ಕರ್ನಾಟಕ ದ್ರಾಕ್ಷಿ ಮತ್ತು ದ್ರಾಕ್ಷಾರಸ ಮಂಡಳಿಗೆ ರೂ. 100 ಕೋ. ಅನುದಾನ- ಸಿಎಂಗೆ ಯತ್ನಾಳ ಅಭಿನಂದನೆ

ವಿಜಯಪುರ: ಬಜೆಟ್ ದಲ್ಲಿ ಕರ್ನಾಟಕ ದ್ರಾಕ್ಷಿ ಮತ್ತು ದ್ರಾಕ್ಷಿ ರಸ ಮಂಡಳಿ ಅಭಿವೃದ್ಧಿಗೆ ರೂ.100 ಕೋ.ಅನುದಾನ ಘೋಷಣೆ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ವಿಜಯಪುತ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಬಜೆಟ್ ಮಂಡನೆ ಬಳಿಕ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ಯತ್ನಾಳ ಈ ಹಿಂದೆ ಮಾಡಿದ ಮನವಿಗೆ ಮುಖ್ಯಮಂತ್ರಿ ಬಸವರಾಜ ಮೊಮ್ಮಾಯಿ ಅವರು ಸ್ಪಂದಿಸಿದ್ದಾರೆ. ಅಲ್ಲದೇ, ಬಜೆಟ್ ದಲ್ಲಿ ಕರ್ನಾಟಕ ದ್ರಾಕ್ಷಿ ಮತ್ತು ದ್ರಾಕ್ಷಾ ರಸ ಮಂಡಳಿ ಅಭಿವೃದ್ಧಿಗೆ ಮತ್ತೆ ರೂ
100 ಕೋ. ಮಂಜೂರು ಮಾಡಿರುವುದು ದ್ರಾಕ್ಷಿ ಬೆಳೆಗಾರರಿಗೆ ಸಂತಸ ತಂದಿದೆ. ದ್ರಾಕ್ಷಿ ನಾಡು ವಿಜಯಪುರ ಜಿಲ್ಲೆಯಲ್ಲಿ 75 ಸಾವಿರ ಎಕರೆಗಿಂತಲೂ ಹೆಚ್ಚು ಪ್ರದೇಶದಲ್ಲಿ ದ್ರಾಕ್ಷಿ ಬೆಳೆಯಲಾಗುತ್ತದೆ. ಆದರೆ, ಉತ್ತಮ ಮಾರುಕಟ್ಟೆ ಹಾಗೂ ಕೋಲ್ಡ್ ಸ್ಟೋರೇಜ್ ಗಳ ಸಮಸ್ಯೆಯಿಂದ ದ್ರಾಕ್ಷಿ ಬೆಳೆಗಾರರಿಗೆ ತೊಂದರೆ ಆಗುತ್ತಿತ್ತು. ಇದನ್ನು ಮನಗಂಡು ಯತ್ನಾಳ ನೇತೃತ್ವದಲ್ಲಿ ದ್ರಾಕ್ಷಿ ಬೆಳೆಗಾರರ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ದ್ರಾಕ್ಷಿ ಬೆಳೆ ಉತ್ತೇಜನಕ್ಕೆ ಕರ್ನಾಟಕ ದ್ರಾಕ್ಷಿ ಮತ್ತು ದ್ರಾಕ್ಷಿ ರಸ ಮಂಡಳಿ ಮಂಜೂರಾತಿಗೆ ಮನವಿ ಮಾಡಿತ್ತು.

ಈಗ ಸಿಎಂ ಆ ಮನವಿಗೆ ಸ್ಪಂದಿಸಿ, ರೂ. 35 ಕೋ.ಅನುದಾನ ನೀಡಿದ್ದರು. ಸುಮಾರು 141 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿರುವ ಪಾರ್ಕನ್ನು, ಆದಷ್ಟು ಶೀಘ್ರ ಮುಗಿಸಬೇಕೆಂಬ ಮಹಾದಾಸೆಯಿಂದ, ಇತ್ತೀಚೆಗೆ ವಿಜಯಪುರ ನಗರದಲ್ಲಿ ನಡೆದ ಕಾರ್ಯನಿರತ ಪತ್ರಕರ್ತರ ಸಮ್ಮೇಳನಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು, ಶಾಸಕ ಬಸನಗೌಡ ಅವರ ಮೂಲಕ ದ್ರಾಕ್ಷಿ ಬೆಳೆಗಾರರು ಬಜೆಟ್ ನಲ್ಲಿ ರೂ. 100 ಕೋ. ಅನುದಾನ ನೀಡುವಂತೆ ಮನವಿ ಮಾಡಿದ್ದರು. ಈಗ ಸಿಎಂ ಬಸವರಾಜ ಬೊಮ್ಮಾಯಿ ಅವರು ಆ ಬೇಡಿಕೆಗೂ ಸಕಾರಾತ್ಮಕ ಸ್ಪಂದಿಸುವ ಮೂಲಕ ಅನುದಾನ ಘೋಷಿಸಿದ್ದಾರೆ. ಈ ಅನುದಾನದಿಂದ ಈ ಭಾಗದ ರೈತರ ಬಹಳ ದಿನಗಳ ಕನಸು ನನಸಾಗುವ ಮೂಲಕ ದ್ರಾಕ್ಷಿ ಬೆಳೆಗೆ ಉತ್ತಮ ಬೆಲೆ ದೊರೆಯುತ್ತದೆ. ಅಂತಾರಾಷ್ಟ್ರೀಯ ಮಟ್ಟದ ಮಾರುಕಟ್ಟೆಯಾಗಿ ಹೊರಹೊಮ್ಮಲಿದೆ. ಜಿಲ್ಲೆಯ ಅಭಿವೃದ್ಧಿ ಸಹ ಪೂರಕವಾಗಲಿದೆ. ಈ ಮಹತ್ತರ ಕಾರ್ಯಕ್ಕೆ ಕಾರಣಿಕರ್ತರಾದ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಎಂದು ಕರ್ನಾಟಕ ರಾಜ್ಯ ದ್ರಾಕ್ಷಿ ಬೆಳೆಗಾರರ ಸಂಘದ ಸದಸ್ಯ ಎಂ.ಎಸ್.ರುದ್ರಗೌಡರ ತಿಳಿಸಿದ್ದಾರೆ.

Leave a Reply

ಹೊಸ ಪೋಸ್ಟ್‌