ನಾಗಠಾಣ ಮತಕ್ಷೇತ್ರದ ವಾ. ಸಂ. 12ರಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ, ಸದಸ್ಯತ್ಯವ ಅಭಿಯಾನಕ್ಕೆ ಜೆ. ಪಿ. ನಡ್ಡಾ ಚಾಲನೆ

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲಾ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ವಿಜಯಪುರ ನಗರದ ವಾರ್ಡ ಸಂಖ್ಯೆ 12ರಲ್ಲಿ ಬಿಜೆಪಿ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ್ದಾರೆ.

ವಿಜಯಪುರ ನಗರದ ಬಿ ಎಲ್ ಡಿ ಇ ಎಂಜಿನಿಯಿರಂಗ್ ಕಾಲೇಜಿನ ಎದುರ ಇರುವ ಮೈದಾನದಲ್ಲಿ ವೇದಿಕೆಯಲ್ಲಿ ಸಂಸದ ರಮೇಶ ಜಿಗಜಿಮಗಿ ಅವರ ಮೊಬೈಲಿನಿಂದ ಮಿಸ್ಡ್‌ಕಾಲ್ ನೀಡುವ ಮೂಲಕ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದರು.

ಮೊಬೈಲಿನಿಂದ ಮಿಸ್ ಕಾಲ್ ನೀಡುವ ಮೂಲಕ ಜೆ. ಪಿ. ನಡ್ಡಾ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದರು

ಈ ಸಂದರ್ಭದಲ್ಲಿ ಸಚಿವ ಗೋವಿಂದ ಕಾರಜೋಳ ಪುತ್ರ ಗೋಪಾಲ ಗೋವಿಂದ ಕಾರಜೋಳ ಮತ್ತು ಕರ್ನಾಟಕ ಸಾವಯವ ಬೀಜ ಪ್ರಮಾಣನ ಸಂಸ್ಥೆಯ ಅಧ್ಯಕ್ಷ ವಿಜುಗೌಡ ಪಾಟೀಲ ಅವರು ಜೆ. ಪಿ. ನಡ್ಡಾ ಅವರನ್ನು ಸನ್ಮಾನಿಸಿದರು.

ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಸಚಿವ ಡಾ. ಸಿ. ಎನ್. ಅಶ್ವತ್ಥನಾರಾಯಣ, ಸಂಸದ ರಮೇಶ ಜಿಗಜಿಣಗಿ, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಬಿಜೆಪಿ ಮುಖಂಡರಾದ ಆರ್. ಎಸ್. ಪಾಟೀಲ ಕೂಚಬಾಳ, ಗೋಪಾಲ ಗೋವಿಂದ ಕಾರಜೋಳ, ಉಮೇಶ ಕಾರಜೋಳ, ಪ್ರಕಾಶ ಅಕ್ಕಲಕೋಟ, ಬಿಜೆಪಿ ಮುಖಂಡರಾದ ಮಲ್ಲಿಕಾರ್ಜುನ ಜೋಗೂರ ಸೇರಿದಂತೆ ನಾನಾ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌