ನಡೆದಾಡುವ ದೇವರು ಲಿಂಗೈಕ್ಯ- ಮಂಗಳವಾರ ಸಂಜೆ 5ಕ್ಕೆ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ- ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ವಿಜಯಪುರ: ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ಸಂತ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ತಿಳಿಸಿದ್ದಾರೆ. ವಿಜಯಪುರ ನಗರದ ಜ್ಞಾನಯೋಗಾಶ್ರಮದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಜೆ 6 ಗಂಟೆಗೆ ಶ್ರೀಗಳು ಲಿಂಗೈಕ್ಯರಾಗಿದ್ದಾರೆ.  ನಸುಕಿನ ಜಾವ 4 ಗಂಟೆಯವರೆಗೆ ಜ್ಞಾನಯೋಗಾಶ್ರಮದ ಆವರಣದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.  ನಾಳೆ ಬೆಳಿಗ್ಗೆಯಿಂದ ಮ.3ರ ವರೆಗೆ ವಿಜಯಪುರ ನಗರದ ಸೈನಿಕ ಶಾಲೆಯಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುವುದು.  ಸಂ. 5ಕ್ಕೆ […]

ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅನಾರೋಗ್ಯ ಹಿನ್ನೆಲೆ- ವಿಜಯಪುರ ಕಾನಿಪ ಸಮ್ಮೇಳನ ಮುಂದೂಡಿಕೆ

ವಿಜಯಪುರ: ನಡೆದಾಡುವ ದೇವರು ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಆರೋಗ್ಯ ಏರುಪೇರಾಗಿರುವ ಹಿನ್ನೆಲೆಯಲ್ಲಿ ಜ. 9 ಮತ್ತು 10 ರಂದು ನಗರದಲ್ಲಿ ನಡೆಯಬೇಕಿದ್ದ ಕಾರ್ಯನಿರತ ಪತ್ರಕರ್ತರ ಸಂಘದ 37ನೇ ರಾಜ್ಯ ಸಮ್ಮೇಳನವನ್ನು ಮುಂದೂಡಲಾಗಿದೆ. ಈ ಕುರಿತು ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ ಎಂದು ಕಾನಿಪ ವಿಜಯಪುರ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಪೂಜ್ಯನೀಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯ ಏರುಪೇರಾಗಿರುವ ಕಾರಣ ವಿಜಯಪುರದಲ್ಲಿ ಜನವರಿ 9 ಮತ್ತು […]

ಶ್ರೀ ಸಿದ್ಧೇಶ್ವರ ಸ್ವಾಮೀಜಿ ಆರೋಗ್ಯ ಸುಧಾರಣೆಗಾಗಿ ಭಕ್ತೆಯಿಂದ ದೀಡ ನಮಸ್ಕಾರ, ವಿದ್ಯಾರ್ಥಿಗಳಿಂದ ಸಾಮೂಹಿಕ ಪ್ರಾರ್ಥನೆ

ವಿಜಯಪುರ: ಈ ಮಧ್ಯೆ, ನಡೆದಾಡುವ ದೇವರು ಶ್ರೀ ಸಿದ್ಧೇಶ್ವರ ಸ್ವಾಮೀಜಿ ಬೇಗ ಗುಣಮುಖರಾಗಲಿ ಎಂದು ಭಕ್ತರು ನಾನಾ ರೀತಿಯಲ್ಲಿ ಹರಕೆ ಹೊತ್ತಿದ್ದಾರೆ.  ಶ್ರೀಗಳ ಆರೋಗ್ಯ ಸುಧಾರಿಸಲಿ ಎಂದು ಪ್ರಾರ್ಥಿಸಿ ಮಹಿಳಾ ಭಕ್ತರೊಬ್ಬರು 80 ಕಿ. ಮೀ. ದೀರ್ಘದಂಡ ನಮಸ್ಕಾರ ಹಾಕುತ್ತಿದ್ದಾರೆ.  ಕೊಲ್ಹಾರ ಪಟ್ಟಣದ  ಭಕ್ತೆ ಕಸ್ತೂರಿ ಬಸಪ್ಪ ಬಾಲಗೊಂಡ ಎಂಬ ಮಹಿಳೆ ಈ ದೀರ್ಘದಂಡ ನಮಸ್ಕಾರ ಕೈಗೊಂಡಿದ್ದಾರೆ.  ವಿಜಯಪುರ ಜಿಲ್ಲೆಯ ಕೊಲ್ಹಾರದಿಂದ ಬಾಗಲಕೋಟೆ ಜಿಲ್ಲೆಯ ಸುಕ್ಷೇತ್ರ ಬಾದಾಮಿ ಬನಶಂಕರಿ ದೇವಸ್ಥಾನದವರೆಗೂ ದೀರ್ಘದಂಡ ನಮಸ್ಕಾರ ಹಾಕುತ್ತಿರುವ ಕಸ್ತೂರಿ ಬಾಲಗೊಂಡ, […]

ನಮ್ಮ ಮಧ್ಯೆ ಇರುವ ಅನೇಕ ಸಂತರಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಪರೂಪದ ಸಂತ- ಎಸ್. ಸಿದ್ಧರಾಮಯ್ಯ

ವಿಜಯಪುರ: ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ಬಸವನಾಡು ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯ ವಿಚಾರಿಸಲು ವಿಧಾನ ಸಭೆ ಪ್ರತಿಪಕ್ಷದ ನಾಯಕ ಎಸ್. ಸಿದ್ಧರಾಮಯ್ಯ ವಿಜಯಪುರಕ್ಕೆ ಭೇಟಿ ನೀಡಿದ್ದಾರೆ. ಬೆಂಗಳೂರಿನಿಂದ ವಿಜಯಪುರಕ್ಕೆ ವಿಶೇಷ ಹೆಲಿಕಾಪ್ಟರ್ ಮೂಲಕ ವಿಧಾನ ಪರಿಷತ ಪ್ರತಿಪಕ್ಷದ ಸಚೇತಕ ಪ್ರಕಾಶ ರಾಠೋಡ ಅವರ ಜೊತೆ ಆಗಮಿಸಿದ ಎಸ್. ಸಿದ್ಧರಾಮಯ್ಯ ಅವರನ್ನು ನಗರದ ಸೈನಿಕ ಶಾಲೆಯಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು ಬರಮಾಡಿಕೊಂಡರು.  ಹೆಲಿಪ್ಯಾಡ್ ನಿಂದ ಜ್ಞಾನಯೋಗಾಶ್ರಮಕ್ಕೆ ಆಗಮಿಸಿದ ಅವರು, ಹೆಲಿಕಾಪ್ಟರ್ ಮೂಲಕ ಆಗಮಿಸಿದ […]