ಶ್ರೀ ಸಿದ್ಧೇಶ್ವರ ಸ್ವಾಮೀಜಿ ಭೇಟಿ ಮಾಡಿದ ಸಿಎಂ ಬೊಮ್ಮಾಯಿ, ಸಚಿವ ಪ್ರಹ್ಲಾದ ಜೋಶಿ, ಗೋವಿಂದ ಕಾರಜೋಳ- ಪ್ರಧಾನಿ್ಎ ಮಾಹಿತಿ‌‌‌ ನೀಡಿದ ನಾಯಕರು

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಜಯಪುರ ನಗರಕ್ಕೆ ಆಗಮಿಸಿದ್ದು, ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮತ್ತು ಸಚಿವ ಗೋವಿಂದ ಕಾರಜೋಳ ಅವರ ಜೊತೆ ಜ್ಞಾನಯೋಗಾಶ್ರಮಕ್ಕೆ ಆಗಮಿಸಿ ಶ್ರೀಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಸುನಾರು ಅರ್ಧ ಗಂಟೆಗಳ ಕಾಲ ಶ್ರೀಗಳ ಕೊಠಡಿಯಲ್ಲಿ ಸಿಎಂ ಮತ್ತು ಸಚಿವರು ಉಳಿದುಕೊಂಡ ಶ್ರೀಗಳ ದರ್ಶನ ಹಾಗೂ ಆಶೀರ್ವಾದ ಪಡೆದರು. ಸಿದ್ಧೇಶ್ವರ ಶ್ರೀಗಳ ದರ್ಶನ ಪಡೆದು ಬಂದ ಬಳಿಕ ಮಾತನಾಡಿದ ಸಿಎಂ […]

ಶ್ರೀ ಸಿದ್ದೇಶ್ವರ ಸ್ವಾಮೀಜಿ ಆರೋಗ್ಯದಿಂದಾರೆ- ಮ. 1ಕ್ಕೆ ಯೂಟ್ಯೂಬ್ ಚಾನೆಲ್ ಮೂಲಕ ಭಕ್ತರಿಗೆ ದರ್ಶನ ನೀಡಲಿದ್ದಾರೆ- ಜ್ಞಾನಯೋಗಾಶ್ರಮದಿಂದ ಪ್ರಕಟಣೆ

ವಿಜಯಪುರ: ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ಆರೋಗ್ಯವಾಗಿದ್ದಾರೆ ಎಂದು ವಿಜಯಪುರ ಜ್ಞಾನಯೋಗಾಶ್ರಮದಿಂದ ಪ್ರಕಟಣೆ ಹೊರಡಿಸಲಾಗಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಜ್ಞಾನಯೋಗಾಶ್ರಮದ ಅಧ್ಯಕ್ಷ ಮತ್ತು ಗುರುಗಳಾದ ಬಸವಲಿಂಗ ಸ್ವಾಮೀಜಿಗಳಿಂದ ಬೆಳಗಿನ ಪ್ರಕಟಣೆ ನೀಡಿದ್ದಾರೆ. ಜ್ಞಾನಯೋಗಾಶ್ರಮದಿಂದ ಮ. 1ಗಂಟೆಗೆ ಆಶ್ರಮದ ಯೂಟ್ಯೂಬ್  ಚಾನಲ್ ನಲ್ಲಿ ದರ್ಶನ ನೀಡಲಿದ್ದಾರೆ.  ಯಾವುದೇ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು.  ಗಾಳಿ ಸುದ್ದಿಯನ್ನು ಯಾರೂ ಹಬ್ಬಿಸಬೇಡಿ ಎಂದು ಪ್ರಕಟಣೆಯಲ್ಲಿ ಶ್ರೀಗಳು ಕೋರಿದ್ದಾರೆ. ಈ ಕೆಳಗಿನ ಲಿಂಕ್ ಗಳಲ್ಲಿ ಶ್ರೀಗಳ ದರ್ಶನ ಪಡೆಯಬಹುದು. ಎಂದು ಬಸವಲಿಂಗ ಸ್ವಾಮೀಜಿ […]

ಪಂಚಮಸಾಲಿ ಮೀಸಲಾತಿ ವಿಚಾರ: ಪರ, ವಿರೋಧ ಕುರಿತು ಯಾವುದೇ ಹೇಳಿಕೆ ನೀಡದಂತೆ ಬಿಜೆಪಿ ಹೈಕಮಾಂಡ್ ಯತ್ನಾಳ ಬಾಯಿ ಮುಚ್ಚಿಸಿದೆ- ಡಿ. ಕೆ. ಶಿವಕುಮಾರ ಆರೋಪ

ವಿಜಯಪುರ: ಪಂಚಮಸಾಲಿಗಳಿಗೆ ಮೀಸಲಾತಿ ನೀಡುವ ವಿಚಾರದಲ್ಲಿ ಏನಾದರೂ ಮಾತನಾಡಿದರೆ ಪಕ್ಷದಿಂದ ಉಚ್ಛಾಟಿಸುವುದಾಗಿ ಬಿಜೆಪಿ ಹೈಕಮಾಂಡ ಎಚ್ಚರಿಕೆ ನೀಡಿ ಅವರ ಬಾಯಿ ಮುಚ್ಚಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಆರೋಪಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರಕಾರ ಹೊರದಾಗಿ ಘೋಷಿಸಿರುವ ಮೀಸಲಾತಿ ವಿಚಾರ ಕುರಿತು ಖಾರವಾಗಿ ಪ್ರತಿಕ್ರಿಯೆ ನೀಡಿದರು. ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಬಿಜೆಪಿ ಹೈಕಮಾಂಡ್ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಬಾಯಿ ಮುಚ್ಚಿಸಿದೆ.  ಏನಾದ್ರೂ ಬಾಯಿ ತೆಗೆದರೆ ಪಾರ್ಟಿಯಿಂದ ಕಿತ್ತಾಕಿ ಬಿಡುತ್ತೇವೆ […]