Danammadevi Jatre: ಗುಡ್ಡಾಪುರ ದಾನಮ್ಮದೇವಿ ಜಾತ್ರೆ ರಥೋತ್ಸವಕ್ಕೆ ಚಾಲನೆ ನೀಡಿದ ವಿಜಯಪುರ ಡಿಸಿ, ಸಾಂಗಲಿ ಎಸ್ಪಿ

ವಿಜಯಪುರ: ಉತ್ತರ ಕರ್ನಾಟಕದ ಆರಾಧ್ಯ ದೈವ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜತ್ ತಾಲೂಕಿನ ಗುಡ್ಡಾಪುರ ದಾನಮ್ಮದೇವಿ ಜಾತ್ರೆಯ ರಥೋತ್ಸವಕ್ಕೆ ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮತ್ತು ಸಾಂಗಲಿ ಎಸ್ಪಿ ಬಸವರಾಜ ತೇಲಿ ಚಾಲನೆ ನೀಡಿದರು.

ಗುಡ್ಡಾಪುರ ದಾನಮ್ಮದೇವಿ ರಥೋತ್ಸವಕ್ಕೆ ಚಾಲನೆ ನೀಡಿದ ವಿಜಯಪುರ ಡಿಸಿ, ಸಾಂಗಲಿ ಎಸ್ಪಿ

ಸುಕ್ಷೇತ್ರ ಗುಡ್ಡಾಪುರದಲ್ಲಿ ಪ್ರತಿ ವರ್ಷ ಚಟ್ಟಿ ಅಮವಾಸ್ಯೆಯಂದು ದಾನಮ್ಮದೇವಿ ಜಾತ್ರೆ ನಡೆಯುತ್ತದೆ.  ಈ ಕಾರ್ಯಕ್ರಮಕ್ಕೆ ತೆರಳಿದ ಸಾಂಗಲಿ ಎಸ್ಪಿ ಮತ್ತು ವಿಜಯಪುರ ಜಿಲ್ಲಾಧಿಕಾರಿಗಳು ದಾನಮ್ಮದೇವಿಗೆ ಪೂಜೆ ಸಲ್ಲಿಸಿದರು.  ಡಾ. ದಾನಮ್ಮನವರ ಕುಂಬಳಕಾಯಿಯನ್ನು ನಿವಾಳಿಸಿದರು.  ಈ ಸಂದರ್ಭದಲ್ಲಿ ಟ್ರಸ್ಟ್ ಕಮಿಟಿಯ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಮತ್ತು ಸಾವಿರಾರು ಜನ ಭಕ್ತರು ಉಪಸ್ಥಿತರಿದ್ದರು.

ಬಳಿಕ ರಥೋತ್ಸವ ಸಾಂಗವಾಗಿ ನೆರವೇರಿತು.  ಕರ್ನಾಟಕ ಮತ್ತು ಮಹಾರಾಷ್ಟ್ರದಿಂದ ಬಂದಿದ್ದ ಸಹಸ್ರಾರು ಭಕ್ತರು ಈ ಜಾತ್ರೆಯಲ್ಲಿ ಪಾಲ್ಗೋಂಡು ಭಕ್ತಿಭಾವ ತೋರಿದರು.

Leave a Reply

ಹೊಸ ಪೋಸ್ಟ್‌