Teachers Knowledge: ಆಧುನಿಕತೆಗೆ ತಕ್ಕಂತೆ ಶಿಕ್ಷಕರು ತಂತ್ರಜ್ಞಾನ ಆಧರಿತ ಶಿಕ್ಷಣ ಬೋಧಿಸಲಿ- ಪ್ರೊ. ತೇಜಸ್ವಿ ಕಟ್ಟಿಮನಿ

ವಿಜಯಪುರ: ಆಧುನೀಕತೆಗೆ ತಕ್ಕಂತೆ ಶಿಕ್ಷಕರು ಜ್ಞಾನ ವೃದ್ಧಿಸಿಕೊಂಡು ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಆಧಾರಿತ ಕೌಶಲ್ಯಪೂರ್ಣ ಶಿಕ್ಷಣ ನೀಡಬೇಕು ಎಂದು ಆಂಧ್ರ ಪ್ರದೇಶ ಕೇಂದ್ರೀಯ ಆದಿವಾಸಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ತೇಜಸ್ವಿ ಕಟ್ಟಿಮನಿ ಹೇಳಿದರು. ಬಿ.ಎಲ್.ಡಿ.ಇ.ಸಂಸ್ಥೆಯ ಸ.ಬ.ಕಲಾ ಮತ್ತು ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದ ಅಮೃತ ಮಹೋತ್ಸವ ವರ್ಷಾಚರಣೆ ಹಾಗೂ 2022-23 ನೇ ಸಾಲಿನ ಶೈಕ್ಷಣಿಕ ವರ್ಷದ ಸಾಂಸ್ಕøತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಶಿಕ್ಷಕರು ಅಗತ್ಯಗನುಗುಣವಾಗಿ ಮೌಲ್ಯಯುತ ಶಿಕ್ಷಣ ನೀಡುವುದರ ಜೊತೆಗೆ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ […]