ಶಿಕ್ಷಕರ, ವಿವಿಗಳ ಸಮಸ್ಯೆ ನಿವಾರಣೆಗೆ ಅದತ್ಯೆ ನೀಡುವಂತೆ ಮಾಜಿ ಎಂಎಲ್ಸಿ ಅರುಣ ಶಹಾಪುರ ಆಗ್ರಹ

ವಿಜಯಪುರ:  ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಶಿಕ್ಷಕರ, ಶಾಲಾ-ಕಾಲೇಜುಗಳ ಮತ್ತು ವಿಶ್ವವಿದ್ಯಾಲಯಗಳ ನಾನಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ ಮಾಜಿ ಸದಸ್ಯ ಅರುಣ ಶಹಾಪುರ ಆಗ್ರಹಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆ ಕ್ರಮಗಳನ್ನು ಕೈಗೊಂಡಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ -2020 ಜಾರಿಗೊಳಿಸಿದ ಮೊದಲ ರಾಜ್ಯ ಎಂದು ಕರ್ನಾಟಕ ಹೆಗ್ಗಳಿಕೆ ಪಡೆದುಕೊಂಡಿದೆ.  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉನ್ನತ ಶಿಕ್ಷಣ ಸಚಿವ […]

ವೀರಶೈವ ಮಹಾಸಭೆ ನಿರ್ಧಾರಕ್ಕೆ ಬದ್ಧ- ವಸಂತ ಋುತು ಬಂದಾಗ ಕಾಗೆ ಯಾವುದು? ಕೋಗಿಲೆ ಯಾವುದು ಗೊತ್ತಾಗುತ್ತೆ- ವಚನಾನಂದ ಸ್ವಾಮೀಜಿ

ವಿಜಯಪುರ: ಈ ಮಧ್ಯೆ, ದಾವಣಗೆರೆಯಲ್ಲಿ ವೀರಶೈವ ಮಹಾಸಭೆ ಮೂರು ದಿನಗಳ ಕಾಲ ನಡೆಯಲಿದೆ.  ಈ ಸಭೆಯಲ್ಲಿ ಕೈಗೊಳ್ಳಲಾಗುವ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ತಿಳಿಸಿದ ವಚನಾನಂದ ಶ್ರೀಗಳು, ಮೂರನೇ ಪೀಠ ಮೂರಾಬಟ್ಟೆ ಎಂಬುದು ಯತ್ನಾಳ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದರು.  ಮಾತನಾಡುವವರ ಬಗ್ಗೆ ಏನೂ ಮಾಡಲು ಆಗುವುದಿಲ್ಲ.  ಅವರು ಮಾತಾಡುತ್ತಲೇ ಇರುತ್ತಾರೆ.  ಬೈದವರೆನ್ನ ಬಂಧುಗಳೆನ್ನೆ.  ಇದು ಬಸವ ಧರ್ಮ ಹೇಳುತ್ತದೆ.  ಎತ್ತರದಲ್ಲಿ ಇರುವುದರ ಬಗ್ಗೆ ಎಲ್ಲರೂ ಮಾತಾಡುತ್ತಾರೆ.  ನಾವು ನಮ್ಮ ಕೆಲಸ ಮಾಡುತ್ತಿರಬೇಕು ಎಂದು ವಚನಾನಂದ ಸ್ವಾಮೀಜಿ […]