಗಂಟೆ ನೀರು ಸರಬರಾಜು ಸೌಲಭ್ಯ ಪ್ರಗತಿಯಲ್ಲಿದ್ದು, 2000 ಕಿಲೋ ವ್ಯಾಟ್ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಯ ತಾಂತ್ರಿಕ ಅನುಮೋದನೆಯ ಹಂತಲ್ಲಿದೆ.  ಪರಿಷ್ಕೃತ ಅಂದಾಜು ಪತ್ರಿಕೆಯು ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಂದ ಅನುಮೋದನೆಯಾಗಿದ್ದು, ಬೆಳಗಾವಿ ಮುಖ್ಯ ಅಭಿಯಂತರರಿAದ ತಾಂತ್ರಿಕ ಅನುಮೋದನೆ ಪಡೆಯಬೇಕು.  ಶೀಘ್ರದಲ್ಲಿಯೇ ಟೆಂಡರ್ ಆಹ್ವಾನಿಸಿ ಇತರೆ ಕಾಮಗಾರಿ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ವಿಜಯಪುರ ವಿಮಾನ ನಿಲ್ದಾಣವನ್ನು ಎಟಿಆರ್-72 ದಿಂದ ಏರ್‌ಬಸ್-320 ವಿಮಾನಗಳ ಹಾರಾಟಕ್ಕೆ ರೂ. 127.92 ಕೋಟಿ ಹೆಚ್ಚುವರಿ ಮೊತ್ತದಲ್ಲಿ ಮೇಲ್ದರ್ಜೆಗೇರಿಸುವ ಅಂದಾಜು ಪತ್ರಿಕೆಗೆ ಸರಕಾರದಿಂದ ಆಡಳಿತಾತ್ಮಕ ಅನುಮೊದನೆ ದೊರೆತಿದ್ದು, ತ್ವರಿತವಾಗಿ ತಾಂತ್ರಿಕ ಅನುಮೋದನೆ ಪಡೆಯಲು ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಜಮೀನಿನ ಭೂಸ್ವಾಧೀನ ಕುರಿತಂತೆ ಸಂಬಂಧಿಸಿದ ಇಲಾಖೆಗಳು ಜಿಲ್ಲಾಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿಕೊಂಡು ವಿಳಂಬ ಮಾಡದೇ ಈ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಡಾ. ಶೈಲೇಂದ್ರ ಬೆಲ್ದಾಳೆ ಸೂಚನೆ ನೀಡಿದರು.

ಈ ಸಭೆಯಲ್ಲಿ ಲೋಕೋಪಯೋಗಿ ಇಲಾಖೆ ಸೇರಿದಂತೆ ನಾನಾ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌