ಬಜೆಟ್ ನಲ್ಲಿ ಬಸವನಾಡಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ ಕೊಡುಗೆಗಳೇನು ಗೊತ್ತಾ?

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವ ಬಜೆಟ್ ನಲ್ಲಿ ವಿಜಯಪುರ ಜಿಲ್ಲೆಗೂ ಕೆಲವು ಯೋಜನೆಗಳನ್ನು ನೀಡಿದ್ದಾರೆ. 

ಆ ಯೋಜನೆಗಳು ಮತ್ತು ಪ್ರಸ್ತಾಪಿಸಿರುವ ಅಂಶಗಳು ಯಾವವು ಎಂಬುದರ ಮಾಹಿತಿ ಇ್ಲಲಿವೆ.

  1. ವಿಜಯಪುರ, ಬೀದರ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ತೊಗರಿ ಬೆಳೆ ಹಾನಿಯಾಗಿರುವ ರೈತರ ಪ್ರತಿ ಹೆಕ್ಟೇರ್ ಗೆ ರೂ. 10000 ದಂತೆ ಒಟ್ಟು ರೂ. 223 ಕೋ. ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ.
  2. ದ್ರಾಕ್ಷಿ ಬೆಳೆಗಾರರಿಗೆ ನೆರವಾಗಲು ಕರ್ನಾಟಕ ದ್ರಾಕ್ಷಿ ಹಾಗೂ ದ್ರಾಕ್ಷಾರಸ ಮಂಡಳಿ ಮೂಲಕ ರೂ. 100 ಕೋ. ವೆಚ್ಚದಲ್ಲಿ ವಿಶೇಷ ಕಾರ್ಯಕ್ರಮಗಳ ಜಾರಿಗೆ ಕ್ರಮ.
  3. ವಿಜಯಪುರ, ಶಿವಮೊಗ್ಗ, ಹಾಸನ, ರಾಯಚೂರು ಮತ್ತು ಕಾರವಾರಗಳಲ್ಲಿ ವಿಮಾನ ನಿಲ್ದಾಣ ಯೋಜನೆಗಳನ್ನು ಈ ವರ್ಷ ಪೂರ್ಣಗೊಳಿಸಲಾಗುವುದು.
  4. ವಿಜಯಪುರ ಜಿಲ್ಲೆಯ ಹೂವಿನ ಹಿಪ್ಪರಗಿ, ಉತ್ತರ ಕನ್ನಡ ಜಿಲ್ಲೆಯ ಕೋಡ್ಕಣಿ, ಬೆಳಗಾವಿ ಜಿಲ್ಲೆಯ ಕಣಗಲಾ, ಚಾಮರಾಜನಗರದ ಬದನಗುಪ್ಪೆ, ಕಲಬುರಗಿಯ ಚಿತ್ತಾಪುರ, ತುಮಕೂರಿನ ಬೈರಗೊಂಡನಹಳ್ಳಿ- ಚಿಕ್ಕನಾಯಕನಹಳ್ಳಿ, ಬೀದರಿನ ಹುಮನಾಬಾದ, ರಾಯಚೂರು ಗ್ರಾಮಾಂತರ ಮತ್ತು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಸೇರಿದಂತೆ ರಾಜ್ಯದ ಒಂಬತ್ತು ಸ್ಥಳಗಳಲ್ಲಿ ಹೊಸದಾಗಿ ಕೈಗಾರಿಕೆ ವಸಾಹತು ಸ್ಥಾಪಿಸಲಾಗುವುದು.
  5. ಕರ್ನಾಟಕದ ಇತಿಹಾಸ ಮತ್ತು ಕಲೆಯ ಶ್ರೀಮಂತಿಕೆಯನ್ನು ಬಿಂಬಿಸುವ ವಿಜಯಪುರದ ಗೋಳಗುಮ್ಮಟ, ಹಂಪಿಯ ವಿಜಯವಿಠಲ ದೇವಾಲಯ ಮತ್ತು ಪುರಂದರ ಮಂಟಪ, ಚಿಕ್ಕಬಳ್ಳಾಪುರ ಜಿಲ್ಲೆಯ ಭೋಗನಂದೀಶ್ವರ ದೇವಾಲಯ, ಬಾದಾಮಿ ಗುಹೆಗಳು, ಕಿತ್ತೂರು ಹಾಗೂು ಬೀದರ್ ಕೋಟೆಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಈ ಸ್ಥಳಗಳಲ್ಲಿ ಅತ್ಯಾಧುನಿಕ ಬೆಳಕಿನ ವ್ಯವಸ್ಥೆ, 3D Projection Mapping, ಧ್ವನಿ ಮತ್ತು ಬೆಳಕು ಪ್ರದರ್ಶನಗಳನ್ನು ಅಳವಡಿಸಲಾಗುವುದು.  ಇದಕ್ಕಾಗಿ 2023-24ನೇ ಬಜೆಟ್ ನಲ್ಲಿ ರೂ. 60 ಕೋ. ನೀಡಲಾಗುವುದು.
  6. ರಾಜ್ಯದಲ್ಲಿನ ನಾನಾ ಸ್ಮಾರಕಗಳನ್ನು 3D ಮ್ಯಾಪಿಂಗ್ ಮತ್ತು ಲೇಸರ್ ಸ್ಕ್ಯಾನಿಂಗ್ ಮೂಲಕ ಡಿಜಿಟಲೀಕರಣ ಮಾಡುವ ಕಾರ್ಯವನ್ನು ಪೂರ್ಣಗೊಳಿಸಿದ ಮೊದಲ ರಾಜ್ಯ ಕರ್ನಾಟಕವಾಗಿದೆ. Adopt a Monument ಯೋಜನೆಯಡಿ ವಿಜಯಪುರದ ತಾಜಬಾವಡಿ ಮತ್ತು ಕೊಪ್ಪಳ ಜಿಲ್ಲೆಯ ಆನೆಗುಂದಿಯ ಗಗನ್ ಮಹಲ್ ಸ್ಮಾರಕಗಳ ಸಂರಕ್ಷಣೆಗೆ ಖಾಸಗಿ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗುತ್ತಿದೆ.
  7. ಕರ್ನಾಟಕದ ಇತಿಹಾಸ ಪ್ರಮುಖ ಘಟನಾವಳಿಗಳಲ್ಲಿ ತಾಳಿಕೋಟೆಯೂ ಸೇರಿದೆ. ಈ ಹಿನ್ನೆಲೆಯಲ್ಲಿ ರಕ್ಕಸಗಿ, ತಂಗಡಗಿ ಮತ್ತು ತಾಳಿಕೋಟೆ ಸುತ್ತಲಿನ ಐತಿಹಾಸಿಕ ಪ್ರಸಿದ್ಧ ತಾಣಗಲನ್ನು ಯುವಜನರಿಗೆ ಪರಿಚಯಿಸುವ ಉದ್ದೇಶದಿಂದ ಅಭಿವೃದ್ಧಿಪಡಿಸಲಾಗುವುದು.
  8. ಕೃಷ್ಣಾ ನದಿಯ ಜಲಾನಯನ ಪ್ರದೇಶದಲ್ಲಿ 168 ಕಿ. ಮೀ. ಅದ್ದದ ಅರಣ್ಯೀಕರಣ ಹಾಗೂ 25 ಲಕ್ಷ ಸಸಿಗಳನ್ನು ನೆಡುವ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
  9. ವಿಜಯಪುರ, ಬೀದರ, ಮಂಗಳೂರು ಮತ್ತು ಬೆಂಗಳೂರು ಕಾರಾಗೃಹಗಳ ಆವರಣದಲ್ಲಿ ಗರಿಷ್ಠ ಭದ್ರತಾ ಕಾರಾಗೃಹ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಲಲಾಗಿದೆ. ಇದರಿಂದ ಕಾರಾಗೃಹ ಸಾಮರ್ಥ್‌ಯ 4000 ರಷ್ಟು ಹೆಚ್ಚಾಗಿರುತ್ತದೆ.  ಅಲ್ಲದೇ, ರಾಜ್ಯದ ಉಳಿದ ಕಾರಾಗೃಹಗಳಲ್ಲಿಯೂ ಸಹ 1465 ಬಂದಿಗಳ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ.
  10. ವಿಜಯಪುರ, ದೇವನಹಳ್ಳಿ, ಕೋಲಾರ, ಹೊಸಪೇಟೆ, ಗದಗ, ಬಳ್ಳಾರಿ, ಬೀದರ, ಯಾದಗಿರಿ ಮತ್ತು ದಾವಣಗೆರೆಯಲ್ಲಿ ರೂ. 80 ವೆಚ್ಚದಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥಗಳ ನಿರ್ಮಾಣ ಮಾಡಲಾಗುವುದು.

ಅಷ್ಟೇ ಅಲ್ಲ, ಇತರ ಯೋಜನೆಗಳಡಿಯೂ ಬಸವನಾಡು ವಿಜಯಪುರ ಜಿಲ್ಲೆಗೆ ನಾನಾ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ.

Leave a Reply

ಹೊಸ ಪೋಸ್ಟ್‌