Hadagali Programme: ಹಡಗಲಿಯಲ್ಲಿ ಡಿಸಿ ನಡೆ ಹಳ್ಳಿಯ ಕಡೆ- ವಿಜಯಪುರ ತಹಸೀಲ್ದಾರ ಭಾಗಿ

ವಿಜಯಪುರ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ವಿಜಯಪುರ ತಾಲೂಕಿನ ಹಡಗಲಿ ಗ್ರಾಮದಲ್ಲಿ ನಡೆಯಿತು.

ಈ ಕಾರ್ಯಕ್ರಮದ ಅಂಗವಾಗಿ ವಿಜಯಪುರ ತಹಸೀಲ್ದಾರ ಸಿದರಾಯ ಭೋಸಗಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ನಾನಾ ಫಲಾನುಭವಿಗಳಿಗೆ ಸರ್ಟಿಫಿಕೇಟ್ ನೀಡಲಾಯಿತು.

ಹಡಗಲಿಯಲ್ಲಿ ಎತ್ತಿನ ಗಾಡಿಯಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಂಡ ತಹಸೀಲ್ದಾರ ಸಿದರಾಯ ಭೋಸಗಿ

ಇದಕ್ಕಿಂತಲೂ ಮೊದಲು ಅಧಿಕಾರಿಗಳನ್ನು ಎತ್ತಿನ ಗಾಡಿಯಲ್ಲಿ ಮೆರವಣಿಗೆ ಮೂಲಕ ಕರೆತರಲಾಯಿತು.

ಈ ಸಂದರ್ಭದಲ್ಲಿ ಗ್ರೇಡ್-2 ತಹಸೀಲ್ದಾರ ಐ. ಎಚ್. ತುಂಬಗಿ, ಉಪತಹಸೀಲ್ದಾರ ಡಿ. ಬಿ. ಭೋವಿ, ಕಂದಾಯ ನಿರೀಕ್ಷಕ ವಿಜಯಕುಮಾರ ಗುಮಶೆಟ್ಟಿ, ನಾನಾ ಇಲಾಖೆಗಳ ಅಧಿಕಾರಿಗಳು, ಹಡಗಲಿ ಗ್ರಾ. ಪಂ. ಅಧ್ಯಕ್ಷರು, ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌