ಕನಮಡಿ, ಬಾಬಾನಗರ, ತಿಕೋಟಾಗಳಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ- ಲಿಂ. ಸಿದ್ದೇಶ್ವರ ಸ್ವಾಮೀಜಿ ಜಿ ಸ್ಮರಿಸಿದ ಸುನೀಲಗೌಡ ಪಾಟೀಲ

ವಿಜಯಪುರ: ಲಿಂ. ಸಿದ್ಧೇಶ್ವರ ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ಅವರ ಆಶಯದಂತೆ ನೀರಾವರಿ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಕನಮಡಿ, ಬಾಬಾನಗರ ಮತ್ತು ತಿಕೋಟಾ ಪಟ್ಟಣದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಬಾಬಾನಗರದಲ್ಲಿ ಪಿ ಆರ್ ಇ ಡಿ ಇಲಾಖೆ ವತಿಯಿಂದ ರೂ. 2 ಕೋ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಬಾಬಾನಗರ- ಹೊನವಾಡ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ […]

ಮೊಸರ ನಾಡು ಕೋಲ್ಹಾರ ತಾಲೂಕು ಕಚೇರಿಗೆ ಡಿಸಿ ಡಾ. ದಾನಮ್ಮನವರ ಭೇಟಿ- ನಾನಾ ಕೆಲಸ ಕಾರ್ಯಗಳ ಪರಿಶೀಲನೆ

ವಿಜಯಪುರ: ಜಿಲ್ಲಾಧಿಕಾರಿಗಳ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಪ್ರತಿ ಮಂಗಳವಾರ ತಾಲೂಕು ಕಚೇರಿಕೆ ಭೇಟಿ ನೀಡುವ ಕಾರ್ಯಕ್ರಮದ ಅಂಗವಾಗಿ ಮೊಸರ ನಾಡು ಕೊಲ್ಹಾರಕ್ಕೆ ಭೇಟಿ ನೀಡಿ ನಾನಾ ಕೆಲಸ ಕಾರ್ಯಗಳ ಪರಿಶೀಲನೆ ನಡೆಸಿದರು.  ಮತಗಟ್ಟೆ ನಂ. 169, 171, 173, 175, 174, 176, 177 ಮತಗಟ್ಟೆಗಳನ್ನು ಪರಿಶೀಲನೆ ನಡೆಸಿ, ನೀರು, ವಿದ್ಯುತ್, ಶೌಚಾಲಯ, ಇಳಿಜಾರು(Ramp), ದುರಸ್ತಿಗಳಿದ್ದರೆ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು. ನಂತರ ಕೊಲ್ಹಾರ ನಗರದ ನಗರೋತ್ಥಾನ ಯೋಜನೆಯಡಿ ರಸ್ತೆ ಕಾಮಗಾರಿ ವೀಕ್ಷಣೆ ಮಾಡಿದರು. […]

ಪ್ರಧಾನಿ ಮೋದಿ, ರಾಜ್ಯ ಸರಕಾರಕ್ಕೆ ಟ್ವೀಟ್ ಮೂಲಕ ಟಾಂಗ್ ನೀಡಿದ ಎಂ. ಬಿ. ಪಾಟೀಲ- ಯಾಕೆ ಗೊತ್ತಾ?

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಜ. 19 ರಂದು ಉದ್ಗಾಟಿಸಲಿರುವ ನಾರಾಯಣಪುರ ಎಡದಂಡೆ ಕಾಲುವೆ ವಿಸ್ತರಣೆ ನವೀಕರಣ ಹಾಗೂ ಆಧುನಿಕ ಕಾಮಗಾರಿಯ ಕುರಿತು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಜಲಸಂಪನ್ಮೂಲ ಖಾತೆ ಮಾಜಿ ಸಚಿವ ಎಂ. ಬಿ. ಪಾಟೀಲ ಟ್ವೀಟ್ ಮೂಲಕ ಟಾಂಗ್ ನೀಡಿದ್ದಾರೆ. ಸಿದ್ಧರಾಮಯ್ಯ ನೇತೃತ್ವದ ಸರಕಾರದಲ್ಲಿ ನಾನು ಜಲಸಂಪನ್ಮೂಲ ಸಚಿವನಾಗಿದ್ದ ನನ್ನ ಕನಸಿನ ಈ ಯೋಜನೆಯನ್ನು 2014ರಲ್ಲಿ ಆರಂಭಿಸಿ 2017ರಲ್ಲಿ ಪೂರ್ಣಗೊಳಿಸಿದ್ದೆ.  ಇದರ ಎರಡನೇ ಹಂತದ ಕಾಮಗಾರಿಯನ್ನು ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ಪ್ರಾರಂಭಿಸಲಾಗಿತ್ತು.  […]