Harihar Yatnal: ನಿರಾಣಿ ಸಚಿವರಾಗಲು ಪೀಠ ಕಟ್ಟಿದ್ದಾರೆ- ಹರಿಹರ ಶ್ರೀ ಬ್ರೋಕರ್- ಶಾಸಕ‌ ಯತ್ನಾಳ

ವಿಜಯಪುರ: ಹರಿಹರ ಪಂಚಮಸಾಲಿ ಪೀಠಾಧೀಶ ವಚನಾನಂದ ಸ್ವಾಮೀಜಿ ಓರ್ವ ಬ್ರೋಕರ್ ಎಂದು ವಿಜಯಪುರ ನಗರ ಬಿಜೆಪಿ ಶಾಸಕ‌ ಬಸನಗೌಡ ಪಾಟೀಲ‌ ಯತ್ನಾಳ ಕಿಡಿ ಕಾರಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧ ಜೋಕರ್ ಪದ ಬಳಕೆ ಮಾಡಿರುವ ಪಚನಾನಂದ ಶ್ರೀಗಳ ವಿರುದ್ಧ ಹರಿಹಾಯ್ದರು.

ಹರಿಹರ ಪೀಠದ ಸ್ವಾಮೀಜಿ ಬ್ರೋಕರ್ ಸ್ವಾಮಿ ಆಗಿದ್ದಾರೆ. ಹಣ ವಸೂಲಿ ಮಾಡುವುದು, ಮಂತ್ರಿ ಮಾಡಿ ಎಂದು ಹಣ ಕೇಳುವ ಕೆಲಸ ಮಾಡುತ್ತಾರೆ. ಮಂತ್ರಿ ಮಾಡಿ ಎಂದು ಬ್ರೋಕರ್ ಕೆಲಸ ಮಾಡುತ್ತಾರೆ ಎಂದು ಯತ್ನಾಳ ಆಕ್ರೋಶ ವ್ಯಕ್ಯಪಡಿಸಿದರು.

ಹರಿಹರದ ವಚನಾನಂದ ಶ್ರೀಗಳು ರೂ.‌ 10 ಕೋಟಿ ವಸೂಲಿ ಮಾಡಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಅವರಿಂದ ಹರಿಹರ ಶ್ರೀಗಳು ರೂ. 10 ಕೋಟಿ ಹಣ ವಸೂಲು ಮಾಡಿದ್ದಾರೆ. ಮಠದಲ್ಲಿ ಅಭಿವೃದ್ಧಿ ಕಾಮಗಾರಿ ಮಾಡುತ್ತೇವೆ ಎಂದು ಹಣ ಪಡೆದಿದ್ದಾರೆ‌. ಮಠದಲ್ಲಿ ಹಣದ ವಿಚಾರದಲ್ಲಿ ಬಳಹ ಅವ್ಯವಹಾರ ಮಾಡಿದ್ದಾರೆ. ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಅವ್ಯವಹಾರದ ಬಗ್ಗೆ ಚರ್ಚೆ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ವಚನಾನಂದ ಶ್ರೀಗಳ ಬಣ್ಣ ಬಯಲು ಮಾಡುತ್ತೇನೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಸಚಿವ ಮುರುಗೇಶ ನಿರಾಣಿ ವಿರುದ್ಧ ವಾಗ್ದಾಳಿ

ಪಂಚಮಸಾಲಿ ಮೂರು ಪೀಠ ಸ್ಥಾಪನೆ ವಿಚಾರ ಕುರಿತು ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಶಾಸಕರು, ಅವರು ಯಾವ ಮಠ ಕಟ್ಟಿದ್ದಾರೆ, ಯಾಕೆ ಕಟ್ಟಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಯಾರು ಮಠ ಕಟ್ಟಿದ್ದರು? ಯಾರು ಬೆನ್ನಿಗೇ ಚೂರು ಹಾಕಿದರು ಎಲ್ಲವೂ ಗೊತ್ತಿದೆ. ಯಾವ ಕಾರಣಕ್ಕೆ ಮಠ ಕಟ್ಟಿದ್ದಾರೆ ಎಂದು ಜನರಿಗೆ ಗೊತ್ತಾಗಿದೆ. ಮಠ ಕಟ್ಟಿದ್ದು ಸಮಾಜದ ಉದ್ದಾರಕ್ಕಲ್ಲ, ಬದಲಾಗಿ ಮಂತ್ರಿ ಸ್ಥಾನಕ್ಕಾಗಿ. ಮುಂದಿನ ದಿನಗಳಲ್ಲಿ ಜನರೇ ಅದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಶಾಸಕರು ಬಸನ ಪ್ರತಿಕ್ರಿಯೆ ನೀಡಿದರು.

ಬಿಜೆಪಿಗೆ ರೌಡಿ ಶೀಟರ್ ಗಳ ಸೇರ್ಪಡೆ ವಿಚಾರ

ಬಿಜೆಪಿಗೆ ರೌಡಿ ಶೀಟರ್ ಗಳು ಸೇರ್ಪಡೆಯಾಗುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಮಾಡುತ್ತಿರುವ ಟೀಕೆ ಕುರಿತು ಮಾತನಾಡಿದ ಅವರು, ಕೊತ್ವಾಲ ರಾಮಚಂದ್ರನ ಶಿಷ್ಯರ ಕಡೆಯಿಂದ ನಾವು ಪಾಠ ಕಲಿಯಬೇಕಿಲ್ಲ. ಕೊತ್ವಾಲ ರಾಮಚಂದ್ರ ಬೆಂಗಳೂರಿಗೆ ದೊಡ್ಡ ರೌಡಿ. ಅವನಿಗೆ ಸಿಗರೇಟ್ ತಂದು ಕೊಡುತ್ತಿದ್ದವರು ನಮಗೆ ಪಾಠ ಮಾಡುತ್ತಿದ್ದಾರೆ. ಬ್ಲೂ ಫೀಲಂ ನಡೆಸುವವರು ಬಿಜೆಪಿ ಬಗ್ಗೆ ಹೇಳಿಕೆ ಕೊಡುವ ನೈತಿಕತೆ ಇಲ್ಲ ಎಂದು ಟೀಕಿಸಿದರು.

ಶಾಸಕ ಎಂ. ಬಿ. ಪಾಟೀಲ ವಾಗ್ದಾಳಿ ವಿಚಾರ‌

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಲ್ಷ ಎಂ. ಬಿ. ಪಾಟೀಲ ಅವರು‌ ಈ ಬಾರಿ‌ ವಿಜಯಪುರದಿಂದ ಕಾಂಗ್ರೆಸ್ಸಿನಿಂದ ಮುಸ್ಲಿಂ‌ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಗೆಲ್ಲುಸುವುದಾಗಿ ವಿಶ್ವಾಸ ವ್ಯಕ್ತಪಡಿಸಿರುವ ಕುರಿತು ಪ್ರತಿಕ್ರಿತೆ ನೀಡಿದ ಯತ್ನಾಳ, ಎಂ. ಬಿ. ಪಾಟೀಲ‌ ಕಾಂಗ್ರೆಸ್ ನಾಯಕರಿದ್ದಾರೆ. ಅವರು ಮಾತನಾಡಬೇಕಾಗುತ್ತದೆ. ಎಂ. ಬಿ. ಪಾಟೀಲ ನಮ್ಮನ್ನು ಸೋಲಿಸಬೇಕು ಎಂದಿದ್ದಾರೆ. ಆದರೆ, ನಾನು ಅವರನ್ನು ಸೋಲಿಸಬೇಕು ಎಂದು ಹೇಳುತ್ತೇನೆ. ಅವರು ಕಾಂಗ್ರೆಸ್, ನಾನು ಬಿಜೆಪಿ. ನನ್ನನ್ನು ಸೋಲಿಸಲು 10 ಜನ ಎಂ. ಬಿ‌. ಪಾಟೀಲ್ ಬಂದರೂ ಸಾಧ್ಯವಿಲ್ಲ. ಎಂ. ಬಿ. ಪಾಟೀಲ್ಲ ಅವರನ್ನು ಅವರದೇ ಪಕ್ಷದ ಇಬ್ಬರು ಶಾಸಕರು ಸೋಲಿಸುವುದಾಗಿ ಹೇಳಿದ್ದಾರೆ. ನನ್ನನ್ನು ಸೋಲಿಸುವುದು ಎಂ. ಬಿ. ಪಾಟೀಲ ಅಲ್ಲ. ಜನ ಅದನ್ನು ತೀರ್ಮಾನ ಮಾಡುತ್ತಾರೆ‌. ಎಲ್ಲಮ್ಮನ ಗುಡ್ಡದಾಗ ಮುಲ್ಲಾದು ಏನ್ ಕೆಲಸ ಎಂದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾರ್ಮಿಕವಾಗಿ ಹೇಳಿದರು.

Leave a Reply

ಹೊಸ ಪೋಸ್ಟ್‌