Ayyappaswamy Padayatre: ಜಲನಾಯಕ ಸಿಎಂ ಆಗಲೆಂದು ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಪಾದಯಾತ್ರೆ ಹೊರಟ ಅನ್ನದಾತ

ವಿಜಯಪುರ: ಬಸವ ನಾಡಿಗೆ ನೀರಾವರಿ ಕಲ್ಪಿಸಿದ ಆಧುನಿಕ ಭಗೀರಥ ಮುಖ್ಯಮಂತ್ರಿಯಾಗಲಿ ಎಂದು ಹರಕೆ ಹೊತ್ತು ರೈತರೊಬ್ಬರು ಕೊರಳಲ್ಲಿ ಎಂ. ಬಿ. ಪಾಟೀಲರ ಭಾವಚಿತ್ರ ಹಾಕಿಕೊಂಡು ಶಬರಿಮಲೈ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಏಕಾಂಗಿಯಾಗಿ ಪಾದಯಾತ್ರೆಯಲ್ಲಿ ತೆರಳಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಾಬಾನಗರದ ರೈತ ರಾಜಕುಮಾರ ರವೀಂದ್ರ ಹೊನವಾಡ(28) ಬಾಬಾನಗರದಿಂದ ಶಬರಿಮಲೈವರೆಗೆ ಪಾದಯಾತ್ರೆ ಕೈಗೊಂಡಿದ್ದಾರೆ. 5.5 ಎಕರೆ ಹೊಲ ಹೊಂದಿರುವ ಈ ರೈತ ದ್ರಾಕ್ಷಿ ಬೆಳೆಗಾರರಾಗಿದ್ದಾರೆ. ತಮ್ಮ ಭಾಗ ಈಗ ನೀರಾವರಿಯಾಗಿದ್ದು, ಇದಕ್ಕೆಲ್ಲ ಕಾರಣರಾದ ಎಂ. ಬಿ. ಪಾಟೀಲರು […]