University Ranks: ಬಿಸಿಎ, ಬಿಎ, ಎಂ.ಕಾಂ ನಲ್ಲಿ ವಿವಿಗೆ ರ‌್ಯಾಂಕ್, ಚಿನ್ನದ ಪದಕ ಬಾಚಿದ ಬಿ ಎಲ್ ಡಿ ಇ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು

ವಿಜಯಪುರ: ನಗರದ ಬಿ.ಎಲ್.ಡಿ. ಇ. ಸಂಸ್ಥೆಯ ಶ್ರೀಮತಿ ಬಂಗಾರಮ್ಮ ಸಜ್ಜನ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಿಳಾ ಮಹಾವಿದ್ಯಾಲಯದ ಏಳು ಜನ ವಿದ್ಯಾರ್ಥಿನಿಯರು ಕ್ರಮವಾಗಿ ಬಿಸಿಎ, ಬಿಎ ಮತ್ತು ಎಂ.ಕಾಂ. ಪರೀಕ್ಷೆಗಳಲ್ಲಿ ವಿಶ್ವವಿದ್ಯಾಲಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಆಗಷ್ಟನಲ್ಲಿ ನಡೆಸಿದ ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಈ ವಿದ್ಯಾರ್ಥಿನಿಯರು ಪ್ರಥಮ, ದ್ವಿತೀಯ ಸ್ಥಾನ ಹಾಗೂ ಚಿನ್ನದ ಪದಕ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಬಿಸಿಎ […]

KUWJ Conference: ಜನೇವರಿ‌ 9, 10 ರಂದು ಬಸವ ನಾಡಿನಲ್ಲಿ ಕಾನಿಪ ರಾಜ್ಯ ಸಮ್ಮೇಳನ ಸಿಎಂ ಭಾಗಿ

ವಿಜಯಪುರ: ಕಾರ್ಯನಿರತ ಪತ್ರಕರ್ತರ ಸಂಘದ 37ನೇ ರಾಜ್ಯಮಟ್ಟದ ಸಮ್ಮೇಶನ ಜನೇವರಿ 9 ಮತ್ತು 10ರಂದು ವಿಜಯಪುರದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ ಎಂದು ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಮಾಹಿತಿ ನೀಡಿದ್ದಾರೆ ಎಂದು ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ ತಿಳಿಸಿದ್ದಾರೆ.