ಅಂತಿಮ ಮತದಾರರ ಪಟ್ಟಿ ಪ್ರಕಟ: ಮತದಾರರು ಒಂದು ಸಲ ಪಟ್ಟಿ ಚೆಕ್ ಮಾಡಿಕೊಳ್ಳಿ- ಡಿಸಿ ಡಾ. ದಾನಮ್ಮನವರ

ವಿಜಯಪುರ: ಜಿಲ್ಲೆಯ ಎಲ್ಲ ಎಂಟು ವಿಧಾನ ಸಭೆ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿಯನ್ನು ಜನೇವರಿ 5 ರಂದು ಗುರುವಾರ ಪ್ರಕಟಿಸಲಾಗಿದ್ದು, ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ 939813 ಪುರುಷ, 898405 ಮಹಿಳಾ ಮತ್ತು 234 ಇತರೆ ಮತದಾರರು ಸೇರಿದಂತೆ ಒಟ್ಟು 1838452 ಮತದಾರರಿದ್ದಾರೆ.  ಅಂತಿಮ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಮತದಾರರು ಪರಿಶೀಲಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ತಿಳಿಸಿದ್ದಾರೆ.  ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲೆಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, […]

ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನೆ ಕೇಂದ್ರದಲ್ಲಿ ನಮ್ಮ ದೇವರು ಪರಮಪೂಜ್ಯ ಸಿದ್ದೇಶ್ವರ ಸ್ವಾಮೀಜಿ ಸ್ಮರಣೆ ಕಾರ್ಯಕ್ರಮ

ವಿಜಯಪುರ: ಲಿಂ. ಸಿದ್ಧೇಶ್ವರ ಸ್ವಾಮೀಜಿ ಸಪ್ತಭಾಷಾ ಪ್ರವೀಣರಾಗಿದ್ದು, ಜಗತ್ತಿನ ದಾರ್ಶನಿಕರ ತತ್ವಾದರ್ಶಗಳನ್ನು ಭಕ್ತರಿಗೆ ಸರಳ ಭಾಷೆಯಲ್ಲಿ ತಿಳಿಯುವಂತೆ ಪ್ರವಚನಗಳ ಮೂಲಕ ಆಶೀರ್ವಚನ ನೀಡುತ್ತಿದ್ದರು ಎಂದು ಮಕ್ಕಳ ಸಾಹಿತಿ ಜಂಬುನಾಥ ಕಂಚ್ಯಾಣಿ ಹೇಳಿದರು. ವಿಜಯಪುರ ನಗರದಲ್ಲಿರುವ ಬಿ ಎಲ್ ಡಿ ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನೆ ಕೇಂದ್ರದಲ್ಲಿ ನಡೆದ ನಮ್ಮ ದೇವರು ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಸ್ಮರಣೆ ನುಡಿ ನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕನ್ನಡ, ಇಂಗ್ಲಿಷ್, ಹಿಂದಿ, ಮರಾಠಿ, ಸಂಸ್ಕೃತ […]

ಲಿಂ. ಸ್ವಾಮಿ ಸಿದ್ಧೇಶ್ವರ ಚಿತಾಭಸ್ಮ ಸಂಗ್ರಹ- ರವಿವಾರ ಸುಕ್ಷೇತ್ರ ಕೂಡಲ ಸಂಗಮ, ಗೋಕರ್ಣದಲ್ಲಿ ಅಸ್ತಿ ವಿಸರ್ಜನೆ- ಬಸವಲಿಂಗ ಸ್ವಾಮೀಜಿ

ವಿಜಯಪುರ: ಸೋಮವಾರ ಜನೇವರಿ 2 ರಂದು ವೈಕುಂಠ ಏಕಾದಶಿ ದಿನ ಲಿಂಗೈಕ್ಯರಾದ ಬಸವನಾಡಿನ ನಡೆದಾಡಿದ ದೇವರ ಚಿತಾಭಸ್ಮವನ್ನು ಜ್ಞಾನಯೋಗಾಶ್ರಮದ ಸ್ವಾಮೀಜಿಗಳು ಸಂಗ್ರಿಸಿದ್ದಾರೆ.  ಜ. 3 ರಂದು ರಾತ್ರಿ ಶ್ರೀಗಳ ಅಂತ್ಯಕ್ರಿಯೆ ನಡೆಸಲಾಗಿತ್ತು.  ಅಂತ್ಯಕ್ರಿಯೆ ನಡೆಸಿ ಮೂರು ದಿನಗಳಾದ ಹಿನ್ನೆಲೆಯಲ್ಲಿ ಜ್ಞಾನಯೋಗಾಶ್ರಮದಲ್ಲಿ ಬಸವಲಿಂಗ ಸ್ವಾಮೀಜಿ ನೇತೃತ್ವದಲ್ಲಿ ನಾನಾ ಸ್ವಾಮೀಜಿ ಲಿಂ. ಸ್ವಾಮಿ ಸಿದ್ಧೇಶ್ವರ ಅವರ ಚಿತಾಭಸ್ಮ ಸಂಗ್ರಹಿಸಿದರು. ಮಣ್ಣಿನ ಮಡಿಕೆಗಳು ಸೇರಿದಂತೆ ಒಟ್ಟು ಏಳು ನಾನಾ ಪಾತ್ರೆಗಳಲ್ಲಿ ಚಿತಾಭಸ್ಮವನ್ನು ಸಂಗ್ರಹಿಸಿದ ಸ್ವಾಮೀಜಿಗಳು ಆ ಪಾತ್ರೆಗಳ ಮೇಲ್ಭಾಗದಲ್ಲಿ ಕೇಸರಿ ಬಣ್ಣದ ಬಟ್ಟೆಯನ್ನು […]