ಹಿರಿಯ ವಯಸ್ಸಿನಲ್ಲಿಯೂ ಕಬ್ಬಿಣದ ಗುಂಡೆಸೆತ- ನಾನು ವೇಟ್ ಲಿಫ್ಟರ್ ಆಗಿದ್ದೆ- ಕ್ವಿಂಟಲ್ ಜೋಳ ಎತ್ತುತ್ತಿದ್ದೆ ಎಂದ ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ಕ್ರೀಡಾಸ್ಪೂರ್ತಿಯೊಂದಿದ್ದರೆ ಸಾಕು.  ಅದರಲ್ಲಿ ಪಾಲ್ಗೋಳ್ಳಲು ಮನಸ್ಸು ಹಾತೊರೆಯುತ್ತಿರುತ್ತದೆ.  ಇದಕ್ಕೆ ಸಾಕ್ಷಿ ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ. 

ವಿಜಯಪುರ ನಗರದಲ್ಲಿರುವ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ಆರಂಭವಾದ ಜಿಲ್ಲಾ ಮಟ್ಟದ ಸರಕಾರಿ ನೌಕರರ ಮೂರು ದಿನಗಳ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕ್ರೀಡಾಂಗಣದಲ್ಲಿದ್ದ ಕಬ್ಬಿಣದ ಗುಂಡನ್ನು ಕೈಗೆತ್ತಿಕೊಂಡು ಸಂಸದರು, ಬಲು ದೂರದಲ್ಲಿ ಎಸೆಯುವ ಮೂಲಕ ಶಕ್ತಿ ಪ್ರದರ್ಶಿಸಿದರು.  ಅಲ್ಲದೇ, ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದ ಉದ್ಘಾಟಿಸಿದು ಸಂಸದ ರಮೇಶ ಜಿಗಜಿಣಗಿ

ನಾನು ವೇಟ್ ಲಿಫ್ಟರ್ ಆಗಿದ್ದೆ ಎಂದ ಸಂಸದ

ಬಳಿಕ ಮಾತನಾಡಿದ ರಮೇಶ ಜಿಗಜಿಣಗಿ, ಮನುಷ್ಯನಿಗೆ ದೇಹ ಸದೃಡವಾಗಿದ್ದರೆ ಮನಸ್ಸು ಸದೃಡವಾಗಿರುತ್ತದೆ.  ಇಂದಿನ ದಿನಗಳಲ್ಲಿ ಕ್ರೀಡಾಕೂಟಕ್ಕೆ ಹೆಚ್ಚಿನ ಮಹತ್ವ ಕೊಡುವ ಕೆಲಸ ಆಗಬೇಕಿದೆ.  ಶಾಲಾ ದಿನಗಳಲ್ಲಿ ನಾನು ಕೂಡಾ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದೆ,  ತೋಟದಲ್ಲಿ ರಾಶಿ ಮಾಡಿದಾಗ ನೂರು ಕೆಜಿ ತೂಕದ ಚೀಲ ಹೊರುತ್ತಿದೆ.  ವೆಟ್ ಲಿಪ್ಟಿಂಗ್ ಆಟಗಾರನಾಗಿದ್ದೆ.  ಮೂರು ದಿನ ನಡೆಯುವ ಈ ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಭಾಗವಹಿಸಿ ಎಂದು ಶುಭ ಹಾರೈಸಿದರು.

ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮಾತನಾಡಿ, ಒಳ್ಳೆಯ ಕಾರ್ಯ ಮಾಡಬೇಕಾದರೆ ಉತ್ತಮ ಆರೋಗ್ಯ ಮುಖ್ಯವಾಗಿದೆ ಎಂದು ಹೇಳಿದರು.

ಒತ್ತಡದ ಕರ್ತವ್ಯದ ಮದ್ಯದಲ್ಲೂ ನಮಗಾಗಾಗಿ ಕೆಲವು ಸಮಯ ಮೀಸಲಿಡಬೇಕು. ಸದೃಡ ಆರೋಗ್ಯದಲ್ಲಿ ಸದೃಡ ಮನಸ್ಸು ಇದ್ದರೆ ಸಮಾಜಕ್ಕೆ ಉತ್ತಮ ಸೇವೆ ಒದಗಿಸಲು ಸಾಧ್ಯವಾಗುತ್ತದೆ. ಮನಸ್ಸು ಮತ್ತು ದೇಹ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ನಮ್ಮ ದೇಹವೇ ನಮಗೆ ಒಳ್ಳೆಯ ಗೆಳೆಯ, ಅದಕ್ಕಾಗಿ ಒಳ್ಳೆಯ ಆಹಾರ, ವ್ಯಾಯಾಮ, ನಿದ್ದೆ ಎಲ್ಲವು ಮುಖ್ಯವಾಗಿವೆ.  ಎಷ್ಟೆ ಒತ್ತಡದಲ್ಲಿದ್ದರೂ ನಮ್ಮ ಆರೋಗ್ಯ ಕಾಪಾಡಬೇಕು.

ನಮಗೆ ದೈಹಿಕ ವ್ಯಾಯಾಮ ಬಹಳ ಮುಖ್ಯ, ಯೋಗ ಎಂಬುದು ಪ್ರತಿಯೊಬ್ಬರ ಜೀವನದ ಪ್ರಮುಖ ಅಂಗ ಆಗಬೇಕು‌. ಕ್ರೀಡೆಯಲ್ಲಿ ಸೋಲು ಗೆಲುವು ಸಮನಾಗಿ ಸ್ವೀಕರಿಸಬೇಕು. ಸೋತಾಗ ಕೂಡಾ ಒಳ್ಳೆಯ ಮನಸ್ಸಿನಿಂದ ಸ್ವೀಕಾರ ಮಾಡಬೇಕು. ಈ ದಿನ ಅಷ್ಟೆ ಕ್ರೀಡೆ ಆಡುವದಾಗಬಾರದು, ಪ್ರತಿದಿನ ಅಭ್ಯಾಸ ಮಾಡಬೇಕು ಎಂದು ಅವರು ಹೇಳಿದರು.

 

ನೌಕರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶಡಶ್ಯಾಳ ಹಾಗೂ ಕಾರ್ಯದರ್ಶಿ ರಾಜಶೇಖರ ದೈವಾಡಿ ಮಾತನಾಡಿದರು.  ಕ್ರೀಡಾಕೂಟದಲ್ಲಿ ಜಿಲ್ಲೆಯ 1200 ಕ್ಕೂ ಹೆಚ್ಚು ವಿವಿಧ ಇಲಾಖೆ ನೌಕರರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಎಸ್. ಬಿ. ಸಿಂದಗಿ, ಅಬ್ದುಲ್ ಹಮೀದ ಜಹಾಗೀರದಾರ, ಎಸ್. ಎಲ್‌. ನಾಟೀಕಾರ, ರಾಷ್ಟ್ರ ಮಟ್ಟದ ಕ್ರೀಡಾ ಸಾಧಕರು, ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿ ಪುರಸ್ಕೃತ ಮಹಾವೀರ ಸಿಂಗ್ ರಜಪೂತ ಅವರನ್ನು ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ ವಾಯುವ್ಯ ಶಿಕ್ಷಕರ ಮತಕ್ಷೇತ್ರದ ವಿಧಾನ ಪರಿಷತ ಕಾಂಗ್ರೆಸ್ ಸದಸ್ಯ ಪ್ರಕಾಶ ಹುಕ್ಕೇರಿ, ಸರಕಾರಿ ನೌಕರರ ಸಂಘದ ಜಿಲ್ಲಾ ಖಜಾಂಚಿ ಜುಬೇರ ಕೇರೂರ, ಎಎಸ್ಪಿ ಶಂಕರ ಮರಿಯಾಳ, ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಸ್. ಜಿ. ಲೋಣಿ, ಪ್ರೌಢ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಣ ಶಿವರಾಜ ಬಿರಾದಾರ,  ಕ್ರೀಡಾ ಕಾರ್ಯದರ್ಶಿ ನೀಜು ಮೇಲಿನಕೇರಿ, ರಾಜ್ಯ ಪರಿಷತ್ ಸದಸ್ಯ ವಿಜಯಕುಮಾರ ಹತ್ತಿ, ಗೌರವಾಧ್ಯಕ್ಷ ವಿಶ್ವನಾಥ ಬೆಳೆನ್ನವರ, ಗಂಗಾಧರ ಜೇವೂರ,  ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತ ಜಾವೀದ ಜಮಾದಾರ, ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಬಿ. ಎಲ್‌. ವಿಜಯದಾರ, ಎಸ್.ಆರ್.ಕಟ್ಟಿಮನಿ, ಎಸ್ಸಿ ಎಸ್ಟಿ ದೌರ್ಜನ್ಯ ಸಲಹಾ ಸಮಿತಿ ಸದಸ್ಯ ಅಡಿವೆಪ್ಪ ಸಾಲಗಲ, ನ್ಯಾಯವಾದಿ ನಾಗರಾಜ ಲಂಬು, ಭೀಮಸೇನ ಕೊಕರೆ, ಬಸವರಾಜ ಗೊಳಸಂಗಿ, ರಾಚಪ್ಪ ಬಿರಾದಾರ, ಪ್ರಶಾಂತ ಹಜೇರಿ, ದಾದಾಸಾಹೇಬ ಬಾಗಾಯತ, ಶಿವಾನಂದ ಮಂಗನವರ, ಅಶೋಕ ಬೂದಿಹಾಳ, ಅಶೋಕ ತೆಲ್ಲೂರ, ಬಸವರಾಜ ಮಜ್ಜಗಿ, ರವಿ ಬಿರಾದಾರ ಹಾಗೂ ಜಿಲ್ಲೆಯ ಎಲ್ಲ ತಾಲ್ಲೂಕಿನ ನೌಕರರ ಸಂಘದ ಅದ್ಯಕ್ಷರುಗಳು ಉಪಸ್ಥಿತರಿದ್ದರು.

 

Leave a Reply

ಹೊಸ ಪೋಸ್ಟ್‌