Ambedkar Mahaparinirvana: ವಿಜಯಪುರ ಜಿಲ್ಲಾ ಕ್ರೀಡಾಂಗಣ ಬಳಿ ಅಂಬೇಡ್ಕರ ಮಹಾಪರಿನಿರ್ವಾಣ ದಿನಾಚರಣೆ

ವಿಜಯಪುರ: ಭಾರತರತ್ನ, ಬೋಧಿಸತ್ವ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಪರಿನಿರ್ವಾಣ ದಿನವನ್ನು ಜಿಲ್ಲಾ ಕ್ರಿಡಾಂಗಣದಲ್ಲಿ ಆಚರಿಸಲಾಯಿತು. ಡಾ. ಅಂಬೇಡ್ಕರ್ ಪುತ್ಥಳಿಗೆ ಗಣ್ಯರು ಮಾಲಾರ್ಪಣೆ ಮಾಡಿ‌ನಮನ ಸಲ್ಲಿಸಿದರು. ವಿಜಯಪುರ ಜಿಲ್ಲಾಡಳಿತ ಮತ್ತು ರಾಜ್ಯ ಸರಕಾರಿ ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿಯ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ ಎಸ್ಟಿ ನೌಕರರ ಸಮನ್ವಯ ಸಮಿತಿಯ ವಿಜಯಪುರ ಜಿಲ್ಲಾಧ್ಯಕ್ಷ ಬಿ. ಎಚ್. ನಾಡಗಿರಿ ಮಾತನಾಡಿದರು. ಸಮಿತಿ ಸ್ಥಾಪನೆಯಾಗಿ 18 ವರ್ಷಗಳಾಗಿವೆ. ಈ ಸಂಘವು ನೌಕರರ ಪರ […]

Maha Yatnal: ಮಹಾರಾಷ್ಟ್ರದಿಂದ ದೇಶದಲ್ಲಿ ಆಶಾಂತಿ ಯತ್ನ- ರಾಜ್ಯದಲ್ಲಿ ಗುಜರಾತ್ ಮಾದರಿ ಟಿಕೆಟ್ ಹಂಚಿಕೆ ಸಾಧ್ಯತೆ- ನಟ ಚೇತನ ಹೆಸರೇದ ತೀವ್ರ ವಾಗ್ದಾಳಿ ನಡೆಸಿದ ಯತ್ನಾಳ

ವಿಜಯಪುರ: ಗಡಿ ವಿಚಾರದಲ್ಲಿ ಮಹಾರಾಷ್ಟ್ರ ದೇಶದಲ್ಲಿ ಅಶಾಂತಿ ಮೂಡಸುವ ಕಲಸ ಮಾಡುತ್ತಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿನಗೆ ಮಾತನಾಡಿದ ಅವರು, ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಇದೇ ರೀತಿಯ ಕ್ಯಾತೆ ತೆಗೆಯುತ್ತ ಬಂದಿದೆ.  ಮಹಾಜನ್ ವರದಿಯನ್ನು ಮಹಾರಾಷ್ಟ್ರ ಸರಕಾರ ಒಪ್ಪಿಲ್ಲ.  ಮಹಾಜನ್ ಆಯೋಗವನ್ನ ರಚನೆ ಮಾಡಿಸಿದವರು  ಮಹಾರಾಷ್ಟ್ರದವರು.  ನಂತರ ಮಹಾಜನ್ ಆಯೋಗದ ವರದಿಗೆ ತಕರಾರು ಮಾಡಿದರು.  ದೇಶದಲ್ಲಿ ಶಾಂತಿಯಿಂದ ಇರಬೇಕೆಂಬ ಇಚ್ಛೆ ಮಹಾರಾಷ್ಟ್ರದವರಿಗಿಲ್ಲ.  ಕರ್ನಾಟಕ ಮಹಾರಾಷ್ಟ್ರ […]

Skill Educaiton: ಮಕ್ಕಳ ಆಸಕ್ತಿಗನುಗುಣವಾಗಿ ನವೀನ, ಸಂವಹನ ಕಲಿಕಾ ಸಾಮರ್ಥ್ಯ ಹೆಚ್ಚಿಸುವ ಶಿಕ್ಷಣ ಅಗತ್ಯವಾಗಿದೆ- ಸುನೀಲಗೌಡ ಪಾಟೀಲ

ವಿಜಯಪುರ: ಮಕ್ಕಳ ಆಸಕ್ತಿಗನುಗುಣವಾಗಿ ನವೀನ ಮತ್ತು ಸಂವಹನ ಕಲಿಕಾ ಸಾಮಥ್ರ್ಯವನ್ನು ಹೆಚ್ಚಿಸುವ ಶಿಕ್ಷಣ ನೀಡಿದರೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು. ವಿಜಯಪುರ ನಗರದ ಎಸ್.ಎಸ್.ಪಿ.ಯು.ಕಾಲೇಜ ಆವರಣದ ಮಾಧ್ಯಮಿಕ ವಿಭಾಗದಲ್ಲಿ ಆರಂಭಿಸಲಾಗಿರುವ ಅಟಲ್ ಟಿಂಕರಿಂಗ್ ಪ್ರಯೋಗಾಲಯ ಉದ್ಘಾಟಿಸಿ ಅವರು ಮಾತನಾಡಿದರು. ನಿಗದಿತ ಪಠ್ಯಕ್ರಮಕ್ಕಿಂತ ವಿದ್ಯಾರ್ಥಿಗಳ ಆಸಕ್ತಿಗೆ ಪೂರಕವಾಗಿ ಶಿಕ್ಷಣ ನೀಡುವುದು ಅಗತ್ಯವಾಗಿದೆ.  ಇದಕ್ಕೆ ಅಟಲ್ ಟಿಂಕರಿಂಗ್ ಪ್ರಯೋಗಾಲಯ ಪೂರಕವಾಗಿ ಕೆಲಸ ಮಾಡುತ್ತಿವೆ.  ಇಂಥ ಲ್ಯಾಬ್‍ಗಳ ಸ್ಥಾಪನೆಯಿಂದ ಗ್ರಾಮೀಣ ಭಾಗದ […]

Youth Festival: ಗುಮ್ಮಟ ನಗರಿಯಲ್ಲಿ ಗಮನ ಸೆಳೆದ ಬಸವ ನಾಡಿನ ಯುವ ಜನೋತ್ಸವಕ್ಕೆ ಜಾವೀದ ಜಮಾದಾರ ಚಾಲನೆ- ಕುಣಿದು ಕುಪ್ಪಳಿಸಿ ಪ್ರತಿಭೆ ಪ್ರದರ್ಶಿಸಿದ ಯುವಜನತೆ

ವಿಜಯಪುರ: ಭಾರತ ಶ್ರೀಮಂತ ಸಂಸ್ಕೃತಿಯನ್ನು ಪೋಷಿಸುತ್ತಿದೆ.  ಮಾತ್ರವಲ್ಲ, ಸರ್ವರ ಮೌಲ್ಯಗಳನ್ನು ಜಗತ್ತಿಗೆ ಪ್ರಸಾರ ಮಾಡುತ್ತಿದೆ.  ಇಂಧ ಮೌಲ್ಯಾಧಾರಿತ ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಲು ಇಂದಿನ ಯುವ ಜನಾಂಗ ಹಿಂದೇಟು ಹಾಕುತ್ತಿರುವುದು ವಿಷಾಧನೀಯ ಜಾವೀದ ಜಮಾದಾರ, ಎಂದು ಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನೆ ಕೇಂದ್ರದ ಸಭಾ ಭವನದಲ್ಲಿ ನಡೆದ ಜಿಲ್ಲಾ ಯುವ ಜನೋತ್ಸವ ಕಾರ್ಯಕ್ರಮಕ್ಕೆ ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತರ ಫೆಡರೇಶನ್ನಿನ ರಾಷ್ಟ್ರೀಯ ಅಧ್ಯಕ್ಷ ಹೇಳಿದರು. ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯವಜನ ಸಬಲೀಕರಣ ಮತ್ತು ಕ್ರೀಡಾ […]