Advocates Day: ನ್ಯಾಯವಾದಿಗಳ ಸಂಘದ ಆಶ್ರಯದಲ್ಲಿ ವಕೀಲರ ದಿನ ಆಚರಣೆ

ವಿಜಯಪುರ: ಜಿಲ್ಲಾ ನ್ಯಾಯಾಲಯ ಸಂಕೀರ್ಣದ ವಕೀಲರ ಭವನದಲ್ಲಿ ವಕೀಲರ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡ ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾ ನ್ಯಾಯಾಂಗ ಇಲಾಖೆ, ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರ, ಹಾಗೂ ಬಿ.ಎಲ್.ಡಿ.ಈ. ಆಸ್ಪತ್ರೆ, ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಶಂಕರ ಹೃದಯಾಲಯ ಸಂಯುಕ್ತಾಶ್ರಯದಲ್ಲಿ ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ಈ ಕಾರ್ಯಕ್ರಮವನ್ನು ಜಿಲ್ಲಾ ಒಂದನೇಯ ಹೆಚ್ಚುವರಿ ಸತ್ರ ನ್ಯಾಯಾಧೀಶ ಸತೀಶ ಎಲ್.ಪಿ ಉದ್ಘಾಟಿಸಿದರು. ಹಿರಿಯ ನ್ಯಾಯವಾದಿಗಳು ಎಂ.ಜಿ.ಮಠಪತಿ ಅವರು ವಕೀಲರ ದಿನಾಚರಣೆ ಕುರಿತು ಮಾತನಾಡಿದರು. […]

Cultural Evening: ವಿಜಯಪುರ ನಗರದ ಆನಂದ ಮಹಲ್ ನಲ್ಲಿ ಗಮನ ಸೆಳೆದ ಸಾಂಸ್ಕøತಿಕ ಸಂಜೆ ಕಾರ್ಯಕ್ರಮ

ವಿಜಯಪುರ: ನಗರದ ಆನಂದ ಮಹಲ್ ಸ್ಮಾರಕ ಆವರಣದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರ ಸಹಯೋಗದಲ್ಲಿ ನಡೆದ ಸಾಂಸ್ಕøತಿಕ ಸಂಜೆ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನಡೆಯಿತು.  ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ, ವಿಜಯಪುರ ಜಿಲ್ಲೆಯ ಪ್ರವಾಸೋದ್ಯಮ ಬೆಳವಣಿಗೆಗೆ ಹಾಗೂ ಸ್ಥಳೀಯ ಕಲಾವಿದರನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಪ್ರತಿ ಮಾಹೆಯ ಮೊದಲನೇ ಶನಿವಾರ ಐತಿಹಾಸಿಕ ಆನಂದ ಮಹಲ್ ಸ್ಮಾರಕ ಆವರಣದಲ್ಲಿ ‘ಸಾಂಸ್ಕøತಿಕ ಸಂಜೆ’ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. […]

Harihar Yatnal: ನಿರಾಣಿ ಸಚಿವರಾಗಲು ಪೀಠ ಕಟ್ಟಿದ್ದಾರೆ- ಹರಿಹರ ಶ್ರೀ ಬ್ರೋಕರ್- ಶಾಸಕ‌ ಯತ್ನಾಳ

ವಿಜಯಪುರ: ಹರಿಹರ ಪಂಚಮಸಾಲಿ ಪೀಠಾಧೀಶ ವಚನಾನಂದ ಸ್ವಾಮೀಜಿ ಓರ್ವ ಬ್ರೋಕರ್ ಎಂದು ವಿಜಯಪುರ ನಗರ ಬಿಜೆಪಿ ಶಾಸಕ‌ ಬಸನಗೌಡ ಪಾಟೀಲ‌ ಯತ್ನಾಳ ಕಿಡಿ ಕಾರಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧ ಜೋಕರ್ ಪದ ಬಳಕೆ ಮಾಡಿರುವ ಪಚನಾನಂದ ಶ್ರೀಗಳ ವಿರುದ್ಧ ಹರಿಹಾಯ್ದರು. ಹರಿಹರ ಪೀಠದ ಸ್ವಾಮೀಜಿ ಬ್ರೋಕರ್ ಸ್ವಾಮಿ ಆಗಿದ್ದಾರೆ. ಹಣ ವಸೂಲಿ ಮಾಡುವುದು, ಮಂತ್ರಿ ಮಾಡಿ ಎಂದು ಹಣ ಕೇಳುವ ಕೆಲಸ ಮಾಡುತ್ತಾರೆ. ಮಂತ್ರಿ ಮಾಡಿ ಎಂದು ಬ್ರೋಕರ್ ಕೆಲಸ ಮಾಡುತ್ತಾರೆ […]