2A Reservation: ಡಿ. 22 ರಂದು ಬೆಳಗಾವಿ ಸುವರ್ಣಸೌಧದ ಮುಂಭಾಗ ಮೀಸಲಾತಿಗಾಗಿ ಬೃಹತ್ ಹೋರಾಟ- ಬಸವ ನಾಡಿನಿಂದ 15000 ಪಂಚಮಸಾಲಿ ಸಮುದಾಯದ ಜನ ಭಾಗಿ

ವಿಜಯಪುರ: 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಲಿಂಗಾಯಿತ ಪಂಚಮಸಾಲಿ ಸಮುದಾಯ ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ ನೇತತ್ವದಲ್ಲಿ ಹೋರಾಟ ನಡೆಸುತ್ತಿದೆ.  ಇದರ ಮುಂದುವರೆದ ಭಾಗವಾಗಿ ಡಿ. 22 ರಂದು ನಿರ್ಣಾಯಕ ಹೋರಾಟ ನಡೆಯಲಿದೆ ಎಂದು ಪಂಚಮಸಾಲಿ ಸಮುದಾಯದ ನಾನಾ ಮುಖಂಡರು ತಿಳಿಸಿದ್ದಾರೆ. ವಿಜಯಪುರದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾರ್ಪೋರೇಟರ್ ಪ್ರೇಮಾನಂದ ಬಿರಾದಾರ, ರಾಣಿ ಚೆನ್ನಮ್ಮ ಬಳಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷೆ […]

Basaveshwar Kademani: ಸುವರ್ಣ ವಿಧಾನಸೌಧ ಸಭಾಂಗಣದಲ್ಲಿ ಅನಾವರಣಗೊಂಡ ಬಸವನಾಡಿನ ಕಲಾವಿದ ಚಿತ್ರಿಸಿದ ಭಾವಚಿತ್ರ

ವಿಜಯಪುರ: ಬೆಳಗಾವಿ ಸುವರ್ಣ ಸೌಧದಲ್ಲಿರುವ ವಿಧಾನ ಸಭೆ ಸಭಾಂಗಣದಲ್ಲಿ ದಾರ್ಶನಿಕರ ಭಾವಚಿತ್ರ ಅನಾವರಣ ಮಾಡಲಾಗಿದ್ದು, ಇವುಗಳಲ್ಲಿ ಬಸವನಾಡಿನ ಹೆಸರಾಂತ ಕಲಾವಿದರು ಚಿತ್ರಿಸಿರುವ ಭಾವಚಿತ್ರವೂ ಸೇರಿಸುವುದು ವಿಜಯಪುರ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದೆ. ವಿಜಯಪುರ ನಗರದಲ್ಲಿರುವ ಜ್ಞಾನ ಯೋಗಾಶ್ರಮ ಬಳಿ ಇರುವ ಇರುವ ಟೀಚರ್ ಕಾಲೋನಿ ನಿವಾಸಿ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಖ್ಯಾತ ಚಿತ್ರಕಲಾವಿದ ಪಿ. ಎಸ್. ಕಡೆಮನಿ ಅವರು ಚಿತ್ರಿಸಿರುವ ಬಸವಣ್ಣನವರ ಭಾವಚಿತ್ರ ಈಗ ಸುವರ್ಣ ವಿಧಾನಸೌಧದಲ್ಲಿ ರಾರಾಜಿಸುತ್ತಿದೆ. ನಡೆದಾಡುವ ದೇವರೆಂದೇ ಹೆಸರಾಗಿರುವ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ […]