ಬೆಂಗಳೂರಿನಲ್ಲಿ 48ನೇ ದಿನ ಪೂರೈಸಿದ ಪಂಚಮಸಾಲಿ ಮೀಸಲಾತಿ ಹೋರಾಟ- ಶ್ರೀಗಳನ್ನು ಭೇಟಿ ಬೆಂಬಲ ಸೂಚಿಸಿದ ಸಿ. ಎಸ್. ನಾಡಗೌಡ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ನಡೆಸುತ್ತಿರುವ ಹೋರಾಟ 48ನೇ ದಿನ ಪೂರೈಸಿದೆ.  

ಈ ಮಧ್ಯೆ, ಶ್ರೀಗಳ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೋಂಡ ಮಾಜಿ ಸಚಿವ ಸಿ. ಎಸ್. ನಾಡಗೌಡ ಶ್ರೀಗಳ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.  ಅಲ್ಲದೇ, ಶ್ರೀಗಳಿಂದ ಆಶೀರ್ವಾದ ಪಡೆದರು.

ಬೆಂಗಳೂರಿನಲ್ಲಿ ಕೂಡಲ ಸಂಗಮ ಪಂಚಮಸಾಲಿ ಪೀಠದ ಜಗದ್ಗುರುಗಳು ನಡೆಸುತ್ತಿರುವ ಧರಣಿ ಸತ್ಯಾಗ್ರಹದಲ್ಲಿ ಮಾಜಿ ಸಚಿವ ಸಿ. ಎಸ್. ಪಾಟೀಲ ಪಾಲ್ಗೋಂಡರು

ಈ ಸಂದರ್ಭದಲ್ಲಿ ಪಂಚಸೇನೆಯ ರಾಜ್ಯಧ್ಯಕ್ಷ ಬಸನಗೌಡ ಪಾಟೀಲ(ನಾಗರಾಳ ಹುಲಿ), ರುದ್ರಗೌಡ ಅಂಗಡಗೇರಿ, ಸುರೇಶಗೌಡ ಪಾಟೀಲ, ನಾಗರಾಜ ತಂಗಡಗಿ, ಅವ್ವನಗೌಡ ಗ್ವಾತಗಿ, ಪ್ರಕಾಶಗೌಡ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌