MBP Tour: ನ. 26ರಂದು ಬಬಲೇಶ್ವರ ಮತಕ್ಷೇತ್ರದಲ್ಲಿ ಎಂ. ಬಿ. ಪಾಟೀಲ ಪ್ರವಾಸ- ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ವಿಜಯಪುರ: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಬಬಲೇಶ್ವರ ಶಾಸಕ ಎಂ. ಬಿ. ಪಾಟೀಲರ ನಾಳೆ ನ. 26ರಂದು ಶನಿವಾರ ಬಬಲೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡು ನಾನಾ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಬೆ.10 ಗಂ. ಅರಕೇರಿಯಲ್ಲಿ 55.99 ಲಕ್ಷ ವೆಚ್ಚದಲ್ಲಿ ರೂ.‌ ನಿರ್ಮಿಸಲಾಗುತ್ತಿರುವ ಅರಕೇರಿ-ಬರಟಗಿ ಹಳ್ಳಕ್ಕೆ ಬಾಂದಾರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಲಿದ್ದಾರೆ. ಅರಕೇರಿ ಗ್ರಾಮದಲ್ಲಿ ನಿರ್ಮಿಸಲಾಗಿರುವ ರೂ. 31.50 ಲಕ್ಷ ವೆಚ್ಚದ ಪ್ರೌಢ ಶಾಲೆ ಕಟ್ಟಡ ಉದ್ಘಾಟಿಸಲಿದ್ದಾರೆ. ಬಳಿಕ ಅರಕೇರಿ ಬಿಸೇನ್ […]

Danammadevi Jatre: ಗುಡ್ಡಾಪುರ ದಾನಮ್ಮದೇವಿ ಜಾತ್ರೆ ರಥೋತ್ಸವಕ್ಕೆ ಚಾಲನೆ ನೀಡಿದ ವಿಜಯಪುರ ಡಿಸಿ, ಸಾಂಗಲಿ ಎಸ್ಪಿ

ವಿಜಯಪುರ: ಉತ್ತರ ಕರ್ನಾಟಕದ ಆರಾಧ್ಯ ದೈವ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜತ್ ತಾಲೂಕಿನ ಗುಡ್ಡಾಪುರ ದಾನಮ್ಮದೇವಿ ಜಾತ್ರೆಯ ರಥೋತ್ಸವಕ್ಕೆ ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮತ್ತು ಸಾಂಗಲಿ ಎಸ್ಪಿ ಬಸವರಾಜ ತೇಲಿ ಚಾಲನೆ ನೀಡಿದರು. ಸುಕ್ಷೇತ್ರ ಗುಡ್ಡಾಪುರದಲ್ಲಿ ಪ್ರತಿ ವರ್ಷ ಚಟ್ಟಿ ಅಮವಾಸ್ಯೆಯಂದು ದಾನಮ್ಮದೇವಿ ಜಾತ್ರೆ ನಡೆಯುತ್ತದೆ.  ಈ ಕಾರ್ಯಕ್ರಮಕ್ಕೆ ತೆರಳಿದ ಸಾಂಗಲಿ ಎಸ್ಪಿ ಮತ್ತು ವಿಜಯಪುರ ಜಿಲ್ಲಾಧಿಕಾರಿಗಳು ದಾನಮ್ಮದೇವಿಗೆ ಪೂಜೆ ಸಲ್ಲಿಸಿದರು.  ಡಾ. ದಾನಮ್ಮನವರ ಕುಂಬಳಕಾಯಿಯನ್ನು ನಿವಾಳಿಸಿದರು.  ಈ ಸಂದರ್ಭದಲ್ಲಿ ಟ್ರಸ್ಟ್ ಕಮಿಟಿಯ […]