ಆಶ್ರಯ ಮನೆಗಳ ಹಂಚಿಕೆ ಪತ್ರ ವಿತರಣಿ- ಅಂಬೇಡ್ಕರರ ಸಮಾನತೆ ಕನಸು ನನಸಾಗುತ್ತಿದೆ ಎಂದ ಯತ್ನಾಳ

ವಿಜಯಪುರ: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ಅವರು ಕಂಡ ಸ್ವಾಭಿಮಾನ, ಸಮಾನತೆ ಜೀವನದ ಕನಸು ನನಸಾಗಿಸುವ ಕೆಲಸ ವಿಜಯಪುರದಲ್ಲಿ ಆಗಿದೆ ಎಂದು ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಹೇಳಿದ್ದಾರೆ. ನಗರದ ಅಥಣಿ ರಸ್ತೆಯ ಅಲ್ ಅಮೀನ್ ಹಿಂದೆ ಇರುವ ನಮೋ ನಗರದಲ್ಲಿ ಪ್ರಧಾನ ಮಂತ್ರಿ ಅವಾಸ ಯೋಜನೆಯಡಿ ನಿರ್ಮಿಸಲಾದ ಆಶ್ರಯ ಮನೆಗಳ ಹಂಚಿಕೆ ಪತ್ರ ವಿತರಣೆ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇಲ್ಲಿ ನಿರ್ಮಿಸಲಾದ ಗುಣಮಟ್ಟದ ಮನೆಗಳನ್ನು ಅತ್ಯಂತ ಪಾರದರ್ಶಕವಾಗಿ ಚೀಟಿ […]

ಬಸವನಾಡಿನಲ್ಲಿ ಜಿಲ್ಲಾಧಿಕಾರಿಯಿಂದ ಗಣರಾಜ್ಯೋತ್ಸವ ಧ್ವಜಾರೋಹಣ- ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗೋಣ- ಡಾ. ದಾನಮ್ಮನವರ

ವಿಜಯಪುರ: ಸಂವಿಧಾನದ ಆಶಯದಂತೆ ಸಂಪೂರ್ಣ ಸಮಾನತೆಯನ್ನು ಸಾಧಿಸಲು ನಾವು ನಡೆಸುತ್ತಿರುವ ಪ್ರಯತ್ನವನ್ನು ಇನ್ನಷ್ಟು ಹೆಚ್ಚಿಸಿ, ಪ್ರಜಾಪ್ರಭುತ್ವದ ಬೆನ್ನಲುಬಾಗಿರುವ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸಿ, ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗೋಣ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಹೇಳಿದರು. ಜಿಲ್ಲಾಡಳಿತದ ವತಿಯಿಂದ ನಗರದ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದ ನಂತರ ಅವರು ಮಾತನಾಡಿ, ದೇಶದ ಸಮಗ್ರತೆ ಮತ್ತು ಐಕ್ಯತೆಯನ್ನು ಕಾಪಾಡುವ ಕಾರ್ಯದಲ್ಲಿ ನಾವೆಲ್ಲರೂ […]

ಹೈಕಮಾಂಡ್ ಸೂಚನೆ ಹಿನ್ನೆಲೆ ಬಿ ಎಸ್ ವೈ ವಿರುದ್ಧ ಸಾಫ್ಟ್ ಆಗಿದ್ದೇನೆ- ಸಿಎಂ ಬದಲಾವಣೆ ಇಲ್ಲ- ಚುನಾವಣೆಗೆ ಸಾಮೂಹಿಕ ನೇತೃತ್ವ- ಯತ್ನಾಳ

ವಿಜಯಪುರ: ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಯಡಿಯೂರಪ್ಪ ವಿರುದ್ಧ ಮಾತನಾಡದೇ ಸಾಫ್ಟ್ ಆಗಿ ಇರುತ್ತೇನೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಹೇಳಿದ ಮೇಲೆ ಸಾಫ್ಟ್ ಆಗಲೇ ಬೇಕಲ್ವಾ? ಎಲ್ಲದಕ್ಕೂ ಗುರ್ ಎನ್ನಲು ಬರುತ್ತಾ? ಕಾಂಪ್ರೈಮೈಸ್ ಎನ್ನಲು ಅವರ ಆಸ್ತಿ ನಾನು ಕಸಿದುಕೊಂಡಿಲ್ಲ.  ಏನೋ ರಾಜಕೀಯ ಸಂಘರ್ಷಗಳಿುತ್ತವೆ.  ಈಗ ಅವೆಲ್ಲದಕ್ಕೂ ವಿರಾಮ ಹೇಳಿದ್ದೇನೆ.  ಮಾಧ್ಯಮದವರೂ ಇನ್ನು ಮುಂದೆ ಯಡಿಯೂರಪ್ಪ ಅವರ ಬಗ್ಗೆ ಯಾವುದೇ ಪ್ರಶ್ನೆ […]