ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ಭೀಮಸೇನ ಕೋಕರೆ ನೇತೃತ್ವದಲ್ಲಿ ರಾಜ್ಯ ನಿಯೋಗದಿಂದ ಸಿಎಂ ಬೊಮ್ಮಾಯಿ ಭೇಟಿ- ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಆಗ್ರಹ

ಬೆಂಗಳೂರು: ಭಾರತೀಯ ಕಿಸಾನ್ ಸಂಘದ(ಬಿ ಎಸ್ ಕೆ) ರಾಜ್ಯಾಧ್ಯಕ್ಷ ಭೀಮಸೇನ ಎಂ. ಕೋಕರೆ ನೇತೃತ್ವದ ರಾಜ್ಯ ನಿಯೋಗ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದೆ.

ಈಗಾಗಲೇ ರೈತರಿಗಾಗಿ ರೂಪಿಸಲಾಗಿರುವ ನೀರಾವರಿ ಮತ್ತು ಕೃಷಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಬೇಕು.  ಅಲ್ಲದೇ, ಸಂಪುಟದಲ್ಲಿ ಅನುಮೋದನೆಯಾಗಿರುವ ಯೋಜನೆಗಳ ಜಾರಿಗೆ ತ್ವರಿತವಾಗಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿಗಳಿಗೆ ಚಾಲನೆ ನೀಡಬೇಕು ಎಂದು ಈ ನಿಯೋಗ ಮುಖ್ಯಮಂತ್ರಿಗಳನ್ನು ಒತ್ತಾಯಿಸಿತು.

ಭಾರತೀಯ ಕಿಸಾನ್ ಸಂಘದ ರಾಜ್ಯಾಧ್ಯಕ್ಷ ಭೀಮಸೇನ ಎಂ. ಕೋಕರೆ ನೇತೃತ್ವದ ನಿಯೋಗ ಸಿಎಂ ಬೊಮ್ಮಾಯಿ ಭೇಟಿ ಮಾಡಿ ಮನವಿ ಸಲ್ಲಿಸಿತು

ನಿಯೋಗದ ಮನವಿಗೆ ಸ್ಪಂದಿಸಿದ ಬಸವರಾಜ ಬೊಮ್ಮಾಯಿ, ಈ ನಿಟ್ಟಿನಲ್ಲಿ ಕೂಡಲೇ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬಿ ಎಸ್ ಕೆ ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರುನಾಥ ಬಗಲಿ, ರಾಷ್ಟ್ರೀಯ ಕಾರ್ಯದರ್ಶಿ ವೀಣಾ ಸತೀಶ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌