GP Honorarium: ಗ್ತಾ. ಪಂ. ಸದಸ್ಯರ ಮಾಸಿಕ ಗೌರವಧನ ಹೆಚ್ಚಳ‌ ತೃಪ್ತಿಕರವಾಗಿಲ್ಲ- ಸುನೀಲಗೌಡ ಪಾಟೀಲ ಆಕ್ರೋಶ

ವಿಜಯಪುರ: ರಾಜ್ಯ ಸರಕಾರ ಗ್ರಾ. ಪಂ. ಜನಪ್ರತಿನಿಧಿಗಳ‌ ಗೌರವ ಧನ‌ ಹೆಚ್ಚಳ ಮಾಡಿದೆ. ಆದರೆ, ಇದು ನಿರೀಕ್ಷಿತ ಪ್ರಮಾಣದಲ್ಲಿ ಹೆಚ್ಚಳವಾಗಿಲ್ಲ ಎಂದು ವಿಜಯಪುರ- ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ‌ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಗ್ರಾ. ಪಂ. ಜನಪ್ರತಿನಿಧಿಗಳಿಗೆ ಕೇರಳ ಮಾದರಿಯಲ್ಲಿ ಸೌಲಭ್ಯ ಒದಗಿಸಯವಂತೆ ಸದಸನ ಒಳಗೆ ಮತ್ತು ಹೊರಗೆ ಹಲವಾರು ಬಾರಿ ಧ್ವನಿ ಎತ್ತುತ್ತ ಹೋರಾಟ ನಡೆಸಿದ್ದೇನೆ. ಈಗ ರಾಜ್ಯ ಸರಕಾರ ಗೌರವ ಧನ ಹೆಚ್ಚಳ ಮಾಡಿದೆ. ಆದರೆ, ಅದು ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತಾಗಿದೆ. ‌ಈವರೆಗೆ ಗ್ರಾ. ಪಂ. ಅಧ್ಯಕ್ಷರಿಗೆ ರೂ. 3000, ಉಪಾಧ್ಯಕ್ಷರಿಗೆ ರೂ. 2000 ಮತ್ತು ಸದಸ್ಯರಿಗೆ ರೂ. 1000 ಗೌರವ ಧನ ನೀಡಲಾಗುತ್ತಿದೆ. ಈಗ ಸರಕಾರ ಅಧ್ಯಕ್ಷರಿಗೆ ರೂ.‌ 6000, ಉಪಾಧ್ಯಕ್ಷರಿಗೆ ರೂ.‌ 4000 ಮತ್ತು ಸದಸ್ಯರಿಗೆ ರೂ. 2000 ಮಾಸಿಕ ಗೌರವಧನ ಹೆಚ್ಚಳ ಮಾಡಿದೆ. ಇದು ಸರಿಯಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗೌರವ ಧನ ಹೆಚ್ಚಳ ಕುರಿತು ರಾಜ್ಯ ಸರಕಾರ ಹೊರಡಿಸಿರುವ ಆದೇಶದ ಪ್ರತಿ

ಕೇರಳ ಮಾದರಿಯಲ್ಲಿ ಗೌರವ ಧನ ಹೆಚ್ಚಿಸಲು ಒತ್ತಾಯ

ಕೇರಳ ಮಾದರಿಯಲ್ಲಿ ಅಧ್ಯಕ್ಷರಿಗೆ ರೂ. 13000, ಉಪಾಧ್ಯಕ್ಷರಿಗೆ ರೂ. 10000 ಮತ್ತು ಸದಸ್ಯರಿಗೆ ರೂ. 7000 ಮಾಸಿಕ ಗೌರವ ಧನ ನೀಡಬೇಕು. ಇಲ್ಲದಿದ್ದರೆ, ಮತ್ತೆ ಹೋರಾಟ ಮುಂದುವರೆಸುವುದಾಗಿ ಸುನೀಲೌಡ ಪಾಟೀಲ ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Leave a Reply

ಹೊಸ ಪೋಸ್ಟ್‌