ರಶ್ಮಿ ಪಾಟೀಲ ವಿಜಯಪುರ ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ನೇಮಕ

ವಿಜಯಪುರ: ವಿಜಯಪುರ ಜಿಲ್ಲಾ ಜೆಡಿಎಸ್ ಮಹಿಳಾ ಘಟಕದ ನೂತನ ಅಧ್ಯಕ್ಷರನ್ನಾಗಿ ಪತ್ರಕರ್ತೆ ರಶ್ಮಿ ಪಾಟೀಲ ಅವರನ್ನು ನೇಮಕ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಅವರ ಆದೇಶದ ಹಿನ್ನೆಲೆಯಲ್ಲಿ ಈ ನೇಮಕ ಮಾಡಲಾಗಿದೆ ಎಂದು ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಡಾ. ಲೀಲಾದೇವಿ ಆರ್. ಪ್ರಸಾದ್ ಅವರು ನೇಮಕಾತಿ ಪತ್ರದಲ್ಲಿ ಮಾಹಿತಿ ನೀಡಿದ್ದಾರೆ.

ಸ್ವಪ್ನಾ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆಯ ಮುಖ್ಯಸ್ಥೆ ಸುಜಾತಾ ಶಿ. ರೇಶ್ಮಿ ಅವರಿಗೆ ರೋಟರಿ ಕ್ಲಬ್ ವತಿಯಿಂದ ಸನ್ಮಾನ

ವಿಜಯಪುರ: ಕಳೆದ ಸುಮಾರು ಒಂದು ದಶಕಕ್ಕಿಂತಲೂ ಹೆಚ್ಚು ಕಾಲದಿಂದ ಕಿವುಡ ಮತ್ತು ಮೂಕ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ನಗರದ ಸ್ವಪ್ನಾ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆಯ ಸೇವೆಯನ್ನು ಪರಿಗಣಿಸಿ ರೋಟರಿ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು. ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಸ್ಥೆ ಸುಜಾತಾ ಶಿ. ರೇಶ್ಮಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ರುದ್ರಗೌಡ ಪಾಟೀಲ, ಮುಖಂಡರಾದ ಚಂದ್ರಶೇಖರ ಸಿಂಧೂರ, ಜಿ. ಎಸ್. ಕುಲಕರ್ಣಿ, ಆನಂದ ಗುಜರಿ, ರಾಜೇಂದ್ರ ಜೋಶಿ […]

ಶಾಸಕ, ವಿಪ ಸದಸ್ಯರ ಭಾವಚಿತ್ರವಿರುವ ಹಿಟ್ಟಿನ ಗಿರಣಿ ಹಂಚಿಕೆ- ಇದಕ್ಕೂ ನಮಗೂ ಸಂಬಂಧವಿಲ್ಲ- ಸ್ಪಷ್ಟನೆ ನೀಡಿದ ಶಾಸಕರ ಕಚೇರಿ

ವಿಜಯಪುರ: ಬಬಲೇಶ್ವರ ಮತಕ್ಷೇತ್ರದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಮತ್ತು ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಭಾವಚಿತ್ರವಿರುವ ಹಿಟ್ಟಿನ ಗಿರಣಿಗಳನ್ನು ಹಂಚುತ್ತಿರುವುದು ಬೆಳಕಿಗೆ ಬಂದಿದೆ‌.   ಈ ಹಿನ್ನೆಲೆಯಲ್ಲಿ ಶಾಸಕರ ಕಚೇರಿ ಸ್ಪಷ್ಟೀಕರಣದ ಪ್ರಕಟಣೆ ನೀಡಿದೆ. ಆತ್ಮೀಯರೇ, ತಮಗೆಲ್ಲರಿಗೂ ಈ ಮೂಲಕ ತಿಳಿಸುವುದೇನೆಂದರೆ ಬಬಲೇಶ್ವರ ಮತಕ್ಷೇತ್ರ ವ್ಯಾಪ್ತಿಯಲ್ಲಿ ಶ್ರೀ. ಎಂ. ಬಿ. ಪಾಟೀಲ ಸಾಹೇಬರು ಮತ್ತು ಸುನೀಲಗೌಡ ಪಾಟೀಲ ಸಾಹೇಬರ ಭಾವಚಿತ್ರ ಇರುವ ಹಿಟ್ಟಿನ ಗಿರಣಿಗಳನ್ನು ವೈಯಕ್ತಿಕವಾಗಿ ಕೆಲವರು ನೀಡುತ್ತಿದ್ದ, ಇದಕ್ಕೆ […]