ಡಿ. 30ರಂದು ಗುಮ್ಮಟ ನಗರಿಯಲ್ಲಿ ಕೃಷ್ಣಾ ಜನಾಂದೋಲನ ಸಮಾವೇಶ- ಎಂ. ಬಿ. ಪಾಟೀಲ

ವಿಜಯಪುರ: ಕೃಷ್ಣಾ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ರಾಜ್ಯ ಬಿಜೆಪಿ ಸರಕಾರ ತೋರುತ್ತಿರುವ ವಿಳಂಬ ನೀತಿಯನ್ನು ಖಂಡಿಸಿ ಹಾಗೂ ಬಿಜೆಪಿ ಸರಕಾರದ ವೈಫಲ್ಯದ ಕುರಿತು ಕೃಷ್ಣಾ ಜಲಾಂದೋಲನ ಸಮಾವೇಶ ದಿ. 30 ರಂದು ಗುಮ್ಮಟ ನಗರಿ ವಿಜಯಪುರದಲ್ಲಿ ನಡೆಯಲಿದೆ.

ಡಿ. 30ರಂದು ಶುಕ್ರವಾರ ಮ. 3ಕ್ಕೆ ವಿಜಯಪುರ ನಗರದ ದರ್ಬಾರ ಹೈಸ್ಕೂಲ್ ಮೈದಾನದಲ್ಲಿ ಈ ಸಮಾವೇಶ ನಡೆಯಲಿದೆ. ಇದರಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ, ಮಾಜಿ ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ, ಬಿ. ಕೆ. ಹರಿಪ್ರಸಾದ್, ಡಾ. ಜಿ. ಪರಮೇಶ್ವರ, ಎಚ್. ಕೆ. ಪಾಟೀಲ, ಸತೀಶ ಜಾರಕಿಹೊಳಿ ಸೇರಿದಂತೆ ರಾಷ್ಟ್ರ ಮತ್ತು ರಾಜ್ಯದ ಪ್ರಮುಖ ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ.

ಈ ಸಮಾವೇಶದಲ್ಲಿ ವಿಜಯಪುರ ಜಿಲ್ಲೆಯ ಪ್ರತಿ ಬೂತ್‍ ಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ, ಯಶಸ್ವಿ ಮಾಡಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ ವಿನಂತಿ ಮಾಡಿದ್ದಾರೆ.

Leave a Reply

ಹೊಸ ಪೋಸ್ಟ್‌