ಸ್ಪೂರ್ತಿ ಫೌಂಡೇಶನ್ ವತಿಯಿಂದ ಸಾಧಕತಿಗೆ ಸನ್ಮಾನ- ಎಂ ಎಲ್ ಸಿ ಸುನೀಲಗೌಡ ಪಾಟೀಲ ಭಾಗಿ

ವಿಜಯಪುರ: ಸ್ಪೂರ್ತಿ ಫೌಂಡೇಶನ್ ವಿದ್ಯಾರ್ಥಿಗಳಿಗಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ. ಈ ಸಂಸ್ಥೆಯ ಸ್ವಂತ ಕಟ್ಟಡ ನಿರ್ಮಾಣಕ್ಕೆ ಶಾಸಕರ ಅನುದಾನದಿಂದ ರೂ. 20 ಲಕ್ಷ ಅನುದಾನ ನೀಡುವುದಾಗಿ ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಹೇಳಿದ್ದಾರೆ. ವಿಜಯಪುರ ನಗರದ ಸ್ಪೂರ್ತಿ ಫೌಂಡೇಶನ್, ವಿಜಯಪುರ ಗ್ರಂಥಾಲಯ ವತಿಯಿಂದ ಗ್ರಂಥಾಲಯದಲ್ಲಿ ಓದಿ ಉತ್ತೀರ್ಣರಾಗಿ ನಾನಾ ಇಲಾಖೆಗಳ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸನ್ಮಾನಿ ಸಮಾರಂಭದಲ್ಲಿ ಅವರು ಮಾತನಾಡಿದರು. ಇಂದಿನ ದಿನಗಳಲ್ಲಿ ಬಡ ವಿದ್ಯಾರ್ಥಿಗಳಿಗೆ ಸ್ಪೂರ್ತಿ ಪೌಂಡೇಶನ್ ನಿಸ್ವಾರ್ಥ ಸೇವೆ ಒದಗಿಸುತ್ತಿದೆ. ರಾಜಕಾರಣಿಗಳು […]

Congress Ambedkar: ಕಾಂಗ್ರೆಸ್ ಕಚೇರಿಯಲ್ಲಿ‌ ಡಾ. ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನಾಚರಣೆ

ವಿಜಯಪುರ: ಭಾರತ ರತ್ನ ಸಂವಿಧಾನ ಶಿಲ್ಪಿ, ಮಹಾಮಾನವತಾವಾದಿ, ಸಮಾನತೆಯ ಹರಿಕಾರ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ 66ನೇ ಮಹಾಪರಿನಿರ್ವಾಣ ದಿನವನ್ನು ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು. ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಮುಖಂಡರು‌ ಅಂಬೇಡ್ಕರ ಅವರ ಕೊಡುಗೆಯನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ, ಚೈತ್ಯಭೂಮಿ ಮುಂಬಯಿಯಲ್ಲಿ ಲಕ್ಷಾಂತರ ಜನ ಸೇರಿ ಮಹಾಪರಿನಿರ್ವಾಣ ದಿನ ಆಚರಿಸಿ ಗೌರವ ಸಲ್ಲಿಸಿದರು. ಅಂದಿನಿಂದ ಇಂದಿನರೆಗೂ ಈ ಪ್ರಕ್ರಿಯೆ ನಡೆಯುತ್ತ ಬಂದಿದೆ. […]

ಎಂ ಎಲ್ ಸಿ ಫಂಡ್‍ನಿಂದ ಮೂರು ಆ್ಯಂಬುಲನ್ಸ್ ಹಸ್ತಾಂತರ: ಸಿದ್ದರಾಮಯ್ಯ ಕಾಲ ಸುವರ್ಣ ಅವಧಿಯದ್ದಾಗಿತ್ತು ಎಂದ ಸುನೀಲಗೌಡ ಪಾಟೀಲ

ವಿಜಯಪುರ: ಸಿದ್ದರಾಮಯ್ಯನವರ ಕಾಲದಲ್ಲಿ ರಾಜ್ಯದಲ್ಲಿ ಸುವರ್ಣ ಅವಧಿಯಾಗಿತ್ತು ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ನಡೆದ ಆ್ಯಂಬುಲನ್ಸ್ ಹಸ್ತಾಂತರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿದ್ದು, ಅಭಿವೃದ್ಧಿ ಶೆಕೆ ಆರಂಭವಾಗಲಿದೆ ಎಂದು ಅವರು ತಿಳಿಸಿದರು. ಈ ದಿನ ದೇವರ ಹಿಪ್ಪರಗಿ ಮತ್ತು ಹೂವಿನ ಹಿಪ್ಪರಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ. 7.19 ಲಕ್ಷ ವೆಚ್ಚದಲ್ಲಿ ಖರೀದಿಸಲಾದ […]